ದಾವಣಗೆರೆ: ಮಾಜಿ ಮುಖ್ಯಮಂತ್ರಿ ದಿ. ಜೆ.ಹೆಚ್. ಪಟೇಲ್ ಅವರ ಅನುಯಾಯಿಯಾಗಿದ್ದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಣಿವೆಬಿಳಚಿ ಗ್ರಾಮದ ನಿವಾಸಿ ಪಿ. ಶೇಖರಪ್ಪ(82) ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಸಂಜೆ ಕಣಿವೆಬಿಳಚಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಸುಭದ್ರಾಬಾಯಿ, ಪುತ್ರ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಉದ್ಯೋಗಿ ಶ್ರೀನಿವಾಸರಾವ್ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಬುಧವಾರ ಸಂಜೆ ಕಣಿವೆಬಿಳಚಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜೆ.ಹೆಚ್. ಪಟೇಲರ ಕಟ್ಟಾ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ಚಿರಡೋಣಿ ಮಂಡಲ ಪಂಚಾಯಿತಿ ಪ್ರಧಾನರಾಗಿ ಕಾರ್ಯನಿರ್ವಹಿಸಿದ್ದರು. ನಂತರದಲ್ಲಿ ಅವರು ರಾಜಕೀಯದಿಂದ ದೂರ ಉಳಿದಿದ್ದರು. ಪಿ. ಶೇಖರಪ್ಪ ನಿಧನಕ್ಕೆ ಸ್ಥಳೀಯ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.