LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೆಜ್ ಬದಲಿಗೆ ನಾನ್ ವೆಜ್ ಬರ್ಗರ್ ನೀಡಿದ ಜೊಮ್ಯಾಟೊ, ಹೋಟೆಲ್ ಮಾಲೀಕರಿಗೆ ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವೆಜ್ ಬರ್ಗರ್ ಬದಲಿಗೆ ಮಾಂಸಾಹಾರಿ(ನಾನ್‌ವೆಜ್) ಬರ್ಗರ್ ತಲುಪಿಸಿ ಸೇವಾ ನ್ಯೂನತೆ ಎಸಗಿದ ಆನ್‌ಲೈನ್ ಆಹಾರ ವಿತರಣಾ ಸಂಸ್ಥೆ ಜೊಮ್ಯಾಟೊ (Zomato) ಮತ್ತು ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿದೆ.

 ಈ ಪ್ರಕರಣದಲ್ಲಿ ದೂರುದಾರರ ಪರವಾಗಿ ಪ್ರಮುಖ ವಕೀಲ ಚಾಂದ್  ಎಸ್. ಅವರು ವಾದ ಮಂಡಿಸಿದ್ದರು. ಘಟನೆಯ ಹಿನ್ನೆಲೆ ಶಿವಮೊಗ್ಗ ನಗರದ ಜೆ.ಪಿ.ಎನ್ ರಸ್ತೆ ನಿವಾಸಿಯಾದ ನಂದೀಶ್ ಎಂಬುವವರು 2025ರ ಆಗಸ್ಟ್ 27ರಂದು ಗಣೇಶ ಚತುರ್ಥಿ ಹಬ್ಬದ ದಿನದಂದು ಜೊಮ್ಯಾಟೊ ಆ್ಯಪ್ ಮೂಲಕ ₹313.15 ಪಾವತಿಸಿ ಸಸ್ಯಾಹಾರಿ ಬರ್ಗರ್ ಆರ್ಡರ್ ಮಾಡಿದ್ದರು.

ಆದರೆ, ಅವರಿಗೆ ಸಸ್ಯಾಹಾರದ ಬದಲಾಗಿ ಮಾಂಸಾಹಾರಿ ಬರ್ಗರ್ ವಿತರಿಸಲಾಗಿತ್ತು. ಗ್ರಾಹಕರು ಈ ಬಗ್ಗೆ ಸಂಸ್ಥೆಗೆ ದೂರು ನೀಡಿದಾಗ, ಜೊಮ್ಯಾಟೊ ಕೇವಲ ಬರ್ಗರ್‌ ನ ಹಣವನ್ನು ಮರುಪಾವತಿಸಿ ಕೈತೊಳೆದುಕೊಂಡಿತ್ತು. ಆದರೆ, ಪವಿತ್ರವಾದ ಗಣೇಶ ಹಬ್ಬದ ದಿನದಂದೇ ಮನೆಯೊಳಗೆ ಮಾಂಸಾಹಾರಿ ಆಹಾರ ತಲುಪಿಸುವ ಮೂಲಕ ತಮ್ಮ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತರಲಾಗಿದೆ ಎಂದು ನಂದೀಶ್ ಅವರು ವಕೀಲರಾದ ಚಾಂದ್ ಎಸ್. ಅವರ ಮೂಲಕ ಶಿವಮೊಗ್ಗ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದರು.

ಕಂಪನಿಯ ವಾದ ವಿಚಾರಣೆ ವೇಳೆ ಜೊಮ್ಯಾಟೊ ಸಂಸ್ಥೆಯು, “ತಮ್ಮದು ಕೇವಲ ಆರ್ಡರ್ ತೆಗೆದುಕೊಳ್ಳುವ ಆನ್‌ಲೈನ್ ವೇದಿಕೆಯಾಗಿದ್ದು(ಪ್ಲಾಟ್‌ಫಾರ್ಮ್), ಗ್ರಾಹಕರು ನೇರವಾಗಿ ಹೋಟೆಲ್‌ಗೆ ಆರ್ಡರ್ ಮಾಡಿರುತ್ತಾರೆ. ಇದರಲ್ಲಿ ನಮ್ಮ ಯಾವುದೇ ಲೋಪ ಅಥವಾ ಸೇವಾನ್ಯೂನತೆ ಇರುವುದಿಲ್ಲ” ಎಂದು ವಾದಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸಿತು.

ಆಯೋಗದ ಮಹತ್ವದ ತೀರ್ಪು

ದೂರುದಾರರ ಪರ ವಕೀಲರಾದ ಚಾಂದ್  ಎಸ್. ಅವರು ಮಂಡಿಸಿದ ವಾದ-ಪ್ರತಿವಾದಗಳು, ಪ್ರಮಾಣಪತ್ರ ಹಾಗೂ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಜಿಲ್ಲಾ ಗ್ರಾಹಕ ಆಯೋಗವು ಸಂಸ್ಥೆಯ ಸೇವಾನ್ಯೂನತೆಯನ್ನು ಎತ್ತಿಹಿಡಿಯಿತು.

ಆಯೋಗದ ಅಧ್ಯಕ್ಷ ಟಿ. ಶಿವಣ್ಣ ಮತ್ತು ಸದಸ್ಯ ಬಿ. ಡಿ. ಯೋಗಾನಂದ ಭಾಂಡ್ಯ ಅವರನ್ನೊಳಗೊಂಡ ಪೀಠವು ಈ ಕೆಳಗಿನಂತೆ ಆದೇಶಿಸಿದೆ:

ಪರಿಹಾರ: ಎದುರುದಾರರಾದ ಜೊಮ್ಯಾಟೊ ಸಿಇಒ(ಗುರುಗ್ರಾಮ, ಹರಿಯಾಣ), ಜೋನಲ್ ಹೆಡ್(ಬೆಂಗಳೂರು) ಮತ್ತು ಶಿವಮೊಗ್ಗದ ಫೈವ್ ಸ್ಟಾರ್ ಹೋಟೆಲ್ ಮಾಲೀಕರು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ದೂರುದಾರರಿಗೆ ₹10,000 ಮಾನಸಿಕ ಅಸಮಾಧಾನ ಹಾಗೂ ತೊಂದರೆಗಾಗಿ ಪರಿಹಾರ ನೀಡಬೇಕು.

ಪ್ರಕರಣದ ವೆಚ್ಚ: ಕಾನೂನು ಹೋರಾಟದ ವೆಚ್ಚವಾಗಿ ಹೆಚ್ಚುವರಿಯಾಗಿ ₹10,000 ಗಳನ್ನು ಪಾವತಿಸಬೇಕು.

ಗಡುವು: ಈ ಒಟ್ಟು ಮೊತ್ತವನ್ನು ಆದೇಶ ಹೊರಬಿದ್ದ 45 ದಿನಗಳ ಒಳಗಾಗಿ ಪಾವತಿಸಬೇಕು. ತಪ್ಪಿದಲ್ಲಿ, ಈ ಮೊತ್ತಕ್ಕೆ ವಾರ್ಷಿಕ ಶೇ. 12ರಷ್ಟು ಬಡ್ಡಿ ಸೇರಿಸಿ ಪಾವತಿಸಬೇಕಾಗುತ್ತದೆ ಎಂದು ಆಯೋಗವು ಖಡಕ್ ಆದೇಶ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ