LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

೧.೮ ಕೋಟಿ ರೂ. ಮನೆ ಮಾರಿ ಡುಕಾಟಿ ಬೈಕ್ ಖರೀದಿಸಿದ ಬೆಂಗಳೂರು ಉದ್ಯಮಿ: ವೈರಲ್ ಆಯ್ತು ‘ದುಕಾನ್’ ಸ್ಥಾಪಕನ ಪೋಸ್ಟ್

ತಮ್ಮ ಅಪಾರ ಮೌಲ್ಯದ ಮನೆಯನ್ನು ಮಾರಿ ದುಬಾರಿ ಡುಕಾಟಿ ಬೈಕ್ ಖರೀದಿಸಿದ ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಉದ್ಯಮಿಯೊಬ್ಬರ ನಿರ್ಧಾರ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ‘ದುಕಾನ್’ ಆನ್‌ಲೈನ್ ಸಂಸ್ಥೆಯ ಸಹ-ಸಂಸ್ಥಾಪಕ ಸುಭಾಷ್ ಚೌಧರಿ ಅವರು ಮುಂಬೈನಲ್ಲಿದ್ದ ತಮ್ಮ ಮನೆಯನ್ನು ಮಾರಿ, ‘ಡುಕಾಟಿ ಎಕ್ಸ್‌ಡೈವೆಲ್’ ಬೈಕ್ ಖರೀದಿಸಿದ ಕಾರಣವನ್ನು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಹಂಚಿಕೊಂಡಿದ್ದಾರೆ.

೨೦೧೮ ರಲ್ಲಿ ಮುಂಬೈನಲ್ಲಿ ೧.೮ ಕೋಟಿ ರೂಪಾಯಿ ನೀಡಿ ಮನೆ ಖರೀದಿಸಿದ್ದಾಗಿ ತಿಳಿಸಿರುವ ಸುಭಾಷ್, ಉದ್ಯಮದ ನಿಮಿತ್ತ ಬೆಂಗಳೂರಿಗೆ ಬಂದ ಮೇಲೂ ತಿಂಗಳಿಗೆ ಲಕ್ಷಕ್ಕೂ ಹೆಚ್ಚು ರೂಪಾಯಿ ಇಎಮ್‌ಐ ಪಾವತಿಸುತ್ತಿದ್ದರು. ಹೂಡಿಕೆಯ ಹೆಸರಿನಲ್ಲಿ ಭವಿಷ್ಯಕ್ಕಾಗಿ ಹಣ ಉಳಿಸಲು ಹೋಗಿ ವರ್ತಮಾನದ ಸಂತೋಷವನ್ನು ಮುಂದೂಡುತ್ತಿರುವುದು ಅವರಿಗೆ ಅರಿವಾಯಿತು. ಉದ್ಯಮ ನಿರ್ವಹಣೆಯ ನಿರಂತರ ಒತ್ತಡ ಮತ್ತು ಚಿಂತೆಯಿಂದ ಹೊರಬರಲು ೨೦ ವರ್ಷಗಳ ಗೃಹ ಸಾಲಕ್ಕಿಂತ ತಮಗೆ ಮಾನಸಿಕ ನೆಮ್ಮದಿ ಮುಖ್ಯವೆನಿಸಿತು ಎಂದು ಅವರು ಹೇಳಿದ್ದಾರೆ.

ಅಂತಿಮವಾಗಿ ಆ ಮನೆಯನ್ನು ಮಾರಿ ೧೨೬೨ ಸಿಸಿ ಸಾಮರ್ಥ್ಯದ ಡುಕಾಟಿ ಬೈಕ್ ಖರೀದಿಸಿದ ಸುಭಾಷ್, ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ ರೌಂಡ್ಸ್ ಹೊಡೆಯುವಾಗ ಸಿಗುವ ಸಂತಸ ವರ್ಣಿಸಲಸಲಸಾಧ್ಯ ಎಂದಿದ್ದಾರೆ. ರಸ್ತೆಯಲ್ಲಿ ಸಿಕ್ಕ ಹಿರಿಯ ನಾಗರಿಕರೊಬ್ಬರು ಮತ್ತು ಬೈಕ್ ಪ್ರೇಮಿಯೊಬ್ಬರಿಗೆ ತಮ್ಮ ಬೈಕ್ ಓಡಿಸಲು ಅವಕಾಶ ನೀಡಿದ ಅನುಭವವನ್ನು ಹಂಚಿಕೊಂಡಿರುವ ಅವರು, ಬಯಸಿದ ಕನಸುಗಳನ್ನು ಈಡೇರಿಸಿಕೊಳ್ಳಲು ವಯಸ್ಸಾಗುವವರೆಗೆ ಕಾಯುವುದು ಬುದ್ಧಿವಂತಿಕೆಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸುಭಾಷ್ ಅವರ ಈ ಪೋಸ್ಟ್ ವೈರಲ್ ಆಗಿದ್ದು, ಅನೇಕ ನೆಟ್ಟಿಗರು ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಜೀವನ ಎಂದರೆ ಕ್ಷಣಗಳನ್ನು ಆನಂದಿಸುವುದು ಮತ್ತು ಮನಸ್ಸಿಗೆ ಸಂತೋಷ ನೀಡುವ ವಿಷಯಗಳಲ್ಲಿ ಹೂಡಿಕೆ ಮಾಡುವುದು ಎಂದು ಹಲವರು ಕಮೆಂಟ್ ಮಾಡಿದ್ದಾರೆ.

“>

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ