LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಬಳ ಆಯೋಜಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಉಡುಪಿ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ವಿಚಾರವಾಗಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ನಡುವೆಯೇ ರಾಅಜ್ಯ ಸರ್ಕಾಅರ ಕಂಬಳ ಆಯೋಜಕರಿಗೆ ಗುಡ್ ನ್ಯೂಸ್ ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ಅನುದಾನ ಘೋಷಣೆ ಮಾಡಿದೆ.

ಕರಾವಳಿಯಲ್ಲಿ ನಡೆಯಲಿರುವ 23 ಕಂಬಳಗಳಿಗೆ ತಲಾ 5 ಲಕ್ಷ ರೂ ಅಂತೆ ಒಟ್ಟು 1 ಕೋಟಿ 15 ಲಕ್ಷ ರೂ ಅನುದಾನ ಘೋಷಣೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ.

ಕಂಬಳಕ್ಕೆ ಅನುದಾನ ಬಿಡುಗಡೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಸಿಎಂ ಡಿ.ಕೆ.ಶಿವಕುಮಾರ್ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಪ್ರತಿ ಕಂಬಳಕ್ಕೂ 5 ಲಕ್ಷ ರೂ ಅನುದಾನ ಕೊಟ್ಟಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 23 ಕಂಬಳಗಳಿಗೆ ಇದರಿಂದ ಅನುಕೂಲವಾಗಲಿದೆ. ಕಂಬಳ ಆಯೋಜನೆ ದೊಡ್ಡ ಹೊರೆ. ಸಂಪ್ರದಾಯ ಸಂಸ್ಕೃತಿ ತುಳುನಾಡಿನ ಕೀರ್ತಿಯನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಲು ಇದರಿಂದ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪ್ರವಾಸೋದ್ಯಮ ಮತ್ತು ಕ್ರೀಡಾ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿದ್ದರು. ಸದಾನಂದ ಗೌಡರು ಸಿಎಂ ಆಗಿದ್ದಾಗ 1 ಕೋಟಿ ರೂ ಅನುದಾನ ಕೊಟ್ಟಿದ್ದರು. ರಾಜಕೀಯ ಭೇದವಿಲ್ಲದೆ ಎಲ್ಲಾ ಸರ್ಕಾರಗಳು ಕಂಬಳವನ್ನು ಪೋಷಿಸಿವೆ. ಇದು ಕಂಬಳಕ್ಕೆ ಸರ್ಕಾರಗಳು ಕೊಟ್ಟ ಗೌರವ. ಮುಂದಿನ ಬಜೆಟ್​ನಲ್ಲಿ ಕಂಬಳಕ್ಕೆ 5 ಕೋಟಿ ರೂ ಅನುದಾನ ಮೀಸಲಿರಿಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಮೈಸೂರು ದಸರಾದಲ್ಲಿ ಕಂಬಳ ವಿವಾದ ವಿಚಾರವಾಗಿ ಮಾತನಾಡಿದ ದೇವಿಪ್ರಸಾದ್ ಶೆಟ್ಟಿ, ಕಂಬಳದಲ್ಲಿ ರಾಜಕೀಯ ಇಲ್ಲ. ರಾಜಕೀಯ ಧರ್ಮ ಮೀರಿ ನಡೆಯುವ ಕ್ರೀಡೆ. ಎಲ್ಲಾ ರಾಜಕೀಯ ಪಕ್ಷದವರು ಕಂಬಳ ನಡೆಸುತ್ತಾರೆ. ಮೈಸೂರು ಸಂಸದರು ವಿರೋಧ ಮಾಡುತ್ತಾರೆ ಎಂಬ ಕಾರಣಕ್ಕೆ ಅವರ ಪಕ್ಷದ ಕರಾವಳಿಯ ಶಾಸಕರು ವಿರೋಧ ಮಾಡುವುದು ಸರಿಯಲ್ಲ. ಒಂದು ಪಕ್ಷದ ಪರವಾಗಿ ನಿಲ್ಲುವು ತೆಗೆದುಕೊಂಡಿದ್ದೀರಿ, ಕಂಬಳ ನಿಮಗೆ ಗೌರವ ಕೊಟ್ಟಿದೆ, ನೀವೇನು ಕಂಬಳಕ್ಕೆ ಗೌರವ ತಂದಿಲ್ಲ. ಕಂಬಳದ ಗೌರವವನ್ನು ರಾಜ್ಯಾದ್ಯಂತ ಎತ್ತಿಹಿಡಿರಿ. ಕಂಬಳ ನಮ್ಮ ಜಿಲ್ಲೆಗೆ ಮಾತ್ರ ಸೀಮಿತವೇ, ಮೈಸೂರಿನಲ್ಲಿ ಏಕೆ ಕಂಬಳ ಆಗಬಾರದು? ಎಂದು ಪ್ರಶ್ನಿಸಿದರು.

ಕಂಬಳದ ಬಗ್ಗೆ ಅನಗತ್ಯವಾಗಿ ಅಪಪ್ರಚಾರವಾಗುತ್ತಿದೆ. ಕೆಳ ವರ್ಗದವರ ದಬ್ಬಾಳಿಕೆ ಎಂದು ಬಿಂಬಿಸಲಾಗುತ್ತಿದೆ. ಹಿಂದುಳಿದ ವರ್ಗದ ಕೋಟೆ ಚೆನ್ನಯ್ಯರ ಹೆಸರಲ್ಲಿ, ಸೂರ್ಯ ಚಂದ್ರರ ಹೆಸರಲ್ಲಿ, ಕಾಂತ ಬಾರೆ ಬೂದ ಬಾರೆ ಹೆಸರಲ್ಲಿ ಕಂಬಳ ಮಾಡುತ್ತೇವೆ. ಇದು ದೇಶಕ್ಕೆ ಮಾದರಿ ವ್ಯವಸ್ಥೆ. ನಮ್ಮ ಕಂಬಳವನ್ನು ವೈಭವೀಕರಿಸುವ ಕೆಲಸವನ್ನು ಕರಾವಳಿಯ ಜನಪ್ರತಿನಿಧಿಗಳು ಧೈರ್ಯದಿಂದ ಮಾಡಿ. ಆದ್ದರಿಂದ ಕರಾವಳಿಯ ಜನಪ್ರತಿನಿಧಿಗಳು ಯಾವುದೇ ಪಕ್ಷದ ಕೈಗೊಂಬೆಗಳಾಗದೆ ಕಂಬಳದ ವೈಭವವನ್ನು ರಾಜ್ಯಾದ್ಯಂತ ಎತ್ತಿಹಿಡಿಯಲು ಧೈರ್ಯದಿಂದ ಕೆಲಸ ಮಾಡಬೇಕು ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ