ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದ್ದ ವ್ಯಕ್ತಿಯನ್ನೇ ಬಂಧಿಸಿದ್ದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಜುಲೈ 22ರಂದು ರಾತ್ರಿ 11:30ಕ್ಕೆ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಡಾ. ನಾಗೇಂದ್ರಪ್ಪ ಅವರಿಂದ ದೂರು ನೀಡಲಾಗಿತ್ತು. 11:45 ಕ್ಕೆ ದೂರು ನೀಡಿದ್ದ ನಾಗೇಂದ್ರಪ್ಪ ವಿರುದ್ಧವೇ ಕೇಸು ದಾಖಲಿಸಿ ಬಂಧಿಸಲಾಗಿದೆ. ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಅಕ್ರಮ ವಲಸಿಗರನ್ನು ಸರ್ಕಾರ ಪೊಲೀಸರೇ ಬೆಂಬಲಿಸುತ್ತಿದ್ದಾರೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ ಎಂದು ಹೈಕೋರ್ಟ್ ಪ್ರಶ್ನಿಸಿದೆ. ದೇಶದ ಭದ್ರತೆಗೆ ಬೆದರಿಕೆ ಇದ್ದರೂ ವಲಸಿಗರನ್ನು ಬೆಂಬಲಿಸುತ್ತಿದ್ದೀರಾ? ವಲಸಿಗರನ್ನು ಹೊರಗೆ ಕಳುಹಿಸಿ ಎಂದರೆ ದೂರು ನೀಡಿದವರ ಮೇಲೆ ಕೇಸು ದಾಖಲಿಸಿದ್ದೀರಿ ಅಕ್ರಮ ವಲಸಿಗರ ಓಲೈಕೆ ನಿಲ್ಲಬೇಕು ಎಂದು ಹೈಕೋರ್ಟ್ ಹೇಳಿದೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಕ್ರಮ ವಲಸಿಗರ ಗಡಿಪಾರಿಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಬಾಂಗ್ಲಾ ಮೂಲದ ನಜ್ರೀನಾ ವಿರುದ್ಧ ನೀಡಿದ್ದ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದರು. ಪೊಲೀಸರ ಕ್ರಮದ ಬಗ್ಗೆ ಆಗಸ್ಟ್ 6 ಒಳಗೆ ವಿವರಣೆ ನೀಡಲು ಸೂಚಿಸಲಾಗಿದೆ. ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ವಾದ ಮಂಡಿಸಿದ್ದಾರೆ. ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣ ರದ್ದುಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬೆಳ್ಳಂದೂರು ಪೊಲೀಸರ ಈ ನಡೆಗೆ ಅಸಮಾಧಾನಗೊಂಡಿದೆ. ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನೆಸಿ ಅರ್ಜಿದಾರರ ವಿರುದ್ಧದ ಕೇಸ್ಗೆ ತಡೆಯಾಜ್ಞೆ ನೀಡಿದೆ.