LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಲೈಮ್ಯಾಕ್ಸ್‌ ಘಟ್ಟ ತಲುಪಿದ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಜಿಲ್ಲೆಗೆ ಎಂಟ್ರಿ ಕೊಟ್ಟ ಬಿಜೆಪಿ ನಾಯಕರು

ಬಳ್ಳಾರಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಇದೀಗ ಮುಕ್ತಾಯದ ಹಂತ ತಲುಪಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಿಂದ ಆರಂಭಗೊಂಡಿದ್ದ ಈ ಪಾದಯಾತ್ರೆಯು ಬರೋಬ್ಬರಿ 170 ಕಿಲೋಮೀಟರ್ ದೂರ ಕ್ರಮಿಸಿ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಪ್ರವೇಶಿಸಿದೆ.

ಭವ್ಯ ಸ್ವಾಗತ ಹಾಗೂ ಜನ ಸಂಪರ್ಕ:

ಪಾದಯಾತ್ರೆಯ 9ನೇ ದಿನದ ಭಾಗವಾಗಿ ಸಂಡೂರು ಕ್ಷೇತ್ರದ ಕುಡತಿನಿಯಿಂದ ಪ್ರಯಾಣ ಬೆಳೆಸಿದ ನಾಯಕರು, ಸಾಗುವ ಮಾರ್ಗದಲ್ಲೆಲ್ಲಾ ಹೆಜ್ಜೆ ಹಾಕಿದರು. ಈ ವೇಳೆ ಕಾರ್ಯಕರ್ತರು ಹಾಗೂ ಬೆಂಬಲಿತ ಅಭಿಮಾನಿಗಳು ಹೂಮಳೆ ಸುರಿಸಿ, ಬೃಹತ್ ಹಾರಗಳನ್ನು ಹಾಕಿ ಅದ್ಧೂರಿಯಾಗಿ ಬರಮಾಡಿಕೊಂಡರು. ಮಾರ್ಗಮಧ್ಯೆ ಕುಡತಿನಿಯ ಭೂ ಸಂತ್ರಸ್ತರನ್ನು ಭೇಟಿಯಾದ ವಿಜಯೇಂದ್ರ, ಅವರ ಕುಂದುಕೊರತೆಗಳನ್ನು ಆಲಿಸಿದರು. ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಮ್ಮ ಈ ಸುದೀರ್ಘ ಹೋರಾಟಕ್ಕೆ ಮಣಿದಿರುವ ಮುಖ್ಯಮಂತ್ರಿಗಳು ಇದೀಗ ಬಡವರ ಹಾಗೂ ಕಾರ್ಮಿಕರ ಜೊತೆ ಸಂವಾದ ನಡೆಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು.

ಗುರುವಾರ ಬೃಹತ್ ರಣಕಹಳೆ:

ಪಾದಯಾತ್ರೆಯು ನಗರದ ಪ್ರಮುಖ ವೃತ್ತಗಳಾದ ಅಲ್ಲಿಪುರ, ಸುಧಾ ಕ್ರಾಸ್, ರೇಡಿಯೋ ಪಾರ್ಕ್, ಕೌಲ್ ಬಜಾರ್, ಮೋತಿ ಸರ್ಕಲ್ ಹಾಗೂ ರಾಯಲ್ ಸರ್ಕಲ್ ಮೂಲಕ ಸಾಗಿ ಕನಕದುರ್ಗಮ್ಮ ದೇವಸ್ಥಾನದ ಬಳಿ ತಲುಪಲಿದೆ. ಗುರುವಾರ ಬೆಳಿಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ನಾಯಕರು ಪಾದಯಾತ್ರೆ ಮೂಲಕವೇ ಸಮಾವೇಶದ ವೇದಿಕೆಗೆ ಆಗಮಿಸಲಿದ್ದಾರೆ. ಸಂಜೆ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಯಲಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.

ಅಡ್ಡಿಪಡಿಸುತ್ತಿದೆ ಸರ್ಕಾರ – ಕಮಲ ನಾಯಕರ ಆಕ್ರೋಶ:

ಸಮಾವೇಶಕ್ಕೆ ಮುನ್ಸಿಪಲ್ ಮೈದಾನ ನೀಡಲು ಜಿಲ್ಲಾಡಳಿತ ವಿಳಂಬ ಮಾಡಿದ್ದು ಮತ್ತು ನಗರದಲ್ಲಿ ಹಾಕಲಾಗಿದ್ದ ಬಿಜೆಪಿ ಬ್ಯಾನರ್ ಹಾಗೂ ಬಾವುಟಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿರುವುದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಕುಮ್ಮಕ್ಕಿನಿಂದಲೇ ಈ ರೀತಿಯ ಅಡೆತಡೆಗಳನ್ನು ಉಂಟುಮಾಡಲಾಗುತ್ತಿದೆ ಎಂದು ನಾಯಕರು ದೂರಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಬನ್ನಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ

ಬಳ್ಳಾರಿ: ನಾಳೆ ಸಂಜೆ ನಾಲ್ಕು ಗಂಟೆಗೆ ಈ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಇವತ್ತು ಅಭಿಮಾನಿಗಳು ಬರಲಿದ್ದಾರೆ. ಎಲ್ಲಾ ಕಾರ್ಯಕರ್ತರು, ತಾಯಂದಿರು, ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಲ್ನಡಿಗೆ ಯಶಸ್ವಿಯಾಗಿದೆ. ದಲಿತ ವಿರೋಧಿ, ಬಡವರ ವಿರೋಧಿ, ರೈತ ವಿರೋಧಿ, ಮಹಿಳಾ ವಿರೋಧಿ, ಯುವಕರ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಈ ಬೃಹತ್ ಪಾದಯಾತ್ರೆ ನಡೆದಿದೆ. ಈ ಸರಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಂಥ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬಣ್ಣ ಬಯಲು ಮಾಡುವ ಈ ಅಭೂತಪೂರ್ವ ಪಾದಯಾತ್ರೆ ನಾಳೆ ಸಮಾರೋಪಗೊಳ್ಳಲಿದೆ. ತಾವು ಎಲ್ಲರೂ ಕೂಡ ದೊಡ್ಡ ಸಂಖ್ಯೆಯಲ್ಲಿ ಬಂದು ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು ಅಂತ ಹೇಳಿ ವಿನಂತಿಸಿದರು.

ನಾಲ್ಕು ಗಂಟೆಗೆ ಸರಿಯಾಗಿ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ಬರಬೇಕು. ನಾಲ್ಕುವರೆಗೆ ಬೃಹತ್ ಬಹಿರಂಗ ಸಭೆ ಕಾರ್ಯಕ್ರಮ ಪ್ರಾರಂಭ ಆಗಲಿದೆ. ನಾಲ್ಕು ಗಂಟೆಗೆ ಸರಿಯಾಗಿ ಈ ಪಾದಯಾತ್ರೆ ಪ್ರಾರಂಭ ಆಗುತ್ತದೆ. ನಾಲ್ಕುವರೆಗೆ ಬಹಿರಂಗ ಸಭೆ ಇದೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆಸ್ಟಾರ್ಟ್‌ಅಪ್‌ಗಳಿಗೆ ಸುವರ್ಣಾವಕಾಶ: 'ಸರ್ಕಾರ ಮೊದಲು' ಯೋಜನೆಗೆ ಸಚಿವ ಸಂಪುಟ ಅಸ್ತು, ಪ್ರತಿ ಸಂಸ್ಥೆಗೆ ₹25 ಲಕ್ಷದವರೆಗೆ ಸಹಾಯಧನಕಲಬುರಗಿಯಲ್ಲಿ ‘LEAP ಬೆಳವಣಿಗೆ ಪ್ರಯೋಗಾಲಯ’ ಸ್ಥಾಪನೆ: ನಿವೇಶನ ಹಂಚಿಕೆಗೆ ಸಚಿವ ಸಂಪುಟ ಅಸ್ತುಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲಗಳ ಸಂಚಾರBREAKING: ಕೆಪಿಎಸ್‌ಸಿ ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ, ಬಸವರಾಜ್ ಕನ್ನಾಳೆಗೆ 14 ದಿನ ನ್ಯಾಯಾಂಗ ಬಂಧನ100 ದಿನ, ನೂರಾರು ಅಭಿವೃದ್ಧಿ: ಇದು 'ಗ್ರಾಮೀಣಾಭಿವೃದ್ಧಿ'ಯಲ್ಲಿ 'ಸಚಿವ ಈಶ್ವರ ಖಂಡ್ರೆ' ಸಾಧನೆಯ ರಿಪೋರ್ಟ್ ಕಾರ್ಡ್!ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಲೇಖಕ ಡಾ.ಮೂಡ್ನಾಕೂಡು ಚಿನ್ನಸ್ವಾಮಿBIG NEWS: ಸೆ.21 ರಿಂದ ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ಆರಂಭ: ಕಸ್ತೂರಿರಂಗನ್ ವರದಿ, ರೈತರ ಸಮಸ್ಯೆಗಳ ಚರ್ಚೆಕ್ಲೈಮ್ಯಾಕ್ಸ್‌ ಘಟ್ಟ ತಲುಪಿದ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಜಿಲ್ಲೆಗೆ ಎಂಟ್ರಿ ಕೊಟ್ಟ ಬಿಜೆಪಿ ನಾಯಕರುರಾಜ್ಯದಲ್ಲಿ ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣ ನಿಯಮ ಸರಳೀಕರಣ: ಮಧ್ಯಂತರ ವರದಿಯಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಮಾಹಿತಿ