LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎರಡನೇ ವಿಮಾನ ನಿಲ್ದಾಣ ವಿಚಾರ: ಸಿಎಂ ಡಿ.ಕೆ.ಶಿವಕುಮಾರ್ ಗೆ ಬಹಿರಂಗ ಪತ್ರ ಬರೆದ ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಕನಕಪುರದಲ್ಲಿ ನಿರ್ಮಾಣ ಪ್ರಸ್ತಾವನೆ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಕನಕಪುರದಲ್ಲಿ ವಿಮಾನ ನಿಲ್ದಾಣಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣಕ್ಕೆ ಒತ್ತಾಯಿಸಿದೆ.

ಬಿಜೆಪಿಯ ಪ್ರಮುಖ ವಾದಗಳು:

  1. ಸಮತೋಲಿತ ಅಭಿವೃದ್ಧಿ ಆಗಬೇಕು
    ಬೆಂಗಳೂರು ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿ ಎಂಬಂತಾಗಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ, ಕಲ್ಯಾಣ ಕರ್ನಾಟಕ, ಮಲೆನಾಡು ಮತ್ತು ಹಳೆ ಮೈಸೂರು ಭಾಗದ ಜನರಿಗೂ ಸಮಾನವಾಗಿ ತಲುಪುವ ಯೋಜನೆಗಳು ಬೇಕು. ಅಭಿವೃದ್ಧಿ ಕೇವಲ ಬೆಂಗಳೂರಿಗೆ ಸೀಮಿತವಾಗಬಾರದು.
  2. ಬೆಂಗಳೂರು ಮೇಲಿನ ಒತ್ತಡ ಹೆಚ್ಚಾಗುತ್ತದೆ
    ಈಗಾಗಲೇ ಬೆಂಗಳೂರು ಜನಸಂಖ್ಯೆ, ವಾಹನ ದಟ್ಟಣೆ, ನೀರು, ಸಂಚಾರ ಸಮಸ್ಯೆ ಎದುರಿಸುತ್ತಿದೆ. ಇನ್ನೊಂದು ಬೃಹತ್ ಯೋಜನೆಯನ್ನು ಬೆಂಗಳೂರು ಸುತ್ತಮುತ್ತಲೇ ಕೇಂದ್ರೀಕರಿಸಿದರೆ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ.
  3. ತುಮಕೂರು ಏಕೆ ಸೂಕ್ತ?
    ತುಮಕೂರು ಈಗಾಗಲೇ ರಾಷ್ಟ್ರೀಯ ಹೆದ್ದಾರಿ, ರೈಲು ಸಂಪರ್ಕ, ಕೈಗಾರಿಕಾ ವಲಯ ಹೊಂದಿದೆ. ಭೌಗೋಳಿಕವಾಗಿ ರಾಜ್ಯದ ಮಧ್ಯಭಾಗಕ್ಕೆ ಹತ್ತಿರವಿದೆ. ಇಲ್ಲಿ ವಿಮಾನ ನಿಲ್ದಾಣ ಬಂದರೆ ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಮತ್ತು ಹಳೆ ಮೈಸೂರು ಭಾಗದ ಜನರಿಗೆ ಅನುಕೂಲವಾಗುತ್ತದೆ.
    ಇದರಿಂದ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗಿ, ತುಮಕೂರು ಕೈಗಾರಿಕಾ ವಲಯವಾಗಿ ಬೆಳೆಯುತ್ತದೆ.
  4. ಕನಕಪುರದಲ್ಲಾದರೆ ತೊಂದರೆ ಏನು?
    ಕನಕಪುರ ರಾಜ್ಯದ ದಕ್ಷಿಣ ತುದಿಯಲ್ಲಿದೆ. ಅಲ್ಲಿ ವಿಮಾನ ನಿಲ್ದಾಣ ಬಂದರೆ ಪ್ರಯೋಜನ ಸೀಮಿತ ಪ್ರದೇಶಕ್ಕೆ ಮಾತ್ರ ಸೀಮಿತವಾಗುತ್ತದೆ. ಅಲ್ಲದೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಮೀಸಲು ಅರಣ್ಯ ಪ್ರದೇಶ ಹತ್ತಿರ ಇರುವುದರಿಂದ ಪರಿಸರ ಮತ್ತು ಕೃಷಿಗೆ ತೊಂದರೆಯಾಗಬಹುದು.
  5. ಇತರ ರಾಜ್ಯಗಳ ಉದಾಹರಣೆ
    ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್ ಜೊತೆಗೆ ಇತರೆ ನಗರಗಳಲ್ಲೂ ವಿಮಾನ ನಿಲ್ದಾಣ/ಅಭಿವೃದ್ಧಿ ಆಗಿದೆ. ಆದರೆ ಕರ್ನಾಟಕದಲ್ಲಿ ಅಭಿವೃದ್ಧಿ ಕೇವಲ ಬೆಂಗಳೂರಿಗೆ ಸೀಮಿತವಾಗಿದೆ.

ಬಿಜೆಪಿಯ ಬೇಡಿಕೆ

  1. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕು.
  2. ಈ ವಿಷಯವನ್ನು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಧರಿಸಬೇಕು.
  3. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ “ಎರಡನೇ ವಿಮಾನ ನಿಲ್ದಾಣ ತುಮಕೂರು ರಸ್ತೆಯಲ್ಲಿ ಆಗಬೇಕು” ಎಂದು ಬೇಡಿಕೆ ಇಟ್ಟಿದ್ದಾರೆ.

ಈ ಯೋಜನೆಯು ಮುಂದಿನ ಹಲವು ದಶಕಗಳ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಪ್ರಾದೇಶಿಕ ಅಭಿವೃದ್ಧಿಯ ದಿಕ್ಕನ್ನು ನಿರ್ಧರಿಸುತ್ತದೆ. ಆದ್ದರಿಂದ ಇದನ್ನು ಕೇವಲ ಒಂದು ಪ್ರದೇಶದ ದೃಷ್ಟಿಯಿಂದಲ್ಲ, ಇಡೀ ರಾಜ್ಯದ ಸಮತೋಲಿತ ಅಭಿವೃದ್ಧಿಯ ದೃಷ್ಟಿಯಿಂದ ನೋಡಬೇಕು ಎಂದು ಬಿ.ವೈ.ವಿಜಯೇಂದ್ರ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING NEWS: 90ನೇ ಹುಟ್ಟುಹಬ್ಬಕ್ಕೆ 10 ದಿನ ಇರುವಾಗಲೇ ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ‘ಸರ್ ಗ್ಯಾರಿ ಸೋಬರ್ಸ್’ ವಿಧಿವಶ | Sir Garry Sobers Passes Awayಅಭಿವೃದ್ಧಿ ನೆಪದಲ್ಲಿ ರಿಯಲ್ ಎಸ್ಟೇಟ್, ಹೈಕಮಾಂಡ್ ಗೆ ಗಿಫ್ಟ್ ಕೊಡಲು ಟೌನ್ ಶಿಪ್: ಯತ್ನಾಳ್ ಆರೋಪಹವಾಮಾನ ಇಲಾಖೆಯಿಂದ ಭಾರೀ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆBREAKING NEWS: ಮೆಕ್ಸಿಕೋದಲ್ಲಿ 7.3 ತೀವ್ರತೆಯ ಭಾರೀ ಪ್ರಬಲ ಭೂಕಂಪ: ದಕ್ಷಿಣ ಕರಾವಳಿಯಲ್ಲಿ ಸುನಾಮಿ ಎಚ್ಚರಿಕೆಸಾರಿಗೆ ಸಂಸ್ಥೆಯ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಸಾವುಬಿಜೆಪಿ ಟಿಕೆಟ್‌ ನಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಟಿಎಂಸಿ ಬಂಡಾಯಗಾರರಾದ ​​ಸುಖೇಂದು ಶೇಖರ್ ರಾಯ್, ಸುಶ್ಮಿತಾ ದೇವ್, ಪ್ರಕಾಶ್ ಬರೈಕ್ಎರಡನೇ ವಿಮಾನ ನಿಲ್ದಾಣ ವಿಚಾರ: ಸಿಎಂ ಡಿ.ಕೆ.ಶಿವಕುಮಾರ್ ಗೆ ಬಹಿರಂಗ ಪತ್ರ ಬರೆದ ವಿಜಯೇಂದ್ರಧಾರವಾಡದಲ್ಲಿ ಶೀಘ್ರದಲ್ಲಿಯೇ ಕ್ರೀಡಾ ಸಂಕೀರ್ಣ ಪ್ರಾರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿವೆಜ್ ಬದಲಿಗೆ ನಾನ್ ವೆಜ್ ಬರ್ಗರ್ ನೀಡಿದ ಜೊಮ್ಯಾಟೊ, ಹೋಟೆಲ್ ಮಾಲೀಕರಿಗೆ ದಂಡಪ್ರೀತಿಸಿ ಮದುವೆಯಾಗಿದ್ರೂ ಮತ್ತೊಬ್ಬನೊಂದಿಗೆ ಚಾಟಿಂಗ್ ಮಾಡ್ತಿದ್ದ ಅಪ್ರಾಪ್ತೆಗೆ ಗುಂಡು ಹಾರಿಸಿ ಕೊಲೆ: ಶವ ಹೂತಿಟ್ಟಿದ್ದ ಅಪ್ರಾಪ್ತ ಪತಿ ಸೇರಿ ಮೂವರು ಅರೆಸ್ಟ್