LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ`ಸರ್ಕಾರಿ ನೌಕರರೇ’ ಗಮನಿಸಿ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನೌಕರರಿಗೆ ಮಹತ್ವದ ಮತ್ತು ತುರ್ತು ಸಂದೇಶವೊಂದನ್ನು ರವಾನಿಸಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಗೆ (KASS) ಪ್ರತಿಯೊಬ್ಬ ನೌಕರರು ಮತ್ತು ಅವರ ಕುಟುಂಬ ಸದಸ್ಯರ ವಿವರಗಳನ್ನು ಎಚ್‌ಆರ್‌ಎಂಎಸ್ 1 (HRMS 1) ತಂತ್ರಾಂಶದಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ಅವರು ಕರೆ ನೀಡಿದ್ದಾರೆ.

ಈಗಾಗಲೇ ನೌಕರರ ವೇತನದಿಂದ ಮಾಸಿಕ ವಂತಿಗೆ ಕಡಿತಗೊಳ್ಳುತ್ತಿದ್ದರೂ, ರಾಜ್ಯದ ಸುಮಾರು 1,98,936 ನೌಕರರು (ಶೇಕಡಾ 35ಕ್ಕೂ ಹೆಚ್ಚು) ಇನ್ನೂ ತಮ್ಮ ಮತ್ತು ಕುಟುಂಬಸ್ಥರ ಆಧಾರ್ ವಿವರಗಳನ್ನು ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಿಲ್ಲ. ಮುಂಬರುವ ತಿಂಗಳಿಂದ ಎಚ್‌ಆರ್‌ಎಂಎಸ್ 1 ತಂತ್ರಾಂಶ ಸ್ಥಗಿತಗೊಳ್ಳಲಿದ್ದು, ನೌಕರರು ತಮ್ಮ ವಿವರ ನಮೂದಿಸಲು ಇದೇ ತಿಂಗಳ 30 ಕೊನೆಯ ದಿನವಾಗಿದೆ. ತಂತ್ರಾಂಶದಲ್ಲಿ ಕುಟುಂಬದ ವಿವರಗಳು ದಾಖಲಾಗದಿದ್ದರೆ ತುರ್ತು ಸಂದರ್ಭಗಳಲ್ಲಿ ಅಥವಾ ಅನಾರೋಗ್ಯದ ಸಮಯದಲ್ಲಿ ನಗದು ರಹಿತ ಚಿಕಿತ್ಸೆ (Free Treatment) ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಈಗಾಗಲೇ ನೋಂದಣಿ ಮಾಡಿಸದ ನೌಕರರ ಪಟ್ಟಿಯನ್ನು (ಹೆಸರು, ಕೆಜಿಐಡಿ ಸಂಖ್ಯೆ ಮತ್ತು ಕಚೇರಿ ವಿವರಗಳ ಸಮೇತ) ಜಿಲ್ಲೆ, ತಾಲೂಕು ಮತ್ತು ಇಲಾಖಾವಾರು ಸಿದ್ಧಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಪಟ್ಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ನೌಕರರು ತಕ್ಷಣವೇ ತಮ್ಮ ಇಲಾಖೆಯ ಡಿಡಿಒ (DDO) ಅಥವಾ ಡ್ರಾಯಿಂಗ್ ಅಧಿಕಾರಿಯನ್ನು ಸಂಪರ್ಕಿಸಿ ಕುಟುಂಬದ ವಿವರ ಹಾಗೂ ಆಧಾರ್ ಮಾಹಿತಿಯನ್ನು ಅಪ್‌ಲೋಡ್ ಮಾಡಿಕೊಳ್ಳಬೇಕು.

ಅದೇ ರೀತಿ ಸಂಘದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಚುನಾಯಿತ ನಿರ್ದೇಶಕರು ತುರ್ತು ಸಭೆ ನಡೆಸಿ, ಕಚೇರಿಗಳಿಗೆ ಭೇಟಿ ನೀಡಿ ಶೇಕಡಾ 100ರಷ್ಟು ಪ್ರಗತಿ ಸಾಧಿಸಬೇಕು ಮತ್ತು ಆ ವರದಿಯನ್ನು ರಾಜ್ಯ ಸಂಘಕ್ಕೆ ಸಲ್ಲಿಸಬೇಕೆಂದು ಷಡಾಕ್ಷರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಭವಿಷ್ಯದಲ್ಲಿ ಉಚಿತ ವೈದ್ಯಕೀಯ ಸೇವೆ ಹಾಗೂ ಹೊಸ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗದಂತೆ ನೌಕರರು ಈ ಕೊನೆಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ವಿನಂತಿಸಿದ್ದಾರೆ.

 

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಟರ್‌ನೆಟ್ ಇಲ್ಲದಿದ್ದರೂ UPI ಪೇಮೆಂಟ್ : ಫೋನ್ ಟ್ಯಾಪ್ ಮಾಡಿದ್ರೆ ಸಾಕು; ಹೊಸ ಸೌಲಭ್ಯ ಹೇಗೆ ಕೆಲಸ ಮಾಡುತ್ತೆ ಗೊತ್ತಾ?BIG NEWS : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಲಿದೆ ಈ ಎಲ್ಲಾ ಉಚಿತ ಸೌಲಭ್ಯಗಳು.!ಹಾವು ಕಡಿತಕ್ಕೆ ಹೊಸ ಚಿಕಿತ್ಸೆ: ವಿಷ ನಿರೋಧಕಕ್ಕೆ ಮದ್ದು ಕಂಡುಹಿಡಿದ ವಿಜ್ಞಾನಿಗಳು!ರಾಜ್ಯ`ಸರ್ಕಾರಿ ನೌಕರರೇ’ ಗಮನಿಸಿ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ`PF’ ಖಾತೆದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ 4 ಸೌಲಭ್ಯಗಳು.!ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವೃತ್ತಿಪರ ಶಿಕ್ಷಣದಲ್ಲಿ ಮೀಸಲಾತಿ, ಉಚಿತ ಸ್ಪರ್ಧಾತ್ಮಕ ತರಬೇತಿ ಘೋಷಣೆBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸಾವು.!ALERT : ಸೋಷಿಯಲ್ ಮೀಡಿಯಾದಲ್ಲಿ ಇಂತಹ ಪೋಸ್ಟ್ ಹಾಕಿದರೆ ಜೈಲು ಶಿಕ್ಷೆ ಫಿಕ್ಸ್.!ಸಾಲ ಪಡೆದ ವ್ಯಕ್ತಿ ಮರುಪಾವತಿ ಮಾಡದಿದ್ದರೆ ಯಾರು ಕಟ್ಟಬೇಕು? ಬ್ಯಾಂಕ್ ನಿಯಮಗಳು ಏನು ಹೇಳುತ್ತವೆ?ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 1 ಲಕ್ಷ ಸರ್ಕಾರಿ, 5 ಲಕ್ಷ ಖಾಸಗಿ ಉದ್ಯೋಗಗಳ ಸೃಷ್ಟಿ.!