LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಲೇಖಕ ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು, ಸೆಪ್ಟೆಂಬರ್ 9, 2026: ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಬೇಕು ಎಂದು  ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲೇಖಕ ಮತ್ತು ಕವಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಪ್ರತಿಪಾದಿಸಿದ್ದಾರೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಮತ್ತು ನಿಗಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಪಿ. ಅವರ ಅಧ್ಯಕ್ಷತೆಯಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಅಂಬೇಡ್ಕರ್ ಚಿಂತನೆಯ ತಿರುಳು, ಪ್ರಗತಿಪರ ವಿಚಾರಗಳನ್ನು ಪಠ್ಯಗಳಲ್ಲಿ ಒಳಗೊಂಡ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು. ಆಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ," ಎಂದರು.

"ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ದಲಿತರಿಗೆ ಮೀಸಲಾದ ಸೊತ್ತಲ್ಲ, ಸಾಮಾನ್ಯರ ಸೊತ್ತು. ಈಗಿನ ಯುವ ಪೀಳಿಗೆಗೆ ಅಂಬೇಡ್ಕರ್ ಪ್ರಿಯರಾಗುತ್ತಿದ್ದಾರೆ. ಇತ್ತೀಚೆಗೆ ಅಂಬೇಡ್ಕರ್ ಅವರ ಹೆಸರಿನಲ್ಲಿ ಬೀದಿಗಿಳಿದು ಹೋರಾಡಿದ ಜೆನ್ಝಿ ಆಂದೋಲನ ಇದಕ್ಕೆ ಉದಾಹರಣೆ," ಎಂದು ಹೇಳಿದರು.

ಅಂಬೇಡ್ಕರ್ ಜಯಂತಿ ಅಂಗವಾಗಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ನಿಗಮದ ಪರಿಶಿಷ್ಟ ಜಾತಿ ಮತ್ತು ವರ್ಗದ ಸಿಬ್ಬಂದಿಯ 35 ಮಕ್ಕಳಿಗೆ ಮೂರು ಗ್ರಾಂನ ಚಿನ್ನದ ಪದಕ ಮತ್ತು ಪ್ರಮಾಣ ಪತ್ರ ನೀಡಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.

ಕೆಪಿಸಿಎಲ್ ಹಣಕಾಸು ನಿರ್ದೇಶಕ ಆರ್.ನಾಗರಾಜ, ತಾಂತ್ರಿಕ ನಿರ್ದೇಶಕ ಎಂ.ಆರ್.ಗಂಗಾಧರ್, ಮಾನವ ಸಂಪನ್ಮೂಲ ನಿರ್ದೇಶಕಿ ರೇಖಾ ಟಿ., ಮಾನವ ಸಂಪನ್ಮೂಲ ವಿಭಾಗ ಪ್ರಧಾನ ಪ್ರಬಂಧಕಿ ಡಾ.ಆಶಾ ಎಸ್., ಕೆಪಿಸಿಎಲ್ ನೌಕರರ ಸಂಘಧ ಅಧ್ಯಕ್ಷರೂ ಆದ ಆಡಳಿತ ಮಂಡಳಿ ನಿರ್ದೇಶಕ ವೀರೇಂದ್ರ ಕೆ., ನಿಗಮದ ಪ.ಜಾತಿ ಮತ್ತು ವರ್ಗದ ನೌಕರಕರ ಸಂಘದ ಅಧ್ಯಕ್ಷ ಭೀಮಯ್ಯ ನಾಯ್ಕ್, ಪ್ರಧಾನ ಕಾರ್ಯದರ್ಶಿ ಮಿರ್ಜಾ ಕುಮಾರ್, ಪ.ಜಾತಿ ಮತ್ತು ವರ್ಗದ ನೌಕರರ ಸಂಘದ ಬೆಂಗಳೂರು ಘಟಕದ ಅಧ್ಯಕ್ಷೆ ಶಿಲ್ಪ ಡಿ ರಾಜ್, ಪ್ರಧಾನ ಕಾರ್ಯರ್ಶಿ ವೀರಪ್ಪ ಬಾಬು ಮತ್ತಿತರು ಪಾಲ್ಗೊಂಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆಸ್ಟಾರ್ಟ್‌ಅಪ್‌ಗಳಿಗೆ ಸುವರ್ಣಾವಕಾಶ: 'ಸರ್ಕಾರ ಮೊದಲು' ಯೋಜನೆಗೆ ಸಚಿವ ಸಂಪುಟ ಅಸ್ತು, ಪ್ರತಿ ಸಂಸ್ಥೆಗೆ ₹25 ಲಕ್ಷದವರೆಗೆ ಸಹಾಯಧನಕಲಬುರಗಿಯಲ್ಲಿ ‘LEAP ಬೆಳವಣಿಗೆ ಪ್ರಯೋಗಾಲಯ’ ಸ್ಥಾಪನೆ: ನಿವೇಶನ ಹಂಚಿಕೆಗೆ ಸಚಿವ ಸಂಪುಟ ಅಸ್ತುಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲಗಳ ಸಂಚಾರBREAKING: ಕೆಪಿಎಸ್‌ಸಿ ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ, ಬಸವರಾಜ್ ಕನ್ನಾಳೆಗೆ 14 ದಿನ ನ್ಯಾಯಾಂಗ ಬಂಧನ100 ದಿನ, ನೂರಾರು ಅಭಿವೃದ್ಧಿ: ಇದು 'ಗ್ರಾಮೀಣಾಭಿವೃದ್ಧಿ'ಯಲ್ಲಿ 'ಸಚಿವ ಈಶ್ವರ ಖಂಡ್ರೆ' ಸಾಧನೆಯ ರಿಪೋರ್ಟ್ ಕಾರ್ಡ್!ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಲೇಖಕ ಡಾ.ಮೂಡ್ನಾಕೂಡು ಚಿನ್ನಸ್ವಾಮಿBIG NEWS: ಸೆ.21 ರಿಂದ ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ಆರಂಭ: ಕಸ್ತೂರಿರಂಗನ್ ವರದಿ, ರೈತರ ಸಮಸ್ಯೆಗಳ ಚರ್ಚೆಕ್ಲೈಮ್ಯಾಕ್ಸ್‌ ಘಟ್ಟ ತಲುಪಿದ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಜಿಲ್ಲೆಗೆ ಎಂಟ್ರಿ ಕೊಟ್ಟ ಬಿಜೆಪಿ ನಾಯಕರುರಾಜ್ಯದಲ್ಲಿ ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣ ನಿಯಮ ಸರಳೀಕರಣ: ಮಧ್ಯಂತರ ವರದಿಯಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಮಾಹಿತಿ