LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕರು ಯಾವುದೇ ನಕಲಿ ಸಂದೇಶ, ವದಂತಿಗಳಿಗೆ ಕಿವಿಗೊಡದಂತೆ ಮನವಿ

ಶಿವಮೊಗ್ಗ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಲು ವಿಶೇಷ ಸಮಗ್ರ ಪರಿಷ್ಕರಣೆ-2026ನ್ನು ದೇಶದ 13ರಾಜ್ಯಗಳಲ್ಲಿ ಆರಂಭಿಸಿದ್ದು, ಕರ್ನಾಟಕವು ಮುಂಚೂಣಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳಿಗೆ ಈ ಕುರಿತು ವಿವರ ನೀಡಿ ಮಾತನಾಡಿದ ಅವರು, ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದು. ಈ ವಿಶೇಷ ಸಮಗ್ರ ಪರಿಷ್ಕರಣೆಯ ಉದ್ದೇಶವಾಗಿದೆ. ಈ ಸಂದರ್ಭದಲ್ಲಿ ಅರ್ಹರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕು. ಗೈರು ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತರಾದವರು ಹಾಗೂ ಒಂದಕ್ಕಿಂತ ಹೆಚ್ಚು ಮತಗಟ್ಟೆಗಳಲ್ಲಿ ಮತದಾರರಾಗಿ ನೋಂದಣಿಯಾಗಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಪರಿಷ್ಕರಣೆ ಮಾಡಲಾಗುತ್ತದೆ ಎಂದರು.

ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವಿದೆ. ಈ ಪ್ರಯುಕ್ತ ಬೂತ್ ಮಟ್ಟದ ಅಧಿಕಾರಿಗಳು ಜುಲೈ 29 ರವರೆಗೆ ಮನೆಮನೆಗೆ ತೆರಳಿ ಗಣತಿ ನಮೂನೆಯನ್ನು ವಿತರಿಸಲಿದ್ದಾರೆ. ಜಿಲ್ಲೆಯಲ್ಲಿ 15,19,459 ಮತದಾರರಿದ್ದು, 1973 ಮತಗಟ್ಟೆಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಈವರೆಗೆ 575101 ನಮೂನೆಗಳನ್ನು ವಿತರಿಸಲಾಗಿದ್ದು, ಆ ಪೈಕಿ 11248ನಮೂನೆಗಳನ್ನು ಡಿಜಟಲೀಕರಿಸಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಮತದಾರರು ಗಣತಿ ನಮೂನೆಯನ್ನು ಸ್ವೀಕರಿಸಿದ ನಂತರ ಭರ್ತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ನೀಡಬೇಕು. ಗಣತಿ ನಮೂನೆಯನ್ನು ಭರ್ತಿ ಮಾಡಿ ನೀಡದೇ ಹೋದಲ್ಲಿ ಮತದಾರರ ಕರಡು ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ. ಆದ್ದರಿಂದ ಎಲ್ಲಾ ಮತದಾರರು ರೀತಿಯ ನಿರ್ಲಕ್ಷ್ಯ ಮಾಡದೇ ಮತದಾರರ ಪಟ್ಟಿಯಲ್ಲಿ ಹೆಸರು ಇರುವಂತೆ ನೋಡಿಕೊಳ್ಳಲು ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಬೇಕು. ಅದರೊಂದಿಗೆ ಮತಗಟ್ಟೆ ಏಜೆಂಟರುಗಳೂ ಸಹ ಈ ನಮೂನೆಗಳನ್ನು ಸಂಗ್ರಹಿಸಿ, ಮತಗಟ್ಟೆ ಅಧಿಕಾರಿಗಳಿಗೆ ತಲುಪಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದರು.

ಈ ಮಾಹಿತಿ ಒದಗಿಸುವ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಯಾವುದೇ ದಾಖಲೆಗಳನ್ನು ಒದಗಿಸುವ ಅಗತ್ಯವಿಲ್ಲ. ಪೂರಕ ಮಾಹಿತಿಯನ್ನು ಮತದಾರರು ಗಣತಿದಾರರಿಗೆ ನೀಡಿದಲ್ಲಿ ತಮ್ಮ ಹಿಂದಿನ ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಈಗಾಗಲೇ ಮ್ಯಾಪಿಂಗ್‌ ಮಾಡಿಟ್ಟುಕೊಂಡಿರುತ್ತಾರೆ. ಇದರಿಂದಾಗಿ ಪರಿಷ್ಕರಣೆ ಕಾರ್ಯ ಸುಗಮವಾಗಿರಲಿದೆ ಎಂದರು.

ಪ್ರತಿದಿನ ಪರಿಷ್ಕರಣೆ ಕಾರ್ಯದ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ವದಂತಿಗಳು, ಮೊಬೈಲ್‌ನಲ್ಲಿ ಹರಿದಾಡುವ ನಕಲಿ ಸಂದೇಶಗಳಿಗೆ ಕಿವಿಗೊಡದಂತೆ ಮನವಿ ಮಾಡಿರುವ ಅವರು, ಮತದಾರರಲ್ಲಿನ ಅನೇಕ ಪ್ರಶ್ನೆಗಳಿಗೆ ಮತಗಟ್ಟೆ ಅಧಿಕಾರಿಗಳಲ್ಲೇ ಸೂಕ್ತ ಮಾಹಿತಿ ದೊರೆಯಲಿದೆ. ಅಗತ್ಯವಿದ್ದಲ್ಲಿ ಟೋಲ್‌ ಫ್ರೀ ನಂ.1950ನ್ನು ಸಂಪರ್ಕಿಸಬಹುದಾಗಿದೆ ಎಂದರು.

ಮ್ಯಾಪಿಂಗ್ ಆಗದ ಮತದಾರರು ಸರ್ಕಾರ ಗುರುತಿಸಿದ 12 ದಾಖಲೆಗಳ ಪೈಕಿ ಯಾವುದಾದರೊಂದನ್ನು ಒದಗಿಸಬಹುದಾಗಿದೆ. ಮತಗಟ್ಟೆಗಳ ಪುನರ್ ವಿಂಗಡಣೆಯನ್ನು ಜುಲೈ 29 ರೊಳಗೆ ಮಾಡಲಾಗುವುದು.  ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಯಾವುದೇ ಮತದಾರರ ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 05 ರಿಂದ ಸೆಪ್ಟೆಂಬರ್ 04 ರವರೆಗೆ ಅಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಯನ್ನು ಆಗಸ್ಟ್ 5 ರಿಂದ ಅಕ್ಟೋಬರ್ 3 ರವರೆಗೆ ಇತ್ಯರ್ಥ ಪಡಿಸಲಾಗುವುದು. 2026ರ ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಚುನಾವಣಾ ತಹಶೀಲ್ದಾರ್‌ ಮಂಜುಳಾ ಹೆಗಡಾಳ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಮೊಬೈಲ್ ಆ್ಯಪ್ ಗಳಿಂದಲೇ ಇ-ರಿಕ್ಷಾ, ಇವಿಗಳಲ್ಲಿ ಬ್ಯಾಟರಿ ಸ್ಥಗಿತ: ಅಂತಹ ಅಪ್ಲಿಕೇಶನ್‌ ತೆಗೆದುಹಾಕಲು ಗೂಗಲ್, ಆಪಲ್‌ ಗೆ ಕೇಂದ್ರ ಸರ್ಕಾರ ಆದೇಶಅಯೋಧ್ಯೆ ಶ್ರೀರಾಮಮಂದಿರ ಕಳ್ಳತನದ ಬಗ್ಗೆ ಆರ್‌ಎಸ್‌ಎಸ್‌ ತೀವ್ರ ಖಂಡನೆಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕರು ಯಾವುದೇ ನಕಲಿ ಸಂದೇಶ, ವದಂತಿಗಳಿಗೆ ಕಿವಿಗೊಡದಂತೆ ಮನವಿಮಂಡ್ಯ ಜಿಲ್ಲೆಯಲ್ಲಿ ಭೂ ಅಕ್ರಮ ಪರಭಾರೆ ಬೃಹತ್ ಜಾಲ ಬಯಲು: ಕಂದಾಯ ಇಲಾಖೆಯ 8 ಅಧಿಕಾರಿಗಳು ಅರೆಸ್ಟ್ಕಾಂಗ್ರೆಸ್ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆಸಿದೆ; ಅಶೋಕ್ ಗಂಭೀರ ಆರೋಪಇನ್‌ಸ್ಟಾಗ್ರಾಮ್‌ ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಜಾಹೀರಾತು: ಮೆಟಾ ಅಧಿಕಾರಿಗಳಿಗೆ ಕೇಂದ್ರದಿಂದ ಸಮನ್ಸ್ ಜಾರಿBREAKING: ಜು. 6 ರಿಂದ ಪ್ರಧಾನಿ ಮೋದಿ 3 ದೇಶಗಳ ಪ್ರವಾಸ: ಇಂಡೋನೇಷ್ಯಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾಕ್ಕೆ ಭೇಟಿBREAKING: ಲಂಚದ ಹಣ ಹಂಚಿಕೊಳ್ಳುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳುಗೃಹಜ್ಯೋತಿ ಯೋಜನೆ ಮಾಹಿತಿ ಸಂಗ್ರಹಣೆ ವೇಳೆ ಜಾತಿ ಪ್ರವರ್ಗ ಮಾಹಿತಿ ನೀಡುವುದು ಕಡ್ಡಾಯವಲ್ಲ; ಬೆಸ್ಕಾಂ ಸ್ಪಷ್ಟನೆಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಎಸ್‌ಐಆರ್ ನಡೆಸುತ್ತಿಲ್ಲ; ಎಚ್‌ಡಿಕೆ ಕಿಡಿ