LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭೆಯಲ್ಲಿಯೂ ಪ್ರತಿಧ್ವನಿಸಿದ ನೀಟ್ ಪರೀಕ್ಷಾ ಅಕ್ರಮ: ಪ್ರತಿಭಟನಾಕಾರರ ಮೇಲೆ ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸಲು ಯತ್ನ: ಲಾಠಿಚಾರ್ಜ್ ಕ್ರಮಕ್ಕೆ ಖರ್ಗೆ ಆಕ್ರೋಶ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ಮೊದಲ ದಿನವೇ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ಹುಂಡಿ ಕಳ್ಳತನ ಪ್ರಕರಣ ಹಾಗೂ ನೀಟ್ ಪರೀಕ್ಷೆ ಅಕ್ರಮ ಹಾಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿಚಾರ್ಜ್ ವಿಚಾರಗಳು ಗದ್ದಲ ಕೋಲಾಹಲಕ್ಕೆ ಕಾರಣವಾಗಿವೆ.

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಮ ಮಂದಿರದಲ್ಲಿ ಕಾಣಿಕೆ ಕಳ್ಳತನ ಪ್ರಕರಣ ಹಾಗೂ ನೀಟ್ ಹಗರಣದ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿಪಕ್ಷಗಳು ಗದ್ದಲವೆಬ್ಬಿಸಿದವು. ಇದರಿಂದ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಎರಡು ಬಾರಿ ಮುಂದೂಡಿದ ಪ್ರಸಂಗ ನಡೆಯಿತು.

ಇದೇ ವೇಳೆ ರಾಜ್ಯಸಭೆಯಲ್ಲಿಯೂ ನೀಟ್ ಅಕ್ರಮ ಪ್ರತಿಧ್ವನಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಸದಸ್ಯರು ಪಟ್ಟು ಹಿಡಿದರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಷಯ ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನೀಟ್ ಅಕ್ರಮ ಖಂಡಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೆ ಅವರ ಮೇಲೆ ಲಾಠಿ ಚಾರ್ಜ್ ನಡೆಸಿ ಯುವ ಪೀಳಿಗೆಯ ಧ್ವನಿಯನ್ನು ಹತ್ತಿಕ್ಕುವ ಯತ್ನವನ್ನು ಪೊಲೀಸರ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿರುವುದು ಖಂಡನೀಯ ಎಂದು ಗುಡುಗಿದರು.

ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ‘ಚಲೋ ಸಂಸತ್’ ಮೆರವಣಿಗೆಗೆ ಯತ್ನಿಸುತ್ತಿದ್ದ ನೀಟ್ ಅಭ್ಯರ್ಥಿಗಳು, ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ದೆಹಲಿ ಪೊಲೀಸರು ಬಲಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಿದ್ದಾರೆ. ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸುವ ಯತ್ನ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.

ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಪೊಲೀಸ್ ಶಕ್ತಿಯನ್ನು ಬಳಸುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ವರ್ತನೆ ಎಂದು ಕಿಡಿಕಾರಿದರು.

ಖರ್ಗೆ ಅವರ ಹೇಳಿಕೆಗೆ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅದೇ ವೇಳೆ, ನೀಟ್ ಪರೀಕ್ಷಾ ಸುಧಾರಣೆ ಹಾಗೂ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿಯ ಕುರಿತು ತಕ್ಷಣವೇ ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಪಟ್ಟು ಹಿಡಿದು ಸಭಾಪತಿಯವರ ಪೀಠದ ಮುಂಭಾಗಕ್ಕೆ ಧಾವಿಸಿದರು.

ಉಭಯ ಪಕ್ಷಗಳ ವಾಗ್ದಾಳಿ ಮತ್ತು ಗದ್ದಲ ನಿಯಂತ್ರಣಕ್ಕೆ ಬಾರದಿದ್ದಾಗ, ರಾಜ್ಯಸಭಾ ಪೀಠವು ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. 12 ಗಂಟೆಗೆ ಮತ್ತೆ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಮತ್ತೆ ಸದನವನ್ನು ಮುಂದೂಡಲಾಯಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ