ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಅಕ್ರಮ ಎಸಗಿದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಸಿಬಿಐ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿದ್ಯಾರ್ಥಿಗಳ ಸಂಘಟನೆಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಪುತ್ರಿಯರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಕೊಡಿಸಿದ ಆರೋಪ ಮಾಡಲಾಗಿದೆ. 40,000 ರೂ. ಆದಾಯವೆಂದು ಪುತ್ರಿಯರಿಂದ ಸುಳ್ಳು ಪ್ರಮಾಣ ಪತ್ರ ಸಲ್ಲಿಕೆ ಮಾಡಲಾಗಿದೆ ಎಂದು ದೂರಲಾಗಿದೆ.
ತನಿಖೆ ಕಣ್ಣೊರೆಸುವ ತಂತ್ರವೆಂದು ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದ್ದಾರೆ. ಆರೋಪಗಳು ಆಘಾತಕಾರಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಈಗ ಎಸ್ಐಟಿ ರಚಿಸುವುದು ಸೂಕ್ತವಲ್ಲವೆಂದು ಹೈಕೋರ್ಟ್ ಹೇಳಿದೆ. ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಅಗತ್ಯವೆಂದು ಹೇಳಿದೆ. ವ್ಯವಸ್ಥೆಯನ್ನು ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.