LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಕೊರತೆ ; ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ

ಶಿವಮೊಗ್ಗ : ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಜು. 05 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಜು. 05 ರಂದು ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಗಾಂಧಿನಗರ, ರವೀಂದ್ರ ನಗರ, ವೆಂಕಟೇಶ್‌ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟಿçಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‌ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿç, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ,ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾAಧಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ