LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆರೆಗಳ ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ

ಕೊಪ್ಪಳ: ಕೊಪ್ಪಳ, ಮತ್ತು ರಾಯಚೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ 2026-27ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಪ್ರಾದೇಶಿಕ ಆಯುಕ್ತರು, ಕಲಬುರಗಿ ವಲಯ ಕಲಬುರಗಿ ರವರು ನಿಗದಿಪಡಿಸಿದ ವೇಳಾಪಟ್ಟಿಯಂತೆ ನೀರನ್ನು ಹರಿಸಲು ನಿರ್ಧರಿಸಲಾಗಿದೆ.

ಅದರಂತೆ ಸಂಬಂಧಿಸಿದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್‌ ಗಳ ಮುಖಾಂತರ ಕೆರೆಕಟ್ಟೆಗಳಲ್ಲಿ ಕುಡಿಯುವ ಸಲುವಾಗಿ ನೀರು ಶೇಖರಣೆ ಮಾಡಲು ಹಾಗೂ ನಿಗದಿತ ಪ್ರಮಾಣದ ನೀರನ್ನು 104 ಮೈಲ್ ವರೆಗೆ ಹರಿಸಿ ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಸಮರ್ಪಕ ನೀರು ನಿರ್ವಹಣೆ ಮಾಡಬೇಕು.

ನಿಗದಿತ ವೇಳಾಪಟ್ಟಿ:

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ (0 ರಿಂದ 104 ಮೈಲ್ ವರೆಗೆ) ಗೆ ಕುಡಿಯುವ ನೀರಿಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಜುಲೈ 10ರ ಬೆಳಗ್ಗೆ 8 ಗಂಟೆ ರಿಂದ ಜುಲೈ 23 ರ ಗುರುವಾರ ರಾತ್ರಿ 8 ಗಂಟೆವರೆಗೆ 2,000 ಕ್ಯೂಸೆಕ್ಸ್ ನಂತೆ ಕುಡಿಯುವ ನೀರು ಹರಿಸಲಾಗುವುದು.

ಅದರಂತೆ, ಯರಮರಸ್ ವಿಭಾಗದಲ್ಲಿ ಜುಲೈ 13 ರಿಂದ ಜುಲೈ 16 ರವರೆಗೆ, ಸಿರವಾರ ವಿಭಾಗದಲ್ಲಿ ಜುಲೈ 17 ರಿಂದ 19 ರವರೆಗೆ, ಸಿಂಧನೂರು ವಿಭಾಗದಲ್ಲಿ ಜುಲೈ 20 ರಿಂದ 22 ರವರೆಗೆ ಮತ್ತು ವಡ್ಡರಹಟ್ಟಿ ವಿಭಾಗದಲ್ಲಿ ಜುಲೈ 22 ಮತ್ತು 23 ರಂದು  ನೀರು ಹರಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ರೈತ ಭಾಂದವರಲ್ಲಿ ಮನವಿ:

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕ ಹಿತ ದೃಷ್ಟಿಯಿಂದ ಎಲ್ಲಾ ಜನಸಾಮಾನ್ಯರಿಗೂ ಹಾಗೂ ರೈತ ಭಾಂದವರಿಗೆ ಈ ಪ್ರಕಟಣೆಯ ಮೂಲಕ ವಿನಂತಿಸುವುದೇನೆಂದರೆ, ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಜನಸಾಮಾನ್ಯರು ಅಥವಾ ರೈತರು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿರುತ್ತದೆ. ಕಾರಣ ತಾವುಗಳು ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸುವಂತೆ ಕನೀನಿನಿ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್.ಬಿ ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ರೈಲು ಮಾರ್ಗದ ಓವರ್ ಹೆಡ್ ವಿದ್ಯುತ್ ತಂತಿಯನ್ನೇ ಕದ್ದ ಕಳ್ಳರು: ರೈಲುಗಳ ಸಂಚಾರಕ್ಕೆ ಅಡ್ಡಿBREAKING: ಚೀನಾ ಶೂ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ: 28 ಮಂದಿ ಸಾವು | VIDEOಕೆರೆಗಳ ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಪರಿಷ್ಕರಣೆ ಮಾಡಲಿದ್ದೇವೆ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆಮನೆಯಲ್ಲಿ ಒಪ್ಪಲ್ಲ ಎಂದು ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಆತ್ಮಹತ್ಯೆ ಯತ್ನಮದುವೆ ನೆಪದಲ್ಲಿ ಗರ್ಭಿಣಿಯಾಗಿಸಿ ವಂಚನೆ: ದೂರು ದಾಖಲಾಗುತ್ತಿದ್ದಂತೆ ಪರಾರಿBREAKING: ಮಮತಾ ಬ್ಯಾನರ್ಜಿಗೆ ಮತ್ತೆ ಬಿಗ್ ಶಾಕ್: ಬಿಜೆಪಿ ಸೇರಿದ ಟಿಎಂಸಿಯ ಮೂವರು ಮಾಜಿ ಸಂಸದರುಹಿರಿಯೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: HDK ಸ್ಪಷ್ಟನೆಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ಕೊಡಿಸುವ ಆಮಿಷ: ದೂರು ನೀಡಿBIG NEWS: ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ , ರೈತರ ರಕ್ಷಣೆ ಬಗ್ಗೆ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ ಸಿಎಂ ಡಿ.ಕೆ.ಶಿವಕುಮಾರ್