LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್‌ವುಡ್‌ನಲ್ಲಿ ಶೋಕಸಾಗರ :ಕನ್ನಡ ಸಿನಿರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಗೆ ಮತ್ತೊಂದು ಆಘಾತ ಎದುರಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ಹಾಗೂ ಜನಪ್ರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಗುರುವಾರ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿಯಾಗಿರುವ ಶೈಲಜಾ ಅವರು, ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಸೇರಿದಂತೆ ಅಪಾರ ಬಂಧು-ಮಿತ್ರರು ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಉಪೇಂದ್ರ ಸಿನಿಮಾಗಳ ಮೂಲಕ ಜನಪ್ರಿಯತೆ:

ನಟಿ ಶೈಲಜಾ ಶ್ರೀಶೈಲನ್ ಅವರು ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ವಿಶೇಷವಾಗಿ ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ನಿರ್ದೇಶನ ಹಾಗೂ ನಟನೆಯ ಸಿನಿಮಾಗಳಲ್ಲಿ ತಾಯಿ ಪಾತ್ರ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಮೂಲಕ ಅವರು ಇಡೀ ಕರ್ನಾಟಕಕ್ಕೆ ಪರಿಚಿತರಾಗಿದ್ದರು. ಉಪೇಂದ್ರ ಅವರ ಸಾರ್ವಕಾಲಿಕ ಸೂಪರ್ ಹಿಟ್ ಚಿತ್ರಗಳಾದ ಎ ಮತ್ತು ಉಪ್ಪಿ 2 ಚಿತ್ರಗಳಲ್ಲದೆ, ‘ಅನಂತನ ಅವಾಂತರ’, ಬಾರೆ ನನ್ನ ಮುದ್ದಿನ ರಾಣಿ, ಪುಟ್ಟ ಹೆಂಡ್ತಿ ಹಾಗೂ ಗೃಹಪ್ರವೇಶ ಸೇರಿದಂತೆ ಹತ್ತಾರು ಯಶಸ್ವಿ ಚಿತ್ರಗಳಲ್ಲಿ ಇವರ ನೈಜ ಅಭಿನಯ ಪ್ರೇಕ್ಷಕರ ಮನ ಗೆದ್ದಿತ್ತು.

ಬೆಳ್ಳಿಪರದೆ ಮಾತ್ರವಲ್ಲದೆ ಕಿರುತೆರೆಯಲ್ಲೂ ಅತ್ಯಂತ ಸಕ್ರಿಯರಾಗಿದ್ದ ಶೈಲಜಾ ಅವರು, ಕನ್ನಡ ದೂರದರ್ಶನದ ಇತಿಹಾಸದಲ್ಲೇ ಮೈಲಿಗಲ್ಲಾದ ಧಾರಾವಾಹಿಗಳ ಭಾಗವಾಗಿದ್ದರು. ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಂ ಸಾರಥ್ಯದ ‘ಮಾಯಾಮೃಗ’ ಮತ್ತು ಮುಕ್ತ ಸೇರಿದಂತೆ ಹಲವು ಜನಪ್ರಿಯ ಮೆಗಾ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುವ ಮೂಲಕ ಅವರು ಕರ್ನಾಟಕದ ಮನೆಮನೆಯ ಮಾತಾಗಿದ್ದರು. ಗಂಭೀರ ಹಾಗೂ ಪೋಷಕ ಪಾತ್ರಗಳಿಗೆ ತಮ್ಮದೇ ಆದ ಗಾಂಭೀರ್ಯ ತಂದುಕೊಡುತ್ತಿದ್ದ ಶೈಲಜಾ ಅವರ ನಿಧನಕ್ಕೆ ಚಿತ್ರರಂಗ ಹಾಗೂ ಕಿರುತೆರೆಯ ನೂರಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗುರುವಾರ ಮಧ್ಯಾಹ್ನ ನಿಧನರಾದ ಹಿರಿಯ ನಟಿಯ ಪಾರ್ಥಿವ ಶರೀರದ ದರ್ಶನಕ್ಕೆ ಚಿತ್ರರಂಗದ ಆಪ್ತರು ಹಾಗೂ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ತದನಂತರ ಸಕಲ ವಿಧಿವಿಧಾನಗಳೊಂದಿಗೆ ಮೃತರ ಅಂತ್ಯಸಂಸ್ಕಾರವನ್ನು ಬೆಂಗಳೂರಿನ ಶ್ರೀರಾಂಪುರದ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಯಿತು. ಹಿರಿಯ ನಟಿಯ ನಿಧನದಿಂದಾಗಿ ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದಂತಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ