LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆದ್ದಾರಿ ಇಷ್ಟೊಂದು ತಡವಾಗಿ ನಿರ್ಮಾಣವಾಗಿರುವುದಕ್ಕೆ ನನಗೆ ನಾಚಿಕೆಯಾಗ್ತಿದೆ, ಇನ್ನುಮುಂದೆ ನಾನು ಉದ್ಘಾಟನೆ ಮಾಡಲ್ಲ: ನಿತಿನ್ ಗಡ್ಕರಿ

ಪಣಜಿ- ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ತೀವ್ರ ಬೇಸರವಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅಸಮಾಧಾನ ಹೊರ ಹಾಕಿದ್ದಾರೆ.

ಸಮಾರಂಭದಲ್ಲಿ ಪಾಲ್ಗೊಳ್ಳದ ನಿರ್ಧಾರ

ಕಾಮಗಾರಿ ಸಂಪೂರ್ಣ ಮುಕ್ತಾಯಗೊಂಡರೂ ನಾನು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಪಣಜಿ ಸಮೀಪದ ಪೋರ್ವೊರಿಮ್‌ನಲ್ಲಿ 6 ಪಥಗಳ ಎಲಿವೇಟೆಡ್‌ ರಸ್ತೆ ಕಾರಿಡಾರ್‌ ಉದ್ಘಾಟಿಸಿ ಮಾತನಾಡಿದ ಅವರು, ಹೆದ್ದಾರಿ ಕಾಮಗಾರಿ ಇಷ್ಟೊಂದು ದೀರ್ಘಾವಧಿ ವಿಳಂಬವಾಗಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ. ಹಾಗಾಗಿಯೇ ಈ ಹೆದ್ದಾರಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ನಾನು ಬರುವುದಿಲ್ಲ ಎಂದು ಈ ಹಿಂದೆಯೇ ನಿರ್ಧರಿಸಿದ್ದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ತಿಳಿಸಿದ ಗಡ್ಕರಿ ಮುಂಬರುವ ಅಕ್ಟೋಬರ್‌ನಲ್ಲಿ ಖುದ್ದು ತಾವೇ ಮುಂಬೈ ಏರ್‌ಪೋರ್ಟ್‌ಗೆ ಬಂದು, ಅಲ್ಲಿಂದ ರಸ್ತೆ ಮಾರ್ಗವಾಗಿ ಗೋವಾಕ್ಕೆ ಪ್ರಯಾಣಿಸಿ ಹೆದ್ದಾರಿಯ ಸ್ಥಿತಿಗತಿ ಹಾಗೂ ಪ್ರಯಾಣಿಕರಿಗೆ ಆಗುತ್ತಿರುವ ಅನುಕೂಲ-ಅನನುಕೂಲಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು.

ವಿಳಂಬದ ಕುರಿತು ಕ್ರಮ

ರಸ್ತೆ ಕಾಮಗಾರಿಗಳ ವಿಳಂಬ ಹಾಗೂ ಕಳಪೆ ಕಾಮಗಾರಿಗೆ ಕಾರಣರಾದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಅವರು, ಒಂದು ವರ್ಷದಲ್ಲಿ ಅತಿ ಹೆಚ್ಚು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಹಾಗೂ ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತುಗೊಳಿಸುವ ಮೂಲಕ ಹೊಸ ದಾಖಲೆ ನಿರ್ಮಿಸಲು ಬಯಸಿದ್ದೇನೆ ಎಂದರು.

ಮಾರುಕಟ್ಟೆ ಹಾಗೂ ಸುರಕ್ಷತಾ ಪ್ರಶ್ನೆಗಳು

440 ಕಿ.ಮೀ ಉದ್ದದ ಮುಂಬೈ-ಗೋವಾ ಹೆದ್ದಾರಿ ಅಗಲೀಕರಣಕ್ಕೆ ಭಾರೀ ಮೊತ್ತ ಖರ್ಚು ಮಾಡಿದ್ದರೂ, ಮೊದಲ ಮಳೆಗಾಲದಲ್ಲೇ ನೂತನ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದರು.ಮೇ ತಿಂಗಳಿನಿಂದ ಖಾರ್ಪದ ಟೋಲ್‌ ಪ್ಲಾಜಾದಲ್ಲಿ ಟೋಲ್‌ ಸಂಗ್ರಹ ಆರಂಭವಾಗಿದ್ದರೂ, ರಸ್ತೆಯಲ್ಲಿ ನೀರಿನ ನಿಲುಗಡೆ, ಟ್ರಾಫಿಕ್‌ ಜಾಮ್‌ ಹಾಗೂ ದುರಸ್ತಿ ಕಾರ್ಯಗಳು ಮುಂದುವರಿದಿವೆ.

2021ರಲ್ಲಿ ಕರ್ನಾಲಾ ವನ್ಯಜೀವಿ ಧಾಮದ ಬಳಿ ನಿರ್ಮಿಸಲಾಗಿದ್ದ ಮಂಕಿ ಓವರ್‌ಪಾಸ್‌‍ ಕುಸಿದುಬಿದ್ದಿದ್ದು, ಹೆದ್ದಾರಿಯಲ್ಲಿ ಸುರಕ್ಷತೆಯ ಬಗ್ಗೆ ತೀವ್ರ ಆತಂಕಕ್ಕೆ ಕಾರಣವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೈ ಆಭರಣ ಮಳಿಗೆಯಲ್ಲಿ ಬಿಐಎಸ್ ಹಾಲ್ ಮಾರ್ಕ್ ಇಲ್ಲದ ಚಿನ್ನಾಭರಣಗಳ ವಶಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿಸಾಗರದಲ್ಲಿ ಹಕ್ಕುಪತ್ರಕ್ಕಾಗಿ ಹೋರಾಟ: ಇದೊಂದು ಕೇವಲ ರಾಜಕೀಯ ಷಡ್ಯಂತ್ರವೆಂದ ಶಾಸಕ ಗೋಪಾಲಕೃಷ್ಣ ಬೇಳೂರುಮಂಡ್ಯದ ಬಸರಾಳು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ: ನೀರಿಲ್ಲದೆ ಬರದ ಭೀತಿ, ಕಣ್ಣೀರಿಡುತ್ತಿರುವ ಗ್ರಾಮಸ್ಥರುಮಂಡ್ಯ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕಮಂಡ್ಯದ ಕೆ.ಆರ್ ಪೇಟೆಯಲ್ಲಿ ಮೊರಾರ್ಜಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲುಮದ್ದೂರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ರೈತ ಕುಟುಂಬದಿಂದ ಉಪವಾಸ ಸತ್ಯಾಗ್ರಹಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರವ್ಯಾಪಿ ಹದಿಹರೆಯದ ಬಾಲಕಿಯರಿಗೆ ಎಚ್‌ಐವಿ ಲಸಿಕೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಹೆದ್ದಾರಿ ಇಷ್ಟೊಂದು ತಡವಾಗಿ ನಿರ್ಮಾಣವಾಗಿರುವುದಕ್ಕೆ ನನಗೆ ನಾಚಿಕೆಯಾಗ್ತಿದೆ, ಇನ್ನುಮುಂದೆ ನಾನು ಉದ್ಘಾಟನೆ ಮಾಡಲ್ಲ: ನಿತಿನ್ ಗಡ್ಕರಿಎಎಪಿ ರಾಷ್ಟ್ರೀಯ ಸಂಚಾಲಕರಾಗಿ ಮುಂದುವರೆದ ಕೇಜ್ರಿವಾಲ್‌