ಬೆಂಗಳೂರು: ಖಂಡಿತವಾಗಿಯೂ ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಬಹುದು, ಆಗಸ್ಟ್ ಮೊದಲ ವಾರದಲ್ಲಿ ಅಂದರೆ ಆಗಸ್ಟ್ 6 ರಿಂದ ವಿಧಾನ ಮಂಡಲ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆ ವೇಳೆಗೆ ಸಂಪುಟ ವಿಸ್ತರಣೆ ಆಗಿರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಆಗಸ್ಟ್ 6ಕ್ಕೆ ವಿಧಾನ ಮಂಡಲ ಅಧಿವೇಶನ ಶುರುವಾಗಲಿದ್ದು, ಆ ಹೊತ್ತಿಗೆ ಸಂಪುಟ ವಿಸ್ತರಣೆ ಆಗಿರಲಿದೆ ಎಂದು ಹೇಳಿದ್ದಾರೆ.
ಅಧಿವೇಶನ ಆರಂಭಕ್ಕೆ ಮೊದಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಅಗತ್ಯವಾದರೆ ದೆಹಲಿಗೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.