LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್..! ತತ್ಕಾಲ್ ಟಿಕೆಟ್‌’ಗೆ ಹೊಸ ರೂಲ್ಸ್, ಇನ್ಮುಂದೆ ಸಾಲಿನಲ್ಲಿ ನಿಲ್ಲುವ ಟೆನ್ಷನ್ ಇಲ್ಲ.!

ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ವೆಸ್ಟ್ ಸೆಂಟ್ರಲ್ ರೈಲ್ವೆ ಸಿಹಿಸುದ್ದಿ ನೀಡಿದೆ. ತತ್ಕಾಲ್ ಟಿಕೆಟ್ ಬುಕ್ಕಿಂಗ್ ವೇಳೆ ಕೌಂಟರ್‌ಗಳಲ್ಲಿ ಉಂಟಾಗುವ ದಟ್ಟಣೆ ಹಾಗೂ ಏಜೆಂಟ್‌ಗಳ ಹಾವಳಿಯನ್ನು ತಡೆಗಟ್ಟಲು ಆಗಸ್ಟ್ 1ರಿಂದ ಹೊಸ ಟೋಕನ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಹೊಸ ವ್ಯವಸ್ಥೆಯಲ್ಲಿ ಬುಕ್ಕಿಂಗ್ ಆರಂಭಕ್ಕೂ ಮುನ್ನವೇ ಪ್ರಯಾಣಿಕರಿಗೆ ಟೋಕನ್ ವಿತರಿಸಲಾಗುತ್ತದೆ.

ಏನಿದು ಹೊಸ ಟೋಕನ್ ವ್ಯವಸ್ಥೆ?

ಹೊಸ ನಿಯಮದ ಪ್ರಕಾರ ಪ್ರಯಾಣಿಕರು ಕೌಂಟರ್ ಮುಂದೆ ಗಂಟೆಗಟ್ಟಲೆ ಕಾಯುವ ಅಗತ್ಯವಿರುವುದಿಲ್ಲ. ಬುಕ್ಕಿಂಗ್ ಆರಂಭಕ್ಕೂ ಮುನ್ನ ಟೋಕನ್ ಪಡೆದು ತಮ್ಮ ಸರದಿಯಂತೆ ಟಿಕೆಟ್ ಬುಕ್ ಮಾಡಿಸಿಕೊಳ್ಳಬಹುದು.

  • ಬೆಳಗ್ಗೆ 8:30 ರಿಂದ 9:00ರವರೆಗೆ – AC ತತ್ಕಾಲ್ ಟಿಕೆಟ್‌ಗಳಿಗೆ ಟೋಕನ್ ವಿತರಣೆ
  • ಬೆಳಗ್ಗೆ 9:00 ರಿಂದ 9:30ರವರೆಗೆ – Non-AC ಮತ್ತು ಸ್ಲೀಪರ್ ತತ್ಕಾಲ್ ಟಿಕೆಟ್‌ಗಳಿಗೆ ಟೋಕನ್ ವಿತರಣೆ

ಟೋಕನ್‌ಗಳಿಗೆ ಮಿತಿ

ಕೌಂಟರ್‌ಗಳಲ್ಲಿ ಗೊಂದಲ ಮತ್ತು ನೂಕುನುಗ್ಗಲು ತಪ್ಪಿಸಲು ಪ್ರತಿ ಮೀಸಲಾತಿ ಕೌಂಟರ್‌ಗೆ ಟೋಕನ್‌ಗಳ ಸಂಖ್ಯೆಗೆ ಮಿತಿ ವಿಧಿಸಲಾಗಿದೆ.

  • ಒಂದು ಕೌಂಟರ್‌ಗೆ ಗರಿಷ್ಠ 10 AC ತತ್ಕಾಲ್ ಟೋಕನ್‌ಗಳು
  • 15 Non-AC/ಸ್ಲೀಪರ್ ತತ್ಕಾಲ್ ಟೋಕನ್‌ಗಳು ಮಾತ್ರ

ಹೊಸ ನಿಯಮದ ಪ್ರಕಾರ ಸ್ವಂತ ಪ್ರಯಾಣ ಅಥವಾ ಕುಟುಂಬ ಸದಸ್ಯರ ಪ್ರಯಾಣಕ್ಕಾಗಿ ಟಿಕೆಟ್ ಬುಕ್ ಮಾಡುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಏಜೆಂಟ್‌ಗಳ ದುರುಪಯೋಗಕ್ಕೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಆಗುವ ಲಾಭವೇನು?

ಇದುವರೆಗೆ ಟೋಕನ್ ಪಡೆಯಲು ಒಮ್ಮೆ, ಟಿಕೆಟ್ ಬುಕ್ಕಿಂಗ್‌ಗೆ ಮತ್ತೊಮ್ಮೆ ಸರತಿಯಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಹೊಸ ವ್ಯವಸ್ಥೆಯಲ್ಲಿ ಒಂದೇ ಬಾರಿ ಟೋಕನ್ ಪಡೆದು ಟಿಕೆಟ್ ಬುಕ್ ಮಾಡಿಸಿಕೊಳ್ಳಬಹುದು. ಇದರಿಂದ ಸಮಯ ಉಳಿತಾಯವಾಗುವುದರ ಜೊತೆಗೆ ಕೌಂಟರ್‌ಗಳಲ್ಲಿನ ಗೊಂದಲವೂ ಕಡಿಮೆಯಾಗಲಿದೆ.

ತತ್ಕಾಲ್ ಟಿಕೆಟ್ ಬುಕ್ಕಿಂಗ್ ವೇಳೆ ಕಡ್ಡಾಯವಾಗಿ ತರಬೇಕಾದ ದಾಖಲೆಗಳು

  • ಗುರುತಿನ ಚೀಟಿ: ಆಧಾರ್ ಕಾರ್ಡ್ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಫೋಟೋ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು.
  • ಪ್ರಯಾಣದ ವಿವರಗಳು: ಪ್ರಯಾಣಿಕರ ಹೆಸರು, ವಯಸ್ಸು, ರೈಲು ಸಂಖ್ಯೆ ಹಾಗೂ ಇತರೆ ವಿವರಗಳನ್ನು ಮುಂಚಿತವಾಗಿ ಬರೆದುಕೊಂಡು ಹೋದರೆ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ವೇಗವಾಗಿ ಪೂರ್ಣಗೊಳ್ಳುತ್ತದೆ.

ಈ ಹೊಸ ಟೋಕನ್ ವ್ಯವಸ್ಥೆಯಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಇನ್ನಷ್ಟು ಸುಲಭ, ವೇಗ ಮತ್ತು ಪಾರದರ್ಶಕವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ