LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ನೂತನವಾಗಿ ಆರಂಭವಾಗಿರುವ ಪ್ರಜಾಸೇವೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂದು ಐದು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.

ಸಿಎಂ ಡಿ.ಕೆ.ಶಿವಕುಮಾರ್ ಅವರು ಜಾರಿಗೆ ತಂದಿರುವ ಪ್ರಜಾ ಸೇವಾ ಇಲಾಖೆಯಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಅವರು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ನೀಡಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಆರ್. ರಾಗಪ್ರಿಯ ಅವರನ್ನು ಕಾರ್ಮಿಕ ಇಲಾಖೆಯ ಆಯಕ್ತರನ್ನಾಗಿ ನೇಮಿಸಲಾಗಿದೆ. ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ಗೋಪಾಲ ಕೃಷ್ಣ ಅವರನ್ನು ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ. ಇನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಎನ್. ಮಂಜುಶ್ರೀ ಅವರಿಗೆ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.

ರಾಜ್ಯ ಸರ್ಕಾರದಲ್ಲಿ ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಒಂದೇ ಸೂರಿನಡಿ ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮಹತ್ತರ ಹೆಜ್ಜೆಯಿಟ್ಟಿದೆ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಿಸಿದ್ದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಇಲಾಖೆ’ಯನ್ನು ಹೊಸದಾಗಿ ಸ್ಥಾಪಿಸಿ ಈಗ ಅಧಿಕೃತ ಆದೇಶ ಹೊರಡಿಸಲಾಗಿದೆ. ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದಂತೆ , ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಜೂನ್ 24 ರಂದು ಈ ಹೊಸ ಇಲಾಖೆಯನ್ನು ಸೃಜಿಸಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿ ಮತ್ತು ಆಡಳಿತಾತ್ಮಕ ದಕ್ಷತೆ ಹೆಚ್ಚಿಸಲು ‘ಪ್ರಜಾಸೇವಾ ಇಲಾಖೆ’ಯನ್ನು ಹೊಸದಾಗಿ ಸ್ಥಾಪಿಸಿದೆ. ಆಡಳಿತ ಸುಧಾರಣೆ, ಸಾರ್ವಜನಿಕ ಕುಂದುಕೊರತೆ ವಿಭಾಗ ಮತ್ತು ಸಕಾಲ ಮಿಷನ್ ಅನ್ನು ವಿಲೀನಗೊಳಿಸಲಾಗಿದೆ.

ಹೊಸ ಇಲಾಖೆಯ ಆಡಳಿತ ವಿನ್ಯಾಸದ ಕುರಿತು ಸ್ಪಷ್ಟ ಆದೇಶ ಹೊರಡಿಸಲಾಗಿದ್ದು , ಒಟ್ಟು 73 ಮಂಜೂರಾದ ಖಾಯಂ ಹುದ್ದೆಗಳನ್ನು ಮರುಹೊಂದಾಣಿಕೆ ಮೂಲಕ ಸೃಷ್ಟಿಸಲಾಗಿದೆ. ಇದರಲ್ಲಿ ಸರ್ಕಾರದ ಕಾರ್ಯದರ್ಶಿ ಹಾಗೂ ಮಿಷನ್ ನಿರ್ದೇಶಕರು, ಅಪರ ಮಿಷನ್ ನಿರ್ದೇಶಕರು, ಉಪ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಹುದ್ದೆಗಳು ಸೇರಿವೆ. ಇದರೊಂದಿಗೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಕೆಲಸಗಳ ನಿರ್ವಹಣೆಗಾಗಿ ಒಟ್ಟು 48 ಹುದ್ದೆಗಳನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ BLOಗಳಿಂದ ಕರ್ತವ್ಯ ಲೋಪ: ಮನೆ ಮನೆಗೆ ತೆರಳಿ ಪರಿಶೀಲಿಸುವ ಬದಲು ಸಮುದಾಯ ಭವನದಲ್ಲಿ ಜನರನ್ನು ಕೂರಿಸಿ ಗಣತಿ: ಹೆಚ್.ಡಿ.ಕೆ ಆರೋಪಬಿಜೆಪಿಯ ಮತ್ತೋರ್ವ ನಾಯಕನ ಉಚ್ಚಾಟನೆ: ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ ಅಮಾನತುBREAKING: ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಕಾರ್ಮಿಕ ಸಾವುBIG NEWS : ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಕಡ್ಡಾಯ ; ಸರ್ಕಾರದ ಮಹತ್ವದ ಆದೇಶಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ, ತುರ್ತು ಪರಿಸ್ಥಿತಿ ಯೋಜನೆ ಜಾರಿಗೊಳಿಸಿ: ಬೆಳೆಹಾನಿ ಸಮೀಕ್ಷೆ ಆರಂಭಿಸಿ: ಸಿಎಂಗೆ ಪತ್ರ ಬರೆದು ಒತ್ತಾಯಿಸಿದ ಆರ್.ಅಶೋಕ್BREAKING: ಅಕ್ರಮವಾಗಿ ಕೇರಳ ಲಾಟರಿ ಮಾರಾಟ: ಇಬ್ಬರು ಅರೆಸ್ಟ್ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ನೂತನವಾಗಿ ಆರಂಭವಾಗಿರುವ ಪ್ರಜಾಸೇವೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕಬುಡಕಟ್ಟು ಹಳ್ಳಿಯ ಕ್ರೀಡಾಪಟುವಾಗಿ ರಾಮ್ ಚರಣ್ ಅಬ್ಬರ: ಒಟಿಟಿ ಬಿಡುಗಡೆಗೆ ದಿನಗಣನೆ ಆರಂಭಿಸಿದ ‘ಪೆಡ್ಡಿ’SHOCKING : 1,454 ಅಡಿ ಎತ್ತರದಲ್ಲಿ ಪ್ರೇಮ ನಿವೇದನೆ ; ಕಿಸ್ ಮಾಡಿ ಬ್ಯಾನರ್ ಹಾರಿಸಿದ ರಷ್ಯನ್ ಜೋಡಿ ಅರೆಸ್ಟ್ | WATCH VIDEOSHOCKING : ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ; ಬಳ್ಳಾರಿಯಲ್ಲಿ ಕಾಮುಕ ಉಪನ್ಯಾಸಕ ಅರೆಸ್ಟ್.!