LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೂತಿಟ್ಟಿದ್ದ ತಾಯಿ ಶವ ರಾತ್ರೋರಾತ್ರಿ ಹೊರತೆಗೆದು ಮರು ಮರಣೋತ್ತರ ಪರೀಕ್ಷೆಗೆ ಬೈಕ್ ನಲ್ಲಿ ಕೊಂಡೊಯ್ದ ಮಕ್ಕಳು…!

ದಾವಣಗೆರೆ: ತಾಯಿಯ ಅಸಹಜ ಸಾವಿನ ತನಿಖೆಯ ಕುರಿತಾಗಿ ಅನುಮಾನಗೊಂಡ ಪುತ್ರರಿಬ್ಬರು ಮರು ಮರಣೋತ್ತರ ಪರೀಕ್ಷೆಗೆ ಶವವನ್ನು ರಾತ್ರೋರಾತ್ರಿ ಬೈಕ್ ನಲ್ಲಿ ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆದಾಪುರ ಗ್ರಾಮದಲ್ಲಿ ಏಪ್ರಿಲ್ 29ರಂದು ಈರಮ್ಮ(58) ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ತಮ್ಮ ತಾಯಿಯಧು ಸಹಜ ಸಾವಲ್ಲ, ನೆರೆಹೊರೆಯವರು ಸೇರಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಮೃತರ ಮಕ್ಕಳಾದ ಮಂಜುನಾಥ್ ಮತ್ತು ವೆಂಕಟೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನೆರೆಹೊರೆಯ 11 ಮಂದಿ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ತನಿಖೆ ನಡೆಸಿ ಯಾವುದೇ ಕೊಲೆ ಮೊಕದ್ದಮೆ ದಾಖಲಿಸದೆ ಮರಣೋತ್ತರ ಪರೀಕ್ಷೆ ಬಳಿಕ ಮೃತರ ಅಂತ್ಯಕ್ರಿಯೆ ನಡೆಸಲು ಕುಟುಂಬದವರಿಗೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ, ಪೊಲೀಸರ ತನಿಖೆಯಿಂದ ತೃಪ್ತರಾಗದ ಮಂಜುನಾಥ್ ಮತ್ತು ವೆಂಕಟೇಶ್ ಶನಿವಾರ ರಾತ್ರಿ ತಮ್ಮ ಊರಿನ ಸ್ಮಶಾನದಲ್ಲಿ ಹೂತು ಹಾಕಿದ್ದ ತಮ್ಮ ತಾಯಿಯ ಶವದ ಅವಶೇಷಗಳನ್ನು ಹೊರತೆಗೆದು ರಾತ್ರೋರಾತ್ರಿ ಬೆಡ್ ಶೀಟ್ ನಲ್ಲಿ ಸುತ್ತಿಕೊಂಡು ಮರುಮರಣೋತ್ತರ ಪರೀಕ್ಷೆ ನಡೆಸಲು ದಾವಣಗೆರೆ ಜಿಲ್ಲಾಸ್ಪತ್ರೆಗೆ ಬೈಕ್ ನಲ್ಲಿ ತೆಗೆದುಕೊಂಡು ಹೋಗಿದ್ದಾರೆ.

ಆದರೆ, ಮಾರ್ಗಮಧ್ಯದಲ್ಲೇ ಅವರು ತೆರಳುತ್ತಿದ್ದ ಬೈಕ್ ಅಪಘಾತಕ್ಕೀಡಾಗಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ತಾಯಿಯ ಮರು ಮರಣೋತ್ತರ ಪರೀಕ್ಷೆಗೆ ಮಕ್ಕಳು ಒತ್ತಾಯಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ