LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ: ಐವರು ಶಂಕಿತ ಉಗ್ರರು ಅರೆಸ್ಟ್; ಟೈಮ್ ಬಾಂಬ್ ತಯಾರಿಸುವ ಸಿದ್ಧತೆ ನಡೆಸಿದ್ದ ಆರೋಪಿಗಳು

ಗಾಂಧಿನಗರ: ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರು ಶಂಕಿತ ಉಗ್ರರನ್ನು ಗುಜರಾತ್ ಉಗ್ರನಿಗ್ರಹ ದಳ (ATS) ಬಂಧಿಸಿದೆ.

ಬಂಧಿತರನ್ನು ಬಿಲಾಲ್ ಅಬಿದ್ ಶೇರಾ, ಮೊಹಮ್ಮದ್ ಆಯೂಬ್ ಖಾಡಿವಾಲ್, ಮೊಹಮ್ಮದ್ ಶಾಪಿ ಮುಖಿ, ಮೊಹಮ್ಮದ್ ಹಸನ್ ಕರಾಡಿಯಾ ಮತ್ತು ಮೊಹಮ್ಮದ್ ಆಯೂಬ್ ಸುನಾಸರಾ ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಒಬ್ಬ ಟೈಮ್ ಬಾಂಬ್ ತಯಾರಿಸುವ ಸಿದ್ಧತೆ ನಡೆಸಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಬಂಧಿತರೆಲ್ಲರೂ ಪಾಕ್ ಮೂಲದ ಜೈಶ್ ಸಂಘಟನೆಯ ಸದಸ್ಯರಾಗಿದ್ದು, ಸ್ಫೋಟಕ ಸಾಧನಗಳನ್ನು ಪರೀಕ್ಷಿಸುವ ಕೃತ್ಯದಲ್ಲಿ ತೊಡಗಿದ್ದರು ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ತಿಂಗಳ ಆರಂಭದಲ್ಲಿ ಎಟಿಎಸ್ ಈ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಿತ್ತು. ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಸಂಪರ್ಕಿಸಿ ದೇಶವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುವಂತೆ ಪ್ರೇರೇಪಿಸುತ್ತಿದ್ದರು.

ಈ ಐವರು ಶಂಕಿತರನ್ನು ಈ ಹಿಂದೆ ಬಂಧಿಸಲಾಗಿದ್ದ ಉಗ್ರ ಘಟಕದ ಸದಸ್ಯರ ವಿಚಾರಣೆ ವೇಳೆ ದೊರೆತ ಮಾಹಿತಿಯ ಆಧಾರದ ಮೇಲೆ ಪತ್ತೆಹಚ್ಚಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಈ ಪ್ರಕರಣದಲ್ಲಿ ಈ ಹಿಂದೆ ನಡೆದ ತನಿಖೆಯಲ್ಲಿ ಬಂಧಿತರಿಗೆ ಪಾಕಿಸ್ತಾನದಲ್ಲಿರುವ ಹ್ಯಾಂಡ್ಲರ್‌ಗಳಿಂದ ಹಣಕಾಸಿನ ನೆರವು ದೊರೆಯುತ್ತಿತ್ತು ಎಂಬುದು ಬಹಿರಂಗವಾಗಿತ್ತು. ಅಲ್ಲದೆ, ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಂತೆ ಹ್ಯಾಂಡ್ಲರ್‌ಗಳು ಸೂಚನೆ ನೀಡಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು. ಎಟಿಎಸ್ ಅಧಿಕಾರಿಗಳ ಪ್ರಕಾರ, ಬಂಧಿತರಲ್ಲಿ ಒಬ್ಬನಿಗೆ ಸ್ಫೋಟಕಗಳ ಕುರಿತು ಉತ್ತಮ ಜ್ಞಾನವಿದ್ದು, ಆತ ಕಾರ್ಯನಿರ್ವಹಿಸುವ ಟೈಮ್ ಬಾಂಬ್ ನಿರ್ಮಿಸುವ ಅಂತಿಮ ಹಂತದಲ್ಲಿದ್ದ. ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಎಟಿಎಸ್ ತಂಡ, ಬಾಂಬ್ ತಯಾರಿ ಸಿದ್ಧತೆ ವಿಫಲಗೊಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ