LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಡಿಯೋ ವೈರಲ್ ಪ್ರಕರಣ: ಆರ್.ಬಿ.ತಿಮ್ಮಾಪುರ್ ಗೆ ನಾನು ಕರೆ ಮಾಡಿದ್ದು ನಿಜ; ಆಡಿಯೋದಲ್ಲಿನ ಆರಂಭಿಕ ಮಾತಷ್ಟೇ ನನ್ನದು ನಂತರದ ಮಾತುಗಳು ನನ್ನದಲ್ಲ ಎಂದ ನಂಜಯ್ಯಮಠ

ಬಾಗಲಕೋಟೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಗಂಭೀರ ಆರೋಪ ಮಾಡಿದ್ದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವ ಸ್ಥಾನಗಳು ಹರಾಜಾಗಿವೆ. ಈ ಬಗ್ಗೆ ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಶಾಸಕ ನಂಜಯ್ಯಮಠ ಮಾತನಾಡಿದ್ದಾರೆ ಎಂಬ ಆಡೋಯೋವೇ ಪುಷ್ಠಿ ನೀಡುತ್ತವೆ ಎಂದು ಹೇಳಿದ್ದರು. ಅಲ್ಲದೇ ಆಡಿಯೋ ಕೂಡ ಬಿಡುಗಡೆ ಮಾಡಿದ್ದರು.

ಆರ್.ಬಿ.ತಿಮ್ಮಾಪುರ ಹಾಗೂ ನಂಜಯ್ಯಮಠ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ನಂಜಯ್ಯಮಠ ಸ್ಪಷ್ಟನೆ ನೀಡಿದ್ದಾರೆ. ನಾನು ಆರ್.ಬಿ.ತಿಮ್ಮಾಪುರ ಅವರಿಗೆ ಕರೆ ಮಾಡಿ ಮಾತನಾಡಿದ್ದು ನಿಜ. ಆದರೆ 70-80% ಅಂತ ನಾನು ಮಾತನಾಡಿಲ್ಲ. ಅದೆಲ್ಲವನ್ನೂ ತಿರುಚಲಾಗಿದೆ ಎಂದು ಹೇಳಿದರು.

ನಾನೆಲ್ಲೂ ಹೈಕಮಾಂಡ್ ನಾಯಕರು ಹುಚ್ಚರು ಎಂದು ಹೇಳಿಲ್ಲ. ಆಡಿಯೋದಲ್ಲಿರುವ ಆರಂಭಿಕ ಮಾತುಗಳಷೇ ನನ್ನದು ನಂತರದ ಮಾತುಗಳು ನನ್ನದಲ್ಲ. ಎಲ್ಲಾ ಕಟ್ ಕಟ್ ಮಾಡಿ ಜೋಡಿಸಿರುವುದು ಆಡಿಯದಲ್ಲೇ ಸ್ಪಷ್ಟವಾಗುತ್ತದೆ. ಆರಂಭಿಕ ಮಾತಷ್ಟೇ ನನ್ನದು, ಆನಂತರದ ಧ್ವನಿ ಕೂಡ ನನ್ನದಲ್ಲ. ನಾನು ಹೈಕಮಾಂಡ್ ನಾಯಕರ ವಿರುದ್ಧವಾಗಿ ಯಾವುದೇ ಮಾತುಗಳನ್ನು ಆಡಿಲ್ಲ. ಈ ಬಗ್ಗೆ ತನಿಖೆಯಾಗಲಿ ಎಂದರು.

ಆರ್.ಬಿ.ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅವರಿಗೆ ಕರೆ ಮಾಡಿ ಮಾತನಾಡಿದ್ದೆ. ತಿಮ್ಮಾಪುರ ಅವರು ಉತ್ತರ ಕರ್ನಾಅಟಕದ ಹಳೇ ರಾಜಕಾರಣಿ. ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ ಅವರನ್ನೂ ಕೈಬಿಟ್ಟಿದ್ದಾರೆ. ಮಂತ್ರಿಯಾಗಿದ್ದರೆ ಸಂತೋಷವಾಗುತ್ತಿತ್ತು ಎಂದು ಮಾತನಾಡಿದ್ದೇನೆ. ಹೊರತು ಬೇರೆನೂ ಮಾತನಾಡಿಲ್ಲ. ಅನಗತ್ಯವಾಗಿ ನನ್ನ ವಿರುದ್ಧ ಆಡಿಯೋ ಆರೋಪ ಮಾಡಲಾಗಿದೆ. ಈ ಬಗ್ಗೆ ನಾನು ಪೊಲೀಸರಿಗೆ ದೂರು ನೀಡುತ್ತೇನೆ ಎಂದರು.

ನಾವಿಬ್ಬರೇ ಮಾತಾಡಿದ್ದು ವೈರಲ್ ಹೇಗೆ ಆಯ್ತು? ವೈರಲ್ ಗೆ ಯಾರು ಕಾರಣ? ಈ ಬಗ್ಗೆ ಸೈಬರ್ ಪೊಲೀಸರಿಂದ ತನಿಖೆಯಾಗಲಿ. ನನ್ನ ಧ್ವನಿಯನ್ನು ತಿರುಚಿ ವೈರಲ್ ಮಾಡಿರುವವರ ವಿರುದ್ಧ ಕ್ರಮವಾಗಲಿ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ