ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಅಯೋಧ್ಯೆ ರಾಮ ಮಂದಿರ ಹುಂಡಿ ಕಳ್ಳತನ, ನೀಟ್ ಹಗರಣಗ ಬಗ್ಗೆ ಚರ್ಚೆಗೆ ಆಗ್ರಹಿಸಿ ಗದ್ದಲ ನಡೆಸಿವೆ.
ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಅಯೋಧ್ಯೆ ಶ್ರೀರಾಮ ಮಂದಿರದ ಹುಂಡಿ ಹಣ ಕಳ್ಳತನ ಹಾಗೂ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಚರ್ಚೆಗೆ ಆಗ್ರಹಿಸಿ ಸದನದಲ್ಲಿ ಭಾರಿ ಗದ್ದಲ ಸೃಷ್ಟಿಸಿದರು. ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.
ಇಂದಿನಿಂದ ಆರಂಭವಾಗಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆ, ಕ್ಷೇತ್ರ ಪುನರ್ವಿಂಗಡಣೆ ಹಾಗೂ ದೇಶಾದ್ಯಂತ ಸದ್ದು ಮಾಡುತ್ತಿರುವ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ.