LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆಗೆ ವಿಮಾ ಹಣ ನೀಡದ ‘ನಿವ ಭೂಪ’ ಕಂಪನಿಗೆ ಗ್ರಾಹಕ ಆಯೋಗದಿಂದ ದಂಡ

ಶಿವಮೊಗ್ಗ :    ಚಿಕಿತ್ಸೆಯ ಬಿಲ್ ಮರುಪಾವತಿ ಮಾಡದೆ ಸೇವಾ ನ್ಯೂನತೆ ಎಸಗಿದ ನಿವ ಭೂಪ ಹೆಲ್ತ್ ಇನ್ಶೂರೆನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಹಾಗೂ ಬಡ್ಡಿ ಸಹಿತ ಪರಿಹಾರ ಪಾವತಿಸುವಂತೆ ಆದೇಶಿಸಿದೆ.

ಶಿವಮೊಗ್ಗ ಗಾಂಧಿ ಬಜಾರ್‌ನ ನಿವಾಸಿ ವಿವೇಕ ಸಿ.ಬಿ. ಎಂಬುವವರು 2021ರಲ್ಲಿ ರೂ. 53,854 ಪಾವತಿಸಿ, 2024 ರವರೆಗಿನ ಅವಧಿಗೆ ನಿವ ಭೂಪ ಹೆಲ್ತ್ ಇನ್ಸೂರೆನ್ಸ್ ಪಾಲಿಸಿ ಪಡೆದಿದ್ದರು. 2023ರಲ್ಲಿ ಅನಾರೋಗ್ಯದ ಕಾರಣ ಅವರು ಶಿವಮೊಗ್ಗದ ಅಶೋಕ ಸಂಜೀವಿನಿ ಆಸ್ಪತ್ರೆಯಲ್ಲಿ ಎರಡು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆಗೆ ರೂ. 25,000 ವರೆಗೆ ಕಂಪನಿಯು ಅನುಮೋದನೆ ನೀಡಿದ್ದರೂ, ಅಂತಿಮ ಬಿಲ್ ವೆಚ್ಚವಾದ ರೂ. 19,342 ಅನ್ನು ಆಸ್ಪತ್ರೆಗೆ ಪಾವತಿಸಿರಲಿಲ್ಲ.

ವಿಮಾ ಕಂಪನಿಯು ಹಲವು ಬಾರಿ ವಿನಂತಿಸಿಕೊಂಡರೂ ಹಾಗೂ 2025ರಲ್ಲಿ ಕಾನೂನು ನೋಟೀಸ್ ನೀಡಿದರೂ ಹಣ ಪಾವತಿಸದ ಕಾರಣ, ದೂರುದಾರರು ತಮ್ಮ ವಕೀಲರ ಮೂಲಕ ಜಿಲ್ಲಾ ಗ್ರಾಹಕ ಆಯೋಗದ ಮೆಟ್ಟಿಲೇರಿದ್ದರು.ದೂರು ಮತ್ತು ದಾಖಲೆಗಳನ್ನು ಪರಿಶೀಲಿಸಿದ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ ಹಾಗೂ ಸದಸ್ಯರಾದ ಬಿ.ಡಿ. ಯೋಗಾನಂದ ಅವರನ್ನೊಳಗೊಂಡ ಪೀಠವು, ವಿಮಾ ಸಂಸ್ಥೆಯಿಂದ ಸೇವಾ ನ್ಯೂನತೆಯಾಗಿರುವುದು ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು, ಈ ಕೆಳಗಿನಂತೆ ಆದೇಶಿಸಿದೆ:

ವಿಮಾ ಕಂಪನಿಯು ಚಿಕಿತ್ಸಾ ವೆಚ್ಚ ರೂ. 19,342 ಅನ್ನು ದಿನಾಂಕ 24/11/2023 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ 45 ದಿನಗಳ ಒಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಶೇ. 10 ರಷ್ಟು ಬಡ್ಡಿಯೊಂದಿಗೆ ಸಂಪೂರ್ಣ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ದೂರುದಾರರಿಗೆ ಉಂಟಾದ ಮಾನಸಿಕ ಹಿಂಸೆಗೆ ರೂ. 10,000 ದಂಡ.ದೂರಿನ ಖರ್ಚಿಗಾಗಿ ಪ್ರತ್ಯೇಕವಾಗಿ ರೂ. 10,000 ಪಾವತಿಸಬೇಕು. ನಿವ ಭೂಪ ಕಂಪನಿಯ ನವದೆಹಲಿ, ಗುರುಗ್ರಾಮ್ ಹಾಗೂ ಶಿವಮೊಗ್ಗ ಶಾಖೆಯ ಅಧಿಕಾರಿಗಳು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ಈ ಪರಿಹಾರವನ್ನು ನೀಡಬೇಕೆಂದು ಆಯೋಗ ಸ್ಪಷ್ಟಪಡಿಸಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಗದ್ದಲ, ಪ್ರತಿಭಟನೆಗಳ ನಡುವೆಯೇ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷಾ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಹೋರಾಟ 600 ಮಂದಿಯ ವಿರುದ್ಧ ಪ್ರಕರಣ ದಾಖಲುಜೇಬಿಲ್ಲದ ಸಮವಸ್ತ್ರದಿಂದ 180 ದಿನಗಳ CCTVವರೆಗೆ: ರಾಮ ಮಂದಿರ ದೇಣಿಗೆ ಎಣಿಕೆಗೆ ಹೊಸ ಕಾವಲುಓಲಾ, ಉಬರ್, ರ್ಯಾಪಿಡೊ ಆ್ಯಪ್‌ಗಳಲ್ಲಿ ರೈಡ್‌ಗೂ ಮುನ್ನವೇ ಕೇಳುತ್ತಿದ್ದ ಟಿಪ್‌ಗೆ ಬ್ರೇಕ್ ಹಾಕಿದ ಕೇಂದ್ರ!BREAKING: ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಜಿರಳೆ, ಫಂಗಸ್ ಪತ್ತೆBREAKING: ನಟ ದರ್ಶನ್ ಗೆ ಬಿಗ್ ಶಾಕ್: ಸಿಸಿಹೆಚ್ ಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಹುಟ್ಟು-ಸಾವು ನಮ್ಮಕೈಲಿಲ್ಲ: ವಿಧಾನಸಭೆಯಲ್ಲಿ ಡಿ.ಸುಧಾಕರ್ ನೆನೆದು ಭಾವುಕರಾದ ಸಿಎಂ ಡಿ.ಕೆ.ಶಿವಕುಮಾರ್ವೈರಿಗೂ ಇಂತಹ ಪರಿಸ್ಥಿತಿ ಬರಬಾರದು; ಮಾಡದ ತಪ್ಪಿಗೆ ಜೈಲುಶಿಕ್ಷೆ ಅನುಭವಿಸಿದ್ದೇನೆ: ಬಿಡಿಗಡೆ ಬಳಿಕ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿಕೆಜೈಲಿನಲ್ಲಿ ಪ್ರಜ್ವಲ್ ಮೊಬೈಲ್ ಬಳಕೆ: ಹೆಚ್.ಡಿ.ರೇವಣ್ಣ ಹೇಳಿದ್ದೇನು?ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ