LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೂಲಿ ಕಾರ್ಮಿಕರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಕೂಲಿಕಾರ್ಮಿಕರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಪ್ಲಾಂಟೇಶನ್ ಮರಗಳ ಕಡಿತಲೆ ಕೆಲಸಕ್ಕಾಗಿ ಧಾರವಾಡದಿಂದ ಬಂದಿದ್ದ ಕಾರ್ಮಿಕರ ನಡುವೆ ಜಗಳವಾಗಿ ಒಬ್ಬನ ಕೊಲೆಯಾಗಿದೆ. ಕಲಘಟಗಿ ತಾಲೂಕಿನ ದೇವಿಕೊಪ್ಪ ಸಮೀಪದ ಈಚನಹಳ್ಳಿ ತಾಂಡಾದ ಪರಶುರಾಮ ರಾಮಪ್ಪ ಲಮಾಣಿ ಕೊಲೆಯಾದವರು. ಅದೇ ತಾಂಡಾದಿಂದ ಆಗಮಿಸಿದ್ದ ಕಾರ್ಮಿಕ ಪರಶುರಾಮ ಶೆಟ್ಟಪ್ಪ ತಂಬೂರಿ ಹಾಗೂ ಅರುಣ್ ಪುನ್ನಪ್ಪ ಲಮಾಣಿ ಕೊಲೆ ಆರೋಪಿಗಳಾಗಿದ್ದಾರೆ.

ಮೇ ತಿಂಗಳಿನಲ್ಲಿ ಕೆಲಸಕ್ಕೆ ಬಂದಿದ್ದ ಇವರು ಸೊನಲೆ ಗ್ರಾಮದ ಕುಮಾರ್ ಅವರ ಮನೆ ಬಾಡಿಗೆ ಪಡೆದು ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಮೃತ ವ್ಯಕ್ತಿ ಪರಶುರಾಮ ಊರಿಗೆ ಹೋಗಿದ್ದು, ಶನಿವಾರ ಕೆಲಸಕ್ಕೆ ಬಂದಿದ್ದ. ಶನಿವಾರ ರಾತ್ರಿ ಬಾಡಿಗೆ ಮನೆಯಲ್ಲಿ ಕಾರ್ಮಿಕರು ಒಟ್ಟಿಗೆ ಮದ್ಯ ಸೇವಿಸಿದ್ದು, ಅರುಣ್ ಸಂಸಾರದ ವಿಚಾರವಾಗಿ ಪರಶುರಾಮ ರಾಮಪ್ಪ ಲಮಾಣಿ ಬುದ್ಧಿವಾದ ಹೇಳಿದ್ದ. ಈ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.

ಮೇಸ್ತ್ರಿ ಹಾಗೂ ಇತರ ಕಾರ್ಮಿಕರು ಗಲಾಟೆ ಬಿಡಿಸಿ ಇಬ್ಬರನ್ನು ಸುಮ್ಮನಾಗಿಸಿದ್ದಾರೆ. ಆದರೆ, ಬುದ್ಧಿ ಹೇಳಿದ್ದಕ್ಕೆ ಅರುಣ್ ಮತ್ತು ಪರಶುರಾಮ ಶೆಟ್ಟಪ್ಪ ಮತ್ತೆ ಜಗಳ ತೆಗೆದು ಕುತ್ತಿಗೆಗೆ ಚಾಕುವಿನಿಂದ ಇರಿದ ಪರಿಣಾಮ ಪರಶುರಾಮ ರಾಮಪ್ಪ ಲಮಾಣಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಿದ ಪಿಎಸ್ಐ ಶಂಕರಗೌಡ ಪಾಟೀಲ್ ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ