ಬೆಂಗಳೂರು: ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಆಹಾರ ಇಲಾಖೆ ಆದೇಶಿಸಿತ್ತು.
ಅಂತೆಯೇ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಕುಟುಂಬ ಸದಸ್ಯರ ಇ-ಕೆವೈಸಿ ಪ್ರಕ್ರಿಯೆ ಆರಂಭಿಸಲಾಗಿತ್ತು. ಆದರೆ, ಈ ತಿಂಗಳು ಕೇಂದ್ರ ಸರ್ಕಾರದ ಕೋಟಾದಡಿ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ನೀಡುತ್ತಿರುವುದರಿಂದ ಎರಡೆರಡು ಬಾರಿ ಬೆರಳಚ್ಚು ನೀಡಬೇಕಿದೆ. ನೆಟ್ವರ್ಕ್ ಸಮಸ್ಯೆ ಕೂಡ ಎದುರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಬೆರಳಚ್ಚು ಪಡೆಯಲು ಸಾಧ್ಯವಾಗದೆ ಮತ್ತೊಂದು ದಿನ ಬರಲು ಹೇಳಿ ಪಡಿತರ ನೀಡಿ ಕಳುಹಿಸಲಾಗುತ್ತಿದೆ.
ಹೀಗಿರುವಾಗ ಇ-ಕೆವೈಸಿ ಪ್ರಕ್ರಿಯೆ ನಡೆಸುವುದು ಕಷ್ಟ ಸಾಧ್ಯ. ಹೀಗಾಗಿ ತಾತ್ಕಾಲಿಕವಾಗಿ ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದ್ದು, ಸೆಪ್ಟಂಬರ್ ನಲ್ಲಿ ಇ-ಕೆವೈಸಿ ಮಾಡಿಸುವಂತೆ ಆಹಾರ ಇಲಾಖೆ ಸೂಚಿಸಿದೆ.