LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ 'ಬೆಳೆ ವಿಮೆ ಹಣ' ಕಟ್ಟದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು : ದೇವರ ಹಿಪ್ಪರಗಿ ತಾಲ್ಲೂಕಿನ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ ವಿಚಾರದಲ್ಲಿ ನಿರ್ಲಕ್ಷ ತೋರಿರುವ ಸ್ವಸಹಾಯ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು ಸಿಎಂ ಸೂಚನೆ ನೀಡಿದರು.

ಮಂಗಳವಾರ ಬೆಳ್ಳಂಬೆಳಗ್ಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಶಿವಕುಮಾರ್ ಅವರು ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ, ಅವರ ಸಮಸ್ಯೆ ಆಲಿಸಿದರು.

ದೇವರ ಹಿಪ್ಪರಗಿಯ ರೈತರೊಬ್ಬರು ಸಿಎಂ ಅವರನ್ನು ಭೇಟಿ ಮಾಡಿ ನಾವು ಬೆಳೆ ವಿಮೆಗೆ ಸ್ವಸಹಾಯ ಸೊಸೈಟಿಗೆ ಹಣ ಕಟ್ಟಿದ್ದು, ಅವರು ಡಿಸಿಸಿ ಬ್ಯಾಂಕಿಗೆ ಹಣ ಪಾವತಿ ಮಾಡದ ಕಾರಣ ನಮ್ಮ ವಿಮೆ ತಿರಸ್ಕೃತಗೊಂಡಿದೆ ಎಂದು ನಮಗೆ ಮೆಸೇಜ್ ಬಂದಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ರೈತರು ಹಣ ಪಾವತಿ ಮಾಡಿರುವ ಪಟ್ಟಿ ಪರಿಶೀಲಿಸಿದ ಸಿಎಂ, ಕೂಡಲೇ ನಿರ್ಲಕ್ಷ ತೋರಿರುವ ಅಧಿಕಾರಿಯನ್ನು ವಜಾಗೊಳಿಸುವಂತೆ ಸೂಚನೆ ನೀಡಿದರು.

ಖುದ್ದಾಗಿ ತೂಕ ಪರಿಶೀಲನೆ:

ನೀವು ಈರುಳ್ಳಿ ತರಬೇಕಾದರೆ ಪೊಲೀಸರು ತಡೆದು ಹಣ ಪಡೆಯುತ್ತಾರಾ? ರೈತರಿಗೆ ಸರಿಯಾದ ಸಮಯಕ್ಕೆ ಹಣ ನೀಡುತ್ತಾರೆಯೇ? ರೈತರಿಂದ ಮಾರುಕಟ್ಟೆಯವರು ಕಮಿಷನ್ ಏನಾದರೂ ಪಡೆಯುತ್ತಾರಾ? ಪ್ರತಿ ಎಕರೆಗೆ ಎಷ್ಟು ಖರ್ಚು ಆಗುತ್ತದೆ? ನಿಮ್ಮ ಬೆಳೆಯ ತೂಕ ಸರಿಯಾಗಿ ಮಾಡುತ್ತಿದ್ದಾರಾ? ಎಂದು ರೈತರನ್ನು ವಿಚಾರಿಸಿ, ಮಾಹಿತಿ ಪಡೆದರು. ತಾವೇ ಖುದ್ದಾಗಿ ಈರುಳ್ಳಿ ತೂಕವನ್ನು ಪರಿಶೀಲನೆ ನಡೆಸಿದರು. 

ಕಲಬುರ್ಗಿ, ಬೀದರ್, ವಿಜಯಪುರ ಮಾರುಕಟ್ಟೆಯಲ್ಲಿ 8ರಿಂದ 10ರೂ. ಕಮಿಷನ್ ಪಡೆಯುತ್ತಾರೆ. ಯಶವಂತಪುರ ಮಾರುಕಟ್ಟೆಯಲ್ಲಿ ರೈತರಿಂದ ಕಮಿಷನ್ ಪಡೆಯುವುದಿಲ್ಲ. ಹೀಗಾಗಿ ನಾವು ಇಲ್ಲಿಗೆ ತಂದು ಹಾಕುತ್ತೇವೆ ಎಂದು ರೈತರು ಮಾಹಿತಿ ನೀಡಿದರು.

ಈ  ಬಾರಿ ಮಳೆ ಕೊರತೆಯಿಂದಾಗಿ ಇಳುವರಿ ಕಡಿಮೆಯಾಗಿದೆ. ಎಕರೆಗೆ 150-200 ಪ್ಯಾಕೆಟ್ ಈರುಳ್ಳಿ ಬರುತ್ತದೆ. ಆದರೆ ಈ ಬಾರಿ ಕೇವಲ 50 ಪ್ಯಾಕೆಟ್ ಮಾತ್ರ ಸಿಕ್ಕಿದೆ ಎಂದು ವಿವರಿಸಿದರು. ಮಳೆ ಹೆಚ್ಚಾದರೆ ಈರುಳ್ಳಿ ಜಮೀನಿನಲ್ಲೇ ಕೊಳೆಯುತ್ತದೆ ಆಗ ಸರಿಯಾದ ಬೆಲೆ ಸಿಗುವುದಿಲ್ಲ. ಅದನ್ನು ಮಾರುಕಟ್ಟೆಗೆ ತಂದು ಹಾಕಲು ಆಗುವ ಖರ್ಚಿನಷ್ಟು ಹಣ ಸಿಗುವುದಿಲ್ಲ ಎಂದು ರೈತರು ವಿವರಿಸಿದರು.

ಬೆಳೆ ವಿಮೆ ಸಿಕ್ಕಿಲ್ಲ ಎಂದು ಅಳಲು

ಬೆಳೆಗೆ ವಿಮೆ ಮಾಡಿಸುವುದಿಲ್ಲವೇ ಎಂದು ಸಿಎಂ ಕೇಳಿದಾಗ, ನಾವು ಹೆಕ್ಟೆರ್ ಗೆ 6,500 ರೂ. ವಿಮೆ ಕಟ್ಟಿದ್ದರೂ ನಮಗೆ ಏನೂ ಸಿಕ್ಕಿಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೈತ ತಮ್ಮ ನೋವು ತೋಡಿಕೊಂಡರು. ರೈತರ ಮಾಹಿತಿ ಪಡೆಯುವಂತೆ ಸಿಎಂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಕಾರ್ಯವೈಖರಿ ಶ್ಲಾಘಿಸಿದ ರೈತರು

ಕಳೆದ 30 ವರ್ಷಗಳಲ್ಲಿ ಯಾವುದೇ ಸಚಿವರು ಮುಖ್ಯಮಂತ್ರಿಗಳು ಮಾರುಕಟ್ಟೆಗೆ ಬಂದು ರೈತರ ಸಮಸ್ಯೆಗಳನ್ನು ವಿಚಾರಿಸಿರಲಿಲ್ಲ. ನೀವು ಬಂದು ಪರಿಸ್ಥಿತಿ ಪರಿಶೀಲನೆ ಮಾಡುತ್ತಿರುವುದು ಬಹಳ ಸಂತೋಷ ತಂದಿದೆ ಎಂದು ರೈತರು ಸಿಎಂ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಹೆಚ್ಚು ಹಣ ಪಡೆದರೆ ಹೇಳಿ ಮಟ್ಟ ಹಾಕುವೆ:

ಮಾರುಕಟ್ಟೆಯಲ್ಲಿನ ಮಂಡಿ ವರ್ತಕರೊಂದಿಗೆ ಮಾತುಕತೆ ನಡೆಸಿದ ಸಿಎಂ, "ನೀವು ಎಪಿಎಂಸಿಗೆ ಎಷ್ಟು ಪಾವತಿ ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ವರ್ತಕರು ನೂರು ರೂ.ಗೆ 60 ಪೈಸೆ ಪಾವತಿ ಮಾಡುತ್ತೇವೆ ಎಂದರು. ಬೇರೆ ವರ್ತಕ 1 ರೂ. ಪಾವತಿ ಮಾಡುತ್ತಿರುವುದಾಗಿ ತಿಳಿಸಿದರು. ಆ ರೀತಿ ಏನಾದರೂ ಹೆಚ್ಚು ಹಣ ಪಡೆದರೆ ನನಗೆ ಹೇಳಿ ಅವರನ್ನು ನಾನು ಮಟ್ಟ ಹಾಕುತ್ತೇನೆ" ಎಂದು ಹೇಳಿದರು.

ರೈತರಿಂದ ನೇರ ಖರೀದಿ ವೇಳೆ ತೂಕ ಮೋಸ ಆಗದಂತೆ ಕ್ರಮ:

ಕೆಲವರು ಎಪಿಎಂಸಿ ಮಾರುಕಟ್ಟೆಗೆ ಬರುವುದಿಲ್ಲ ನೇರವಾಗಿ ರೈತರಿಂದ ಖರೀದಿ ಮಾಡುತ್ತಾರೆ. ಅಲ್ಲಿ ಒಂದು ಬೆಲೆ ನಿಗದಿ ಮಾಡಿ ತೂಕ ಹೆಚ್ಚು ಕಮ್ಮಿ ಮಾಡಿ ತೆಗೆದುಕೊಂಡು ಹೋಗುತ್ತಾರೆ ಎಂದು ಹೇಳಿದರು. ಆಗ ಸಿಎಂ, ಈ ರೀತಿ ರೈತರಿಂದ ನೇರವಾಗಿ ಖರೀದಿ ಮಾಡುವವರು ತೂಕದಲ್ಲಿ ಹೆಚ್ಚು ಕಮ್ಮಿ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೂಡ್ಲಿಗಿಯ ರೈತನ ಮನೆಗೆ ವಿದ್ಯುತ್ ಸಂಪರ್ಕದ ಭರವಸೆ

ಕೂಡ್ಲಿಗಿಯ ಹೊಸಹಟ್ಟಿ ಗ್ರಾಮದ ಆಂಜನಪ್ಪ ಎಂಬ ಈರುಳ್ಳಿ ಬೆಳೆದ ರೈತನ ಜೊತೆ ಮಾತನಾಡುತ್ತಿರುವಾಗ, ಬೆಳೆಗೆ ನೀರಿನ ವ್ಯವಸ್ಥೆ ಹೇಗೆ ಎಂದು ಕೇಳಿದರು. ಅದಕ್ಕೆ ರೈತ, ನಾನು ತೋಟದಲ್ಲಿ ಮನೆ ಕಟ್ಟಿಕೊಂಡಿದ್ದು ಅದಕ್ಕೆ ವಿದ್ಯುತ್ ಸಂಪರ್ಕಕ್ಕಾಗಿ ಮೂರು ಬಾರಿ ಅರ್ಜಿ ಹಾಕಿದರೂ ಸಂಪರ್ಕ ಸಿಕ್ಕಿಲ್ಲ. ಕೇವಲ ನನಗೆ ಮಾತ್ರವಲ್ಲ ಇದೇ ರೀತಿ ಹತ್ತಾರು ಮನೆಗಳಿವೆ ಎಂದು ಸಮಸ್ಯೆ ಹೇಳಿಕೊಂಡರು. ರೈತನ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, "ನಾನು ಪ್ರಜಾಸೇವೆ ಕಾರ್ಯಕ್ರಮ ಮಾಡಿದಾಗ, ಬಂದು ನನಗೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ ಎಂದು ಅರ್ಜಿ ನೀಡಬಾರದೇ ಎಂದರು. ಯೋಚನೆ ಮಾಡುವುದು ಬೇಡ. ಎಲ್ಲರಿಗೂ ವಿದ್ಯುತ್ ಸಂಪರ್ಕ ಸಿಗುವಂತೆ ಮಾಡಲಾಗುವುದು" ಎಂದು ಭರವಸೆ ನೀಡಿದರು.

"ನಿಮ್ಮ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ, 10 ಕೆಜಿ ಅಕ್ಕಿ ಸಿಗುತ್ತಿದೆಯೇ? ಎಂದು ವಿಚಾರಿಸಿದರು. ಆಗ ಗ್ಯಾರಂಟಿ ಯೋಜನೆಗಳು ನಮಗೆ ಸಿಗುತ್ತಿದ್ದು, ಅದರಿಂದ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಕ್ಕಳನ್ನು ಕೆಲಸಕ್ಕೆ ಬಳಸಿದವರನ್ನು ಬಂಧಿಸಿ

ಎಪಿಎಂಸಿ ಮಾರುಕಟ್ಟೆಯಲ್ಲಿ ಮಕ್ಕಳು ಕೂಡ ಕೆಲಸ ಮಾಡುತ್ತಿರುವುದನ್ನ ಗಮನಿಸಿದ ಸಿಎಂ ಸ್ಥಳದಲ್ಲೇ ಕಿಡಿಯಾದರು. "ಮಕ್ಕಳ ಕೈಯಲ್ಲಿ ಕೆಲಸ ಮಾಡಿಸುವವರು ಹಾಗೂ ಕೆಲಸಕ್ಕೆ ಕಳಿಸಿದವರನ್ನ ಸಾಯಂಕಾಲದೊಳಗೆ ಬಂಧಿಸುವಂತೆ" ಸೂಚನೆ ನೀಡಿದರು.

"ತಕ್ಷಣವೇ ಕ್ರಮ ತೆಗೆದುಕೊಳ್ಳದಿದ್ರೆ ಸಂಬಂಧಪಟ್ಟ ಸರ್ಕಲ್ ಇನ್ಸ್‌ಪೆಕ್ಟ‌ರ್, ಡಿಎಸ್ಪಿ, ಎಸಿಪಿ ಹಾಗೂ ಡಿಸಿಪಿ ಸೇರಿದಂತೆ ಪೊಲೀಸರನ್ನು ಅಮಾನತುಗೊಳಿಸುವುದಾಗಿ" ಎಚ್ಚರಿಕೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
CWRC ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ನಿರ್ಧಾರ: ಸಚಿವ ಚಲುವರಾಯಸ್ವಾಮಿಕರ್ನಾಟಕಕ್ಕೆ ಮತ್ತೊಂದು ಆಘಾತ: ತಮಿಳುನಾಡಿಗೆ ಮತ್ತೆ ನೀರು ಹರಿಸಲು CWRC ಸೂಚನೆKPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಐಡಿ ತನಿಖೆಯಲ್ಲಿ ₹12 ಕೋಟಿ ಡೀಲಿಂಗ್ ಬಯಲುBREAKING: ಜೈಲಿನಲ್ಲಿ ಅಕ್ರಮ ಮೊಬೈಲ್ ಬಳಕೆ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆಸ್ವಿಗ್ಗಿ ಪ್ರಿಯರ ಗಮನಕ್ಕೆ: ಆಹಾರ ಸುರಕ್ಷತಾ ದೂರುಗಳಿಗೆ 24x7 ಸಹಾಯವಾಣಿ ಆರಂಭBIG NEWS: ಮಹದೇವಪ್ಪಣ್ಣನೇ ಆ ಮನೆಲಿ ಇರಲಿ, ನಂದೇನೂ ತಕರಾರಿಲ್ಲ: ಸಚಿವ ಬೈರತಿ ಸುರೇಶ್ ಸ್ಪಷ್ಟನೆರೈತರ 'ಬೆಳೆ ವಿಮೆ ಹಣ' ಕಟ್ಟದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ಸೂಚನೆಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಜಯ: ರಂಜನ್ ರಾವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ಗ್ಯಾರಂಟಿಯಿಂದ ಜನರು ಕೇಂದ್ರದ ಬೆಲೆ ಏರಿಕೆ ತಡೆದುಕೊಂಡಿದ್ದಾರೆ: ಸಚಿವ ಈಶ್ವರ ಖಂಡ್ರೆ ಗ್ಯಾರಂಟಿಯೂ ಜಾರಿ, ರಾಜ್ಯದ ಅಭಿವೃದ್ಧಿಯೂ ಖಾತ್ರಿ:ಈಶ್ವರ ಖಂಡ್ರೆರಾಜ್ಯ ಸರ್ಕಾರದಕ ಒತ್ತಡಕ್ಕೆ ಮಣಿಯದೇ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಅನುಮತಿ ನೀಡಬೇಕು: ಬಿ.ವೈ.ವಿಜಯೇಂದ್ರ