LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಎಸ್.ಎಸ್ ನೋಂದಣಿ ವಿಚಾರ: ಕೋರ್ಟ್ ನಲ್ಲಿ ಪ್ರಿಯಾಂಕ್ ಖರ್ಗೆ ತಕರಾರು: ಗೃಹ ಸಚಿವರಿಗೆ ಉತ್ತರಿಸುಯೇ ಸಮನ್ಸ್ ಜಾರಿ ಮಾಡಿದ ನ್ಯಾಯಾಲಯ

ಬೆಂಗಳೂರು: ಆರ್.​​ಎಸ್.​​ಎಸ್​ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್‌ನಲ್ಲೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಕರಾರು ತೆಗೆದಿದ್ದು, ಪ್ರಿಯಾಂಕ್ ತಕರಾರಿಗೆ ಉತ್ತರಿಸಿಯೇ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದೆ.

ಕೇರಳ ಹೈಕೋರ್ಟ್, ಸುಪ್ರೀಂ ತೀರ್ಪು ಪ್ರಸ್ತಾಪಿಸಿರುವ ನ್ಯಾಯಾಧೀಶ ಸಂದೀಪ್ ಪಾಟೀಲ್, ಸಂಘಟನೆಯು ನೋಂದಣಿಯಾಗಿದ್ದರೆ ಮಾತ್ರವೇ ದೂರು ದಾಖಲಿಸಬೇಕೆಂದಿಲ್ಲ. ಗುರುತಿಸಬಹುದಾದ ಗುಂಪಿಗೆ ಸೇರಿದವರಾಗಿದ್ದರೂ ದೂರು ದಾಖಲಿಸಬಹುದು ಎಂದು ತಿಳಿಸಿದೆ.

ಆರ್‌.ಎಸ್‌.ಎಸ್‌ ಚಟುವಟಿಕೆ ನಿರ್ಬಂಧಿಸುವ ಯತ್ನವೇ ಆರ್‌.ಎಸ್‌.ಎಸ್‌ ಗುರುತಿಸಬಹುದಾದ ಗುಂಪೆಂಬುದಕ್ಕೆ ನಿದರ್ಶನ. ಕೇರಳ ಹೈಕೋರ್ಟ್ ಆರ್.ಎಸ್.ಎಸ್ ಗುರುತಿಸಬಹುದಾದ ಗುಂಪೆಂದು ತೀರ್ಪು ನೀಡಿದೆ. ಇಂತಹ ಗುಂಪಿಗೆ ಸೇರಿದ ಯಾವುದೇ ವ್ಯಕ್ತಿ ದೂರನ್ನು ದಾಖಲಿಸಬಹುದು. ಸುಪ್ರೀಂಕೋರ್ಟ್ ಕೂಡ ಆರ್.ಎಸ್.ಎಸ್ ಗುರುತಿಸಬಹುದಾದ ಗುಂಪೆಂದು ತೀರ್ಪು ನೀಡಿದೆ. ಬಿಎನ್ಎಸ್ ಸೆಕ್ಷನ್‌ 2(26)ರಡಿ ನೋಂದಾಯಿತವಾಗದ ವ್ಯಕ್ತಿಗಳ ಗುಂಪಿಗೂ ಮಾನ್ಯತೆ ನೀಡಲಾಗಿದೆ. ಆರೋಪಿಗಳ ಪೋಸ್ಟ್‌ನಲ್ಲಿ ಆರ್.ಎಸ್.ಎಸ್ ಸ್ವಯಂಸೇವಕರೆಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಆರ್.ಎಸ್.ಎಸ್ ಸದಸ್ಯರು ದಾಖಲಿಸಿದ ಮಾನನಷ್ಟ ಕೇಸ್ ವಿಚಾರಣೆಗೆ ಪರಿಗಣಿಸಬಹುದು ಎಂದು ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌.ಎಸ್‌.ಎಸ್‌ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕೋರ್ಟ್​​ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿಗೆ ಆದೇಶಕ್ಕೂ ಮುನ್ನ ಪ್ರಿಯಾಂಕ್ ವಾದವನ್ನೂ ಕೋರ್ಟ್​​ ಪರಿಗಣಿಸಿತ್ತು. ಅವಹೇಳನಕಾರಿ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ಬೆಂಗಳೂರಿನ ಸಿದ್ದಾಪುರದ ಎ.ತೇಜಸ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು.

2025ರ ಅಕ್ಟೋಬರ್ 14ರಂದು ಪ್ರಿಯಾಂಕ್ ಖರ್ಗೆ ಆರ್‌.ಎಸ್‌.ಎಸ್ ಸದಸ್ಯರ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಇದೇ ರೀತಿ, ಮೊಹಮ್ಮದ್ ನಲಪಾಡ್​ ಕೂಡ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಆರ್‌.ಎಸ್‌.ಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ದೂರಲ್ಲಿ ಆರೋಪಿಸಲಾಗಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS : EPF ನಿಯಮಗಳಲ್ಲಿ ಮಹತ್ವದ ಬದಲಾವಣೆ : ವರ್ಷಕ್ಕೆ 2 ಬಾರಿ ಮಾತ್ರ ಹಣ ಹಿಂಪಡೆಯಲು ಅವಕಾಶSHOCKING : ಮೇಕೆ ಮಾಂಸದಲ್ಲಿ ಎಮ್ಮೆ ಮಾಂಸ ಬೆರೆಸಿ ಹೋಟೆಲ್ ಗಳಿಗೆ ಪೂರೈಕೆ : ವೀಡಿಯೋ ವೈರಲ್, ಐವರು ಅರೆಸ್ಟ್ |WATCH VIDEOಮಳೆ ಕೊರತೆ ; ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲನೇಕಾರರ ಸಮ್ಮಾನ್ ಯೋಜನೆಯಡಿ ಆರ್ಥಿಕ 5000 ರೂ. ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನBREAKING: ಮಕ್ಕಳ ಮೇಲೆ ಕ್ರೌರ್ಯ ಮೆರೆದಿದ್ದ ಬೇಬಿ ಕೇರ್ ಸೆಂಟರ್ ಬಂದ್ ಮಾಡಿ ಬೀಗ ಜಡಿದ ಪೊಲೀಸರುಅಮರನಾಥ ಯಾತ್ರೆಯಲ್ಲಿ ಅದೃಷ್ಟವಂತರಿಗೆ ಮಾತ್ರ ‘ಬಾಬಾ ಬರ್ಫಾನಿ’ ದರ್ಶನ..! ಯಾರು ಈ ಬಾಬಾ ಬರ್ಫಾನಿ ?SIR ಸಮೀಕ್ಷೆ ವೇಳೆ ಹಠಾತ್ ಹೈಡ್ರಾಮಾ: ವೋಟರ್ ಲಿಸ್ಟ್ ಪರಿಶೀಲನೆ ನೆಪದಲ್ಲಿ ಬಿಜೆಪಿ ಪ್ರಚಾರ? ವಿಡಿಯೋ ವೈರಲ್BIG NEWS : ಕರ್ನಾಟಕದಲ್ಲಿ ಜನಗಣತಿಗೆ ಸಿದ್ಧತೆ ಆರಂಭ ; ಜಿಲ್ಲೆ, ಪಾಲಿಕೆಗಳಿಗೆ ಸರ್ಕಾರದಿಂದ ₹134.14 ಕೋಟಿ ಅನುದಾನ ಬಿಡುಗಡೆಮಂಗಳೂರಿನಲ್ಲಿ ಚಿನ್ನದ ಉದ್ಯಮಿ ದರೋಡೆ ಕೇಸ್ ಗೆ ಬಿಗ್ ಟ್ವಿಸ್ಟ್: ಮೈಮೇಲಿದ್ದ ಒಡವೆ ಗೋಜಿಗೂ ಹೋಗದೇ; ಕಾರಿನಲ್ಲಿದ್ದ ಚಿನ್ನದ ಬಿಸ್ಕೆಟ್ ಗಾಗಿ ತಡಕಾಡಿದ ಖದೀಮರು?ಆರ್.ಎಸ್.ಎಸ್ ನೋಂದಣಿ ವಿಚಾರ: ಕೋರ್ಟ್ ನಲ್ಲಿ ಪ್ರಿಯಾಂಕ್ ಖರ್ಗೆ ತಕರಾರು: ಗೃಹ ಸಚಿವರಿಗೆ ಉತ್ತರಿಸುಯೇ ಸಮನ್ಸ್ ಜಾರಿ ಮಾಡಿದ ನ್ಯಾಯಾಲಯ