LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕೆದಾಟು ಯೋಜನೆಗೆ ತೀವ್ರ ವಿರೋಧ: ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್; ತಕ್ಷಣ ಮಧ್ಯಪ್ರದೇಶಕ್ಕೆ ಮನವಿ

ಚೆನ್ನೈ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟ ಪಡಿಸಿರುವ ಬೆನ್ನಲ್ಲೇ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಜು.27ರಂದು ಸಂಸತ್ ಮುಂಗಾರು ಅಧಿವೇಶದ ವೇಳೆ ಸಂಸತ್ತಿನಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರು ಈ ಬಗ್ಗೆ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದ್ದು, ಗಡಿಯೊಳಗೆ ನೀರು ಬಳಕೆಗೆ ಕರ್ನಾಟಕಕ್ಕೆ ಪೂರ್ಣ ಅಧಿಕಾರ ಇದೆ. ಸುಪ್ರೀಂ ಕೋರ್ಟ್​​​​ ತೀರ್ಪಿನಲ್ಲಿ ಎಲ್ಲೂ ಒಪ್ಪಿಗೆ ಪಡೆಯಲು ಹೇಳಿಲ್ಲ ಎಂದು ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯಂತಹ ನೆರೆ ರಾಜ್ಯಗಳ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ತಕ್ಷಣದ ಹಸ್ತಕ್ಷೇಪಕ್ಕೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ತಕ್ಷಣವೇ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು. ಮೇಕೆದಾಟು ಯೋಜನೆಯಿಂದ ಕೆಳಭಾಗದ ರಾಜ್ಯದ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕೆಳಭಾಗದ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ ಎಂಬ ಕೇಂದ್ರ ಜಲಶಕ್ತಿ ಸಚಿವಾಲಯದ ಹೇಳಿಕೆಯನ್ನು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಖಂಡಿಸಿದ್ದಾರೆ. ಆಲಮಟ್ಟಿ ಪ್ರಕರಣದಲ್ಲಿ ಉನ್ನತ ನ್ಯಾಯಾಲಯ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವ ಅವರು, ಕೆಳಭಾಗದ ರಾಜ್ಯಗಳ (Lower Riparian States) ಸ್ಪಷ್ಟ ಸಮ್ಮತಿ ಇಲ್ಲದೆ ಯಾವುದೇ ಮೇಲ್ಭಾಗದ ರಾಜ್ಯವು ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ವಾದಿಸಿದ್ದಾರೆ. ಕರ್ನಾಟಕದ ಈ ಪ್ರಸ್ತಾವನೆಯು ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) ಅಂತಿಮ ಆದೇಶ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಾವೇರಿ ತೀರ್ಪಿನ ನಿಯಮ 11 ಮತ್ತು 20ರ ಅಡಿಯಲ್ಲಿ ನದಿ ಜಲಾನಯನ ಪ್ರದೇಶದ ಸಹ-ರಾಜ್ಯಗಳ ಪರಸ್ಪರ ಸಮ್ಮತಿ ಕಡ್ಡಾಯವಾಗಿದೆ. ಮೇಕೆದಾಟು ಯೋಜನೆಯನ್ನು ಕೇವಲ ಒಂದು ಇಂಜಿನಿಯರಿಂಗ್ ಅಥವಾ ಕುಡಿಯುವ ನೀರಿನ ಯೋಜನೆಯಾಗಿ ನೋಡಬಾರದು. ಇದು ಲಕ್ಷಾಂತರ ರೈತರ ಜೀವನಾಧಾರವಾಗಿರುವ ಕಾವೇರಿ ಜಲ ಹಂಚಿಕೆಯ ಸೂಕ್ಷ್ಮ ವಿಷಯವಾಗಿದೆ.

2019ರಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿಸ್ತೃತ ಯೋಜನಾ ವರದಿಯನ್ನು (DPR) ಕೇಂದ್ರ ಜಲ ಆಯೋಗವು ನಿಯಮಗಳಿಗೆ ಬದ್ಧವಾಗಿರದ ಕಾರಣ ಪರಿಶೀಲನೆಗೆ ವಾಪಸ್ ಕಳುಹಿಸಿದ್ದನ್ನು ತಮಿಳುನಾಡು ಸಿಎಂ ಪತ್ರದಲ್ಲಿ ನೆನಪಿಸಿದ್ದಾರೆ. ಜೊತೆಗೆ, ಪಂಬಾರ್ ಜಲವಿದ್ಯುತ್ ಯೋಜನೆಯ ಹಳೆಯ ತೀರ್ಪಿನ ಉದಾಹರಣೆಯನ್ನು ನೀಡಿದ್ದು, ಯಾವುದೇ ಏಕಪಕ್ಷೀಯ ನಿರ್ಧಾರದಿಂದ ತಮಿಳುನಾಡಿನ ಕೃಷಿ ಹಾಗೂ ನೀರಾವರಿ ವ್ಯವಸ್ಥೆಗೆ ಭಾರಿ ಧಕ್ಕೆಯಾಗಲಿದೆ ಎಂದು ವಿಜಯ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಕಾವೇರಿ ನ್ಯಾಯಾಧಿಕರಣದ ಆದೇಶ ಹಾಗೂ ಸುಪ್ರೀಂ ಕೋರ್ಟ್‌ ತೀರ್ಪಿಗೆ ಬದ್ಧವಾಗಿ ಕೆಳಪಾತ್ರದ ರಾಜ್ಯವಾದ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಬೇಕು. ಕರ್ನಾಟಕ ಸಲ್ಲಿಸಿರುವ ಮೇಕೆದಾಟು ಯೋಜನೆಯ ಡಿಪಿಆರ್ ಪ್ರಸ್ತಾವನೆಗೆ ಅನುಮತಿ ನೀಡಬಾರದು ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಸಿಡಬ್ಲ್ಯುಸಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ