LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕದಲ್ಲಿ ಬೆಂಕಿ ಬೀಳುತ್ತೆ ಹುಷಾರ್! ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು: ಭೀಕರ ಬರಗಾಲದಲ್ಲಿಯೂ ಕರ್ನಾಟಕಕ್ಕೆ ಬರೆ ಎಳೆದಿರುವ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ 4 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿದೆ. CWRC ಆದೇಶಕ್ಕೆ ರಾಅಜ್ಯದ ಕಾಅವೇರಿ ಕೊಳ್ಳದ ರೈತರು, ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ರಕ್ತ ಕೊಟ್ಟರೂ ನೀರು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿವೆ.

CWRC ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ತಮಿಳುನಾಡೊಗೆ ನೀರು ಬಿಡಬಾರದು. ತಮಿಳುನಾಡಿಗೆ ಒಂದು ಹನಿ ನೀರು ಹರಿದರೂ ರಾಜ್ಯದಲ್ಲಿ ಬೆಂಕಿ ಬೀಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬರಗಾಲವಿದೆ. ಇಲ್ಲಿನ ರೈತರು ಬೆಳೆಗಳಿಗೆ ನೀರಿಲ್ಲದೇ, ಕುಡಿಯುವ ನೀರಿಲ್ಲದೇ ಸಂಕಷ್ಟದಲ್ಲಿದ್ದಾರೆ. ಇಂತಹ ಸ್ಥಿತಿಯನ್ನು CWRCಗೆ ಅರ್ಥಮಾಡಿಸಬೇಕಿತ್ತು. ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಬೇಕು. ಆದೇಶಕ್ಕೆ ಮಣಿದು ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಒಂದೇ ಒಂದು ಹನಿ ನೀರು ಕೂಡ ಬಿಡಕೂಡದು ಎಂದರು.

ರಾಜ್ಯದ ರೈತರು ಸಂಕಷ್ಟದಲ್ಲಿರುವ ಇಂತಹ ಹೊತ್ತಲ್ಲಿ ತಮಿಳುನಾಡಿಗೆ ನೀರು ಹರಿಸಿ ನಮಗೆ ದ್ರೋಹ ಬಗೆದರೆ ರಾಜ್ಯಾದ್ಯಂತ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ. ಎಂದು ತಿಳಿಸಿದಾರೆ.

ಇದೇ ವೇಳೆ ಕಾಅವೇರಿ ನದಿ ನೀರು ವಿಚಾರವಾಗಿ ಚರ್ಚಿಸಲು ಆಗಸ್ಟ್ 3ರಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ರಾಜ್ಯಕ್ಕೆ ಆಗಮಿಸಲಿದ್ದು, ಉಭಯ ರಾಜ್ಯಗಳ ಸಿಎಂ ಸಭೆ ನಡೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಯಾವ ಕಾರಣಕ್ಕಾಗಿ ಅವರನ್ನು ಆಹ್ವಾನ ಮಾಡಿದ್ದೀರಿ? ಅಜೆಂಡಾ ಏನು? ಮಾತುಕತೆಗೆ ಮಣಿದು ತಮಿಳುನಾಡಿಗೆ ನೀರಿ ಬಿಟ್ಟರೆ ರಾಜ್ಯದಲ್ಲಿ ಬೆಂಕಿ ಬೀಳಲಿದೆ ಹುಷಾರ್ ಎಂದು ಎಚ್ಚರಿಕೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ