ದಾವಣಗೆರೆ: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕುಟುಂಬದ ಗೃಹಲಕ್ಷ್ಮಿ ಯಜಮಾನಿ ಮಹಿಳೆಯರು ನೋಂದಣಿ ಸೌಲಭ್ಯ ಪಡೆಯಲು, ಸೇವಾಸಿಂಧು, ಗ್ರಾಮ ಒನ್ ನಲ್ಲಿ ನೊಂದಣಿ ಮಾಡುವ ಸಂದರ್ಭದಲ್ಲಿ ಕೆಲವರು ಸೌಲಭ್ಯ ಕೊಡಿಸುವುದಾಗಿ ಆಮಿಷವೊಡ್ಡಿ ಹಣ ಪಡೆಯುತ್ತಿದ್ದಾರೆ ಎಂಬ ದೂರು ಬರುತ್ತಿದೆ.
ಮಹಿಳೆಯರು ಯಾವುದೇ ಆಮಿಷಕ್ಕೆ ಒಳಗಾಗದೆ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಇವರಿಗೆ ದೂರು ನೀಡಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.