LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಪ್ರಕರಣ: ಕಾರಣ ಬಹಿರಂಗ

ದಾವಣಗೆರೆ: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಘಟನೆಗೆ ನಿಖರ ಕಾರಣ ಏನೆಂಬುದು ತನಿಖೆಯಲ್ಲಿ ಬಯಲಾಗಿದೆ.

ಜೂನ್ 30 ರಂದು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವರಘಡಕ್ಕೆ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿ ಮತ್ತು ಹಾಳಾಗಿದ್ದ ಯಂತ್ರೋಪಕರಣಗಳ ಬಳಕೆಯೇ ನೇರ ಕಾರಣ ಎಂದು ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ನೇತೃತ್ವದ ತನಿಖಾ ತಂಡದ ಪ್ರಾಥಮಿಕ ವರದಿಯಲ್ಲಿ ತಿಳಿಸಿದೆ.

ಆಸ್ಪತ್ರೆಯಲ್ಲಿ ಸುಸ್ಥಿತಿಯಲ್ಲಿ ಇಲ್ಲದ ಮತ್ತು ಬಳಸಲು ಯೋಗ್ಯವಲ್ಲದ ವೈದ್ಯಕೀಯ ಯಂತ್ರೋಪಕರಣಗಳನ್ನು ಬಳಸಿದ್ದೇ ಈ ಅಗ್ನಿ ದುರಂತಕ್ಕೆ ಕಾರಣ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಂಡ ವರದಿ ನೀಡಿದೆ.

ಆಪರೇಷನ್ ರೂಮ್‌ನಲ್ಲಿದ್ದ ‘ಅರಿವಳಿಕೆ ವರ್ಕ್ ಸ್ಟೇಷನ್’ (Anesthesia Workstation) ಸೇರಿದಂತೆ ಹಲವು ಪ್ರಮುಖ ಯಂತ್ರಗಳು ಸುಸ್ಥಿತಿಯಲ್ಲಿ ಇರಲಿಲ್ಲ. ಈ ಯಂತ್ರೋಪಕರಣಗಳಿಗೆ ಅಳವಡಿಸಲಾಗಿದ್ದ ಬ್ಯಾಟರಿಗಳು ಸಂಪೂರ್ಣವಾಗಿ ಹಾಳಾಗಿದ್ದವು. ಈ ಬಗ್ಗೆ ಆಸ್ಪತ್ರೆಯ ಯಂತ್ರಗಳ ಉಸ್ತುವಾರಿ ಹೊತ್ತಿದ್ದ ಖಾಸಗಿ ಏಜೆನ್ಸಿಯು ಮೊದಲೇ ಪರಿಶೀಲನೆ ನಡೆಸಿ, ಬ್ಯಾಟರಿಗಳನ್ನು ತಕ್ಷಣವೇ ಬದಲಾಯಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿಗೆ ಲಿಖಿತ ವರದಿ ನೀಡಿತ್ತು. ಆದರೆ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದ ವೈದ್ಯರು ಹಾಗೂ ಸಿಬ್ಬಂದಿ ಅದೇ ಹಾಳಾದ ಯಂತ್ರಗಳನ್ನು ಬಳಸುವ ಮೂಲಕ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಉಪವಿಭಾಗಾಧಿಕಾರಿ ಸಂತೋಷ್‌ ಕುಮಾರ್ ಅವರು ಈ ಎಲ್ಲಾ ಅಂಶಗಳನ್ನೊಳಗೊಂಡ ಅಧಿಕೃತ ವರದಿಯನ್ನು ಶೀಘ್ರದಲ್ಲೇ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.

ಮತ್ತೊಂದೆಡೆ, ಜಿಲ್ಲಾ ಆಸ್ಪತ್ರೆಯ ಈ ಅಗ್ನಿ ಅವಘಡವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ಸಚಿವ ಯುಟಿ ಖಾದರ್, ಘಟನೆಯ ಕುರಿತು ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಚಿವರ ಆದೇಶದ ಬೆನ್ನಲ್ಲೇ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ತನಿಖಾ ತಂಡವು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಲ್ಲಿನ ಮುಖ್ಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿರುವ ಅಧಿಕಾರಿಗಳು, ಅಂದು ಕರ್ತವ್ಯದಲ್ಲಿದ್ದ ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯಿಂದ ಇಂಚಿಂಚೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಅಮರನಾಥ ಯಾತ್ರೆಯಲ್ಲಿ ಅದೃಷ್ಟವಂತರಿಗೆ ಮಾತ್ರ ‘ಬಾಬಾ ಬರ್ಫಾನಿ’ ದರ್ಶನ..! ಯಾರು ಈ ಬಾಬಾ ಬರ್ಫಾನಿ ?SIR ಸಮೀಕ್ಷೆ ವೇಳೆ ಹಠಾತ್ ಹೈಡ್ರಾಮಾ: ವೋಟರ್ ಲಿಸ್ಟ್ ಪರಿಶೀಲನೆ ನೆಪದಲ್ಲಿ ಬಿಜೆಪಿ ಪ್ರಚಾರ? ವಿಡಿಯೋ ವೈರಲ್BIG NEWS : ಕರ್ನಾಟಕದಲ್ಲಿ ಜನಗಣತಿಗೆ ಸಿದ್ಧತೆ ಆರಂಭ ; ಜಿಲ್ಲೆ, ಪಾಲಿಕೆಗಳಿಗೆ ಸರ್ಕಾರದಿಂದ ₹134.14 ಕೋಟಿ ಅನುದಾನ ಬಿಡುಗಡೆಮಂಗಳೂರಿನಲ್ಲಿ ಚಿನ್ನದ ಉದ್ಯಮಿ ದರೋಡೆ ಕೇಸ್ ಗೆ ಬಿಗ್ ಟ್ವಿಸ್ಟ್: ಮೈಮೇಲಿದ್ದ ಒಡವೆ ಗೋಜಿಗೂ ಹೋಗದೇ; ಕಾರಿನಲ್ಲಿದ್ದ ಚಿನ್ನದ ಬಿಸ್ಕೆಟ್ ಗಾಗಿ ತಡಕಾಡಿದ ಖದೀಮರು?ಆರ್.ಎಸ್.ಎಸ್ ನೋಂದಣಿ ವಿಚಾರ: ಕೋರ್ಟ್ ನಲ್ಲಿ ಪ್ರಿಯಾಂಕ್ ಖರ್ಗೆ ತಕರಾರು: ಗೃಹ ಸಚಿವರಿಗೆ ಉತ್ತರಿಸುಯೇ ಸಮನ್ಸ್ ಜಾರಿ ಮಾಡಿದ ನ್ಯಾಯಾಲಯದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಪ್ರಕರಣ: ಕಾರಣ ಬಹಿರಂಗInvestment Tips : ತಿಂಗಳಿಗೆ ₹12,500 ಉಳಿತಾಯ ಮಾಡಿದರೆ ಸಾಕು ; 24 ವರ್ಷಗಳಲ್ಲಿ ₹1 ಕೋಟಿ ಗಳಿಸಬಹುದು.!ಸತತ 3 ಪಂದ್ಯದಲ್ಲೂ ಫ್ಲಾಪ್: ಯಪ್ಪಾ ಸಾಕ್ರಪ್ಪ.. ಆತನನ್ನು ಹೊರಹಾಕಿ ವೈಭವ್ ಸೂರ್ಯವಂಶಿ ಕಣಕ್ಕಿಳಿಸಿ ಎಂದು ಕಿಡಿಕಾರಿದ ನೆಟ್ಟಿಗರು!Indian Railway Rules : ರಾತ್ರಿ ವೇಳೆ ಟಿಕೆಟ್ ಇಲ್ಲದಿದ್ರೂ ಮಹಿಳೆಯರನ್ನು ರೈಲಿನಿಂದ ಕೆಳಗಿಳಿಸಲು ಸಾಧ್ಯವಿಲ್ಲ! ಈ ರೂಲ್ಸ್ ನಿಮಗೆ ಗೊತ್ತಾ..?ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ