LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ : ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ವಿಧಾನಸೌಧ, ಮೈಸೂರು ಅರಮನೆ ಸೇರಿ ರಾಜ್ಯದ ಪಾರಂಪರಿಕ ಕಟ್ಟಡಗಳು!

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ಮೈಸೂರು ಅರಮನೆ, ಕೃಷ್ಣರಾಜಸಾಗರ ಆಣೆಕಟ್ಟು, ತುಂಗಭದ್ರಾ ಜಲಾಶಯ, ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಹನ್ನೊಂದು ಪ್ರಮುಖ ಪಾರಂಪರಿಕ ಕಟ್ಟಡಗಳಿಗೆ ಸೆ.10 ರಿಂದ ನಾಲ್ಕು ದಿನಗಳ ಕಾಲ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ.

ಬೆಂಗಳೂರಿನ ಪುರಭವನ, ಕೆ.ಆರ್.ಪುರಂ‌ ತೂಗುಸೇತುವೆ, ಮೈಸೂರು ಅರಮನೆ ಹಾಗೂ ಜಯಮಾರ್ತಾಂಡ ಮಹಾದ್ವಾರ, ಐತಿಹಾಸಿಕ ಹಂಪಿಯ ವಿಶ್ವವಿಖ್ಯಾತ ವಿರೂಪಾಕ್ಷೇಶ್ವರ ದೇವಾಲಯದ ಬಿಷ್ಟಪ್ಪಯ್ಯನ ಗೋಪುರ, ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿ, ಜಗತ್ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿವೆ. ಸರ್ಕಾರದ ಅಭಿವೃದ್ಧಿ ಯೋಜನೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಯಶೋಗಾಥೆಯನ್ನು ಬಿಂಬಿಸುವ ಮನಮೋಹಕ ಎಲ್‌ಇಡಿ ಪ್ರದರ್ಶನಗಳು ,ಧ್ವನಿ ಮತ್ತು ಬೆಳಕು ,ತ್ರಿ ಡಿ ಮ್ಯಾಪಿಂಗ್ ಪ್ರದರ್ಶನಗಳ ಆಯ್ದ ಕಟ್ಟಡಗಳ ಮೇಲೆ ಬಿತ್ತರಗೊಳ್ಳಲಿವೆ.

ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಡಳಿತ ವತಿಯಿಂದಲೂ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ.

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೇರಿ ನೂರು ದಿನಗಳ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸಾರ್ವಜನಿಕರ ಕುಂದು ಕೊರತೆ, ಅಹವಾಲು ಆಲಿಸಿ, ಪರಿಹರಿಸಲು "ಪ್ರಜಾಸೇವಾ" ಇಲಾಖೆ ಸ್ಥಾಪನೆ, ಗ್ಯಾರಂಟಿ ಯೋಜನೆಗಳಡಿ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ, ರೌಡಿಗಳ ನಿಗ್ರಹಕ್ಕೆ ಜಿಲ್ಲೆಗೊಂದು ಪಡೆ ರಚನೆ, ಕೇಂದ್ರದ ನೀತಿ ಆಯೋಗದ ಸಭೆಯಲ್ಲಿ ಕರ್ನಾಟಕದ ಬೇಡಿಗಳ ಪ್ರಬಲ ಮಂಡನೆ, ನೂತನ ಸಿಎಸ್‌ಆರ್ ನೀತಿ ಕ್ರಮ, ಬರಪರಿಸ್ಥಿತಿ ನಿರ್ವಹಣೆಗೆ ವಿಭಾಗವಾರು ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆ ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಒತ್ತು, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ರೈತರ ಜೀವನಾಡಿಯಾಗಿರುವ ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಹೊಸ ಸ್ಪಿಲ್ ವೇ ಗೇಟುಗಳ ಉದ್ಘಾಟನೆ, ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕ್ರಮ ಸೇರಿದಂತೆ ಅನೇಕ ಕಾರ್ಯದರ್ಶಿಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಮುಖ್ಯಮಂತ್ರಿಗಳು ಮುಂಬರುವ ದಿನಗಳಲ್ಲಿ ದೃಢ ಕರ್ನಾಟಕದ ಸಂಕಲ್ಪಕ್ಕೆ ಮಹತ್ವದ ಹೆಜ್ಜೆಗಳನ್ನು ಇಡಲು ಆಲೋಚಿಸಿದ್ದಾರೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಎಂ.ಎನ್‌.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ