LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕಕ್ಕೆ ಮಾರಿ ತಮಿಳುನಾಡಿಗೆ ಉಪಕಾರಿ! ಕರ್ನಾಟಕದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ: ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಕರ್ನಾಟಕಕ್ಕೆ ಮಾರಿ ತಮಿಳುನಾಡಿಗೆ ಉಪಕಾರಿ! ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೂ ಮತ್ತೊಮ್ಮೆ ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು ಬಿಡಲು ಶರಣಾಗಿದೆ. ರಾಜ್ಯದ ಪರ ಸಮರ್ಥ ವಾದ ಮಂಡಿಸಲು ಸಿದ್ಧರಾಗಿ ಎಂದು ಎಷ್ಟು ಬಾರಿ ಎಚ್ಚರಿಸಿದರೂ ನಿರ್ಲಕ್ಷ್ಯ ಮಾಡುತ್ತಾ ಕಾಲಹರಣ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಅವರು ಈಗ ಮತ್ತೊಮ್ಮೆ ಕಾವೇರಿಯ ಮಡಿಲನ್ನು ಬರಿದು ಮಾಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆಯಲು ಹೊರಟಿದ್ದಾರೆ‌.

ಕಾಂಗ್ರೆಸ್ ಸರ್ಕಾರ ಈ ಹಿಂದೆ ಮಾಡಿದ ತಪ್ಪಿನಿಂದ ಈಗಾಗಲೇ ಕರ್ನಾಟಕದ ಜಲಾಶಯಗಳು ಬರಿದಾಗಿದ್ದು ಕನ್ನಡಿಗರು ಹನಿ ನೀರಿಗೂ ಪರದಾಡುವ ದಯನೀಯ ಪರಿಸ್ಥಿತಿ ಇದೆ.

ಸಿಎಂ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ಮುಲಾಜಿಗೆ ಬಿದ್ದು ತಮ್ಮ ಇಂಡಿಯಾ ಮೈತ್ರಿಕೂಟದ ಟಿವಿಕೆ ಸರ್ಕಾರವನ್ನು ಮೆಚ್ಚಿಸಲು ಮತ್ತೊಮ್ಮೆ ಕಾವೇರಿ ನೀರು ಬಿಟ್ಟರೆ ಜನ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದು ಗ್ಯಾರೆಂಟಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸರಿಯಾದ ಅಂಕಿ ಅಂಶ ಸಮೇತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಅಧಿಕಾರಿಗಳು ಹಾಗೂ ವಕೀಲರ ಸಭೆ ನಡೆಸಿ, ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ರಾಜ್ಯದ ಪರವಾಗಿ ಗಟ್ಟಿಯಾದ ವಾದ ಮಂಡಿಸಲು ಸಿದ್ಧತೆ ನಡೆಸಬೇಕು. ಈ ಹಿಂದೆ ಆದ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸಿ ಯಾವುದೇ ಕಾರಣಕ್ಕೂ ಒಂದು ಹನಿ ಕಾವೇರಿ ನೀರು ರಾಜ್ಯದಿಂದ ಹೊರಹೋಗದಂತೆ ತಡೆಯಬೇಕು ಎಂದು ಆಗ್ರಹಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ