LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬುಮ್ರಾ ಅನುಪಸ್ಥಿತಿ, ಸ್ಪಿನ್ನರ್‌ಗಳಿಗೆ ಸವಾಲು: ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಸಜ್ಜು

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (ಡಬ್ಲ್ಯುಟಿಸಿ) ಫೈನಲ್ ಪ್ರವೇಶದ ಕನಸು ಹಾಗೂ ಹೆಜ್ಜೆ ಹೆಜ್ಜೆಗೂ ಎದುರಾಗುತ್ತಿರುವ ಸವಾಲುಗಳ ನಡುವೆ ಭಾರತ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧದ ಮಹತ್ವದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಶುಭಮನ್ ಗಿಲ್ ನಾಯಕತ್ವದ ಭಾರತ ತಂಡವು ಸದ್ಯ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಗೌತಮ್ ಗಂಭೀರ್ ಅವರ ಹೆಗಲ ಮೇಲೆ ದೊಡ್ಡ ಜವಾಬ್ದಾರಿಯಿದೆ.

ಬಲಿಷ್ಠ ತಂಡವನ್ನು ಕಟ್ಟುವುದು ಮತ್ತು ಆಟಗಾರರನ್ನು ಫಿಟ್ ಆಗಿರಿಸಿಕೊಳ್ಳುವುದು ಪ್ರಸ್ತುತ ಮುಖ್ಯ ಕೋಚ್ ಗಂಭೀರ್ ಎದುರಿರುವ ದೊಡ್ಡ ಸವಾಲು ಎಂದು ಮಾಜಿ ಸ್ಪಿನ್ನರ್ ಮುರಳಿ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿ ಹಾಗೂ ತಂಡದಲ್ಲಿ ಹೆಚ್ಚಿರುವ ಯುವ ಆಟಗಾರರ ಅನುಭವದ ಕೊರತೆಯು ಸರಣಿಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರವೀಂದ್ರ ಜಡೇಜಾ ತಂಡದಲ್ಲಿದ್ದರೂ, ಅನುಭವಿಗಳ ಕೊನೆಯ ಹಂತದಲ್ಲಿರುವ ಭಾರತೀಯ ಸ್ಪಿನ್ ವಿಭಾಗಕ್ಕೆ ಹೊಸ ನಾಯಕನನ್ನು ಕಂಡುಕೊಳ್ಳುವ ಅನಿವಾರ್ಯತೆ ಎದುರಾಗಿದೆ.

ಕಳೆದ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಏಳು ವಿಕೆಟ್ ಕಬಳಿಸಿದ್ದ ಯುವ ಸ್ಪಿನ್ನರ್ ಮಾನವ್ ಸುತಾರ್ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಲಿದ್ದಾರೆ. ಇನ್ನು ಮತ್ತೊಂದೆಡೆ, ಮ್ಯಾಚ್ ವಿನ್ನರ್ ಎನಿಸಿಕೊಂಡಿದ್ದರೂ ನಿರಂತರ ಅವಕಾಶಗಳಿಂದ ವಂಚಿತರಾಗಿರುವ ಕುಲ್ದೀಪ್ ಯಾದವ್‌ಗೆ ಈ ಸರಣಿಯು ತಮ್ಮ ನಾಯಕತ್ವದ ಸಾಮರ್ಥ್ಯ ಸಾಬೀತುಪಡಿಸಲು ದೊಡ್ಡ ವೇದಿಕೆಯಾಗಲಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಅವರಂತಹ ದಿಗ್ಗಜರ ನಿರ್ಗಮನದ ನಂತರ ತಂಡವು ಪರಿವರ್ತನಾ ಹಂತದಲ್ಲಿದ್ದು, ಬೃಹತ್ ರನ್ ಹಾಗೂ ವಿಕೆಟ್ ಗಳಿಕೆಯ ಕೊರೆತೆಯನ್ನು ತುಂಬುವುದು ಸುಲಭವಲ್ಲ ಎಂದು ಕಾರ್ತಿಕ್ ಎಚ್ಚರಿಸಿದ್ದಾರೆ. ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಮೇಲೇರಲು ಮತ್ತು ಕೆಳಮಟ್ಟದಲ್ಲಿರುವ ರೆಡ್-ಬಾಲ್ ಪ್ರದರ್ಶನವನ್ನು ಸುಧಾರಿಸಿಕೊಳ್ಳಲು ಶ್ರೀಲಂಕಾ ಪ್ರವಾಸವು ಭಾರತಕ್ಕೆ ಅಗ್ನಿಪರೀಕ್ಷೆಯಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಗದ್ದಲ, ಪ್ರತಿಭಟನೆಗಳ ನಡುವೆಯೇ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷಾ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಹೋರಾಟ 600 ಮಂದಿಯ ವಿರುದ್ಧ ಪ್ರಕರಣ ದಾಖಲುಜೇಬಿಲ್ಲದ ಸಮವಸ್ತ್ರದಿಂದ 180 ದಿನಗಳ CCTVವರೆಗೆ: ರಾಮ ಮಂದಿರ ದೇಣಿಗೆ ಎಣಿಕೆಗೆ ಹೊಸ ಕಾವಲುಓಲಾ, ಉಬರ್, ರ್ಯಾಪಿಡೊ ಆ್ಯಪ್‌ಗಳಲ್ಲಿ ರೈಡ್‌ಗೂ ಮುನ್ನವೇ ಕೇಳುತ್ತಿದ್ದ ಟಿಪ್‌ಗೆ ಬ್ರೇಕ್ ಹಾಕಿದ ಕೇಂದ್ರ!BREAKING: ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಜಿರಳೆ, ಫಂಗಸ್ ಪತ್ತೆBREAKING: ನಟ ದರ್ಶನ್ ಗೆ ಬಿಗ್ ಶಾಕ್: ಸಿಸಿಹೆಚ್ ಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಹುಟ್ಟು-ಸಾವು ನಮ್ಮಕೈಲಿಲ್ಲ: ವಿಧಾನಸಭೆಯಲ್ಲಿ ಡಿ.ಸುಧಾಕರ್ ನೆನೆದು ಭಾವುಕರಾದ ಸಿಎಂ ಡಿ.ಕೆ.ಶಿವಕುಮಾರ್ವೈರಿಗೂ ಇಂತಹ ಪರಿಸ್ಥಿತಿ ಬರಬಾರದು; ಮಾಡದ ತಪ್ಪಿಗೆ ಜೈಲುಶಿಕ್ಷೆ ಅನುಭವಿಸಿದ್ದೇನೆ: ಬಿಡಿಗಡೆ ಬಳಿಕ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿಕೆಜೈಲಿನಲ್ಲಿ ಪ್ರಜ್ವಲ್ ಮೊಬೈಲ್ ಬಳಕೆ: ಹೆಚ್.ಡಿ.ರೇವಣ್ಣ ಹೇಳಿದ್ದೇನು?ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ