LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೇಪಾಳದಲ್ಲಿ ಭೀಕರ ಪ್ರವಾಹ ; ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ ಬಿಡುಗಡೆ

ಬೆಂಗಳೂರು: ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಿಸಲು ಕರ್ನಾಟಕ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ.

ನೇಪಾಳ ಅಥವಾ ಟಿಬೆಟ್‌ ಸ್ವಾಯತ್ತ ಪ್ರದೇಶದಲ್ಲಿ ಸಿಲುಕಿರುವ ಕರ್ನಾಟಕದ ಪ್ರವಾಸಿಗರು, ಯಾತ್ರಿಕರು ಅಥವಾ ನಾಗರಿಕರ ವಿವರಗಳನ್ನು ಸರ್ಕಾರ ಸಂಗ್ರಹಿಸುತ್ತಿದೆ. ಈ ಮಾಹಿತಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಹಂಚಿಕೊಂಡು ರಕ್ಷಣೆ, ಸ್ಥಳಾಂತರ ಮತ್ತು ಅಗತ್ಯ ನೆರವಿಗೆ ಸಮನ್ವಯ ಮಾಡಲಾಗುತ್ತದೆ.

ತುರ್ತು ಸಹಾಯವಾಣಿ

ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಸಂಪರ್ಕ ವ್ಯವಸ್ಥೆಯಲ್ಲಿನ ಅಡಚಣೆಗಳ ಹಿನ್ನೆಲೆಯಲ್ಲಿ, ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಸಿಲುಕಿರುವ ಕರ್ನಾಟಕದವರನ್ನು ಗುರುತಿಸಿ, ಅವರಿಗೆ ಅಗತ್ಯ ನೆರವು ಒದಗಿಸಲು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ರಕ್ಷಣೆ, ಸ್ಥಳಾಂತರ ಹಾಗೂ ಅಗತ್ಯ ಸಹಾಯಕ್ಕಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರ ಕಚೇರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ.

ನೇಪಾಳ ಅಥವಾ ಟಿಬೆಟ್‌ನಲ್ಲಿ ಸಿಲುಕಿರುವವರು, ಅವರ ಕುಟುಂಬಸ್ಥರು ಹಾಗೂ ಪ್ರವಾಸ ಆಯೋಜಕರು ಅಗತ್ಯ ಮಾಹಿತಿಯನ್ನು ಗೂಗಲ್ ಫಾರ್ಮ್ ಮೂಲಕ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ.

ತುರ್ತು ನೆರವಿಗಾಗಿ SEOC ಸಹಾಯವಾಣಿ: 1070 / 080-22253707 ಸಂಖ್ಯೆಗೆ ಸಂಪರ್ಕಿಸಬಹುದು. ಅಥವಾ [email protected] ಇ-ಮೇಲ್‌ಗೆ ಮಾಹಿತಿ ಕಳುಹಿಸಬಹುದು.

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ತೊಂದರೆಗೊಳಗಾದ ಭಾರತೀಯ ನಾಗರಿಕರಿಗೆ ಯಾವುದೇ ಸಹಾಯ ಅಥವಾ ಮಾಹಿತಿಗಾಗಿ ಕೆಳಗಿನ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:

+977 985 131 6807
+977 970 910 7500
+977 981 032 6117

ಈ ಎಲ್ಲಾ ಸಂಖ್ಯೆಗಳು WhatsApp‌ನಲ್ಲಿಯೂ ಲಭ್ಯವಿವೆ.

ಸಹಾಯದ ಅಗತ್ಯವಿರುವ ಭಾರತೀಯ ನಾಗರಿಕರು ಆದಷ್ಟು ಬೇಗ ಈ ಸಂಖ್ಯೆಗಳ ಮೂಲಕ ಸಂಪರ್ಕಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ