LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಟುಂಬಸ್ಥರ ವಿರೋಧದ ನಡುವೆಯೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಅಂತರ್ಧಮೀಯ ಜೋಡಿ ; ವಸತಿಗೃಹದಲ್ಲಿ ಪ್ರೇಮಕಥೆಯ ದುರಂತ ಅಂತ್ಯ !

ಕುಟುಂಬಸ್ಥರ ವಿರೋಧದ ನಡುವೆಯೂ ಒಂದಾಗಲು ಬಯಸಿ ಊರು ಬಿಟ್ಟು ಓಡಿಬಂದಿದ್ದ ಅನ್ಯಕೋಮಿನ ಪ್ರೇಮಿಗಳಿಬ್ಬರು ಹೋಟೆಲ್ ಕೊಠಡಿಯೊಂದರಲ್ಲಿ ಒಂದೇ ನೇಣು ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ಇಪ್ಪತ್ತೆರಡು ವರ್ಷದ ಅಮಿತ್ ಕುಮಾರ್ ಹಾಗೂ ಹತ್ತೊಂಬತ್ತು ವರ್ಷದ ನರ್ಗಿಸ್ ಅಲಿಯಾಸ್ ಪೂಜಾ ಎಂದು ಗುರುತಿಸಲಾಗಿದೆ.

ಮೂಲತಃ ಹರದೋಯಿ ಜಿಲ್ಲೆಯ ನಿವಾಸಿಗಳಾಗಿದ್ದ ಈ ಯುವ ಜೋಡಿ ತಮ್ಮ ಪ್ರೀತಿಗೆ ಎರಡೂ ಕುಟುಂಬಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ತೊರೆದು ಲಕ್ನೋಗೆ ಬಂದಿದ್ದರು. ನಗರದ ಚಿನ್ಹಟ್ ಪ್ರದೇಶದಲ್ಲಿರುವ ಅತಿಥಿಗೃಹವೊಂದರಲ್ಲಿ ಕಳೆದ ಹದಿನೆಂಟು ದಿನಗಳಿಂದ ಇವರಿಬ್ಬರು ನೆಲೆಸಿದ್ದರು. ಘಟನೆ ನಡೆದ ದಿನದಂದು ಬೆಳಗ್ಗಿನಿಂದಲೂ ಈ ಪ್ರೇಮಿಗಳು ಕೊಠಡಿಯಿಂದ ಹೊರಬಂದಿರಲಿಲ್ಲ. ರಾತ್ರಿ ಎಂಟು ಗಂಟೆಯ ಸುಮಾರಿಗೆ ಹೋಟೆಲ್ ಸಿಬ್ಬಂದಿ ಬಾಗಿಲು ತಟ್ಟಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಅನುಮಾನಗೊಂಡ ಸಿಬ್ಬಂದಿ ಕಿಟಕಿಯ ಮೂಲಕ ಇಣುಕಿ ನೋಡಿದಾಗ ಇಬ್ಬರೂ ಫ್ಯಾನಿಗೆ ನೇಣು ಬಿಗಿದುಕೊಂಡು ನೇತಾಡುತ್ತಿರುವುದು ಕಂಡುಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸ್ ತಂಡವು ಪರ್ಯಾಯ ಕೀಲಿಯಿಂದ ಬಾಗಿಲು ತೆರೆದು ಮೃತದೇಹಗಳನ್ನು ಕೆಳಕ್ಕೆ ಇಳಿಸಿದೆ.

ಸ್ಥಳ ಪರಿಶೀಲನೆ ನಡೆಸಿದ ಪೊಲೀಸರಿಗೆ ಕೊಠಡಿಯಲ್ಲಿ ಆರ್ಯ ಸಮಾಜದ ಮದುವೆ ಪ್ರಮಾಣಪತ್ರ ಹಾಗೂ ಇಬ್ಬರೂ ಸಹಿ ಮಾಡಿರುವ ಮರಣಪತ್ರ ಲಭ್ಯವಾಗಿದೆ. ನಾವಿಬ್ಬರೂ ನಮ್ಮ ಸ್ವಂತ ಇಷ್ಟದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಸಾವಿನ ನಂತರ ನಮ್ಮ ಕುಟುಂಬದ ಸದಸ್ಯರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಆ ಪತ್ರದಲ್ಲಿ ಬರೆಯಲಾಗಿದೆ. ಅಲ್ಲದೆ ಕೊಠಡಿಯಲ್ಲಿದ್ದ ಮೊಬೈಲ್ ಹಾಗೂ ಇತರ ದಾಖಲೆಗಳ ಆಧಾರದ ಮೇಲೆ ಪೊಲೀಸರು ಇವರ ಗುರುತನ್ನು ಪತ್ತೆಹಚ್ಚಿ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಅಮಿತ್ ಹರಪಾಲ್‌ಪುರ ಗ್ರಾಮದವನಾಗಿದ್ದು, ನರ್ಗಿಸ್ ಪಾಲಿಯಾ ಗ್ರಾಮದ ನಿವಾಸಿಯಾಗಿದ್ದಳು. ಇವರ ಪ್ರೇಮ ಸಂಬಂಧಕ್ಕೆ ಪೋಷಕರು ಒಪ್ಪಿಗೆ ನೀಡದ ಕಾರಣ ಇಬ್ಬರೂ ಊರು ಬಿಟ್ಟು ಬಂದಿದ್ದರು. ಕಳೆದ ತಿಂಗಳು ಆಗಸ್ಟ್ ಇಪ್ಪತ್ತೊಂದರಂದು ಮುಂಜಾನೆ ಯುವಕನು ತನ್ನ ಮಗಳನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಯುವತಿಯ ತಂದೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಅಪಹರಣ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ, ಪ್ರೇಮಿಗಳು ವಸತಿಗೃಹದ ಕೊಠಡಿಯಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ಸದ್ಯ ಪೊಲೀಸರು ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಡ್ಯದ ಬಸರಾಳು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ: ನೀರಿಲ್ಲದೆ ಬರದ ಭೀತಿ, ಕಣ್ಣೀರಿಡುತ್ತಿರುವ ಗ್ರಾಮಸ್ಥರುಮಂಡ್ಯ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕಮಂಡ್ಯದ ಕೆ.ಆರ್ ಪೇಟೆಯಲ್ಲಿ ಮೊರಾರ್ಜಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲುಮದ್ದೂರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ರೈತ ಕುಟುಂಬದಿಂದ ಉಪವಾಸ ಸತ್ಯಾಗ್ರಹಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರವ್ಯಾಪಿ ಹದಿಹರೆಯದ ಬಾಲಕಿಯರಿಗೆ ಎಚ್‌ಐವಿ ಲಸಿಕೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಹೆದ್ದಾರಿ ಇಷ್ಟೊಂದು ತಡವಾಗಿ ನಿರ್ಮಾಣವಾಗಿರುವುದಕ್ಕೆ ನನಗೆ ನಾಚಿಕೆಯಾಗ್ತಿದೆ, ಇನ್ನುಮುಂದೆ ನಾನು ಉದ್ಘಾಟನೆ ಮಾಡಲ್ಲ: ನಿತಿನ್ ಗಡ್ಕರಿಎಎಪಿ ರಾಷ್ಟ್ರೀಯ ಸಂಚಾಲಕರಾಗಿ ಮುಂದುವರೆದ ಕೇಜ್ರಿವಾಲ್‌ಬಲಿಷ್ಠ ಕರ್ನಾಟಕಕ್ಕೆ ನವ ಸಂಕಲ್ಪ: ಸಿಎಂ ಡಿ.ಕೆ.ಶಿವಕುಮಾರ್ಕರ್ನಾಟಕದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ: ‘ಅಧ್ಯಯನ ವರದಿ-2025’ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ತಿರುನೆಲ್ವೇಲಿ ನಡುವೆ ವಿಶೇಷ ರೈಲುಗಳ ಸಂಚಾರ