LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೇರ ಕಾಲೇಜು ಚುನಾವಣೆಗೆ ಸರ್ಕಾರದ ಆದೇಶ: ನಿಯಮ ಧಿಕ್ಕರಿಸಿ ಮಂಗಳೂರು ವಿವಿಯಲ್ಲಿ ಪರೋಕ್ಷ ಮತದಾನ ಆರೋಪ

ಮಂಗಳೂರು: ರಾಜ್ಯದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳಿಗೆ ನೇರ ಚುನಾವಣೆ ನಡೆಸುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದರೂ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಹಳೆಯ ಪದ್ಧತಿಯಂತೆ ಪರೋಕ್ಷ ಚುನಾವಣೆ ನಡೆಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.

ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟವು ಸೆಪ್ಟೆಂಬರ್ 9 ರಂದು ಮಹತ್ವದ ನಿರ್ಧಾರ ಕೈಗೊಂಡು ನೇರ ಚುನಾವಣೆಗೆ ಹಸಿರು ನಿಶಾನೆ ತೋರಿತ್ತು. ಇದರ ಬೆನ್ನಲ್ಲೇ, ಈವರೆಗಿದ್ದ ಪರೋಕ್ಷ ಚುನಾವಣಾ ಪದ್ಧತಿಯನ್ನು ರದ್ದುಪಡಿಸಿ ನೇರ ಚುನಾವಣೆಯನ್ನೇ ನಡೆಸುವಂತೆ ರಾಜ್ಯ ಸರ್ಕಾರ ಗುರುವಾರ ರಾತ್ರಿ ಅಧಿಕೃತ ಆದೇಶವನ್ನು ಹೊರಡಿಸಿತ್ತು.

ಆದೇಶದ ನಡುವೆಯೂ ಪರೋಕ್ಷ ಚುನಾವಣೆ

ಸರ್ಕಾರದ ಹೊಸ ನಿಯಮ ಜಾರಿಗೆ ಬಂದ ಬೆನ್ನಲ್ಲೇ, ಇಂದು ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಸಂಘಟನೆಯ ಪರೋಕ್ಷ ಚುನಾವಣಾ ಪ್ರಕ್ರಿಯೆ ಯಥಾರೀತಿ ನಡೆದಿದೆ. ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಹಳೆಯ ನಿಯಮದಂತೆ ಪರೋಕ್ಷ ಮತದಾನ ನಡೆಸಿರುವುದಕ್ಕೆ ವಿದ್ಯಾರ್ಥಿ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ವಿಶ್ವವಿದ್ಯಾಲಯದ ಸಮರ್ಥನೆ

ಈ ಬೆಳವಣಿಗೆಗೆ ಸ್ಪಷ್ಟನೆ ನೀಡಿರುವ ಮಂಗಳೂರು ವಿವಿ ಆಡಳಿತ ಮಂಡಳಿ, "ಇಂದು ನಡೆಯಬೇಕಿದ್ದ ಚುನಾವಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 8 ರಂದೇ ಅಧಿಕೃತ ಅಧಿಸೂಚನೆ ಹೊರಡಿಸಲಾಗಿತ್ತು. ಚುನಾವಣಾ ಪ್ರಕ್ರಿಯೆ ಈಗಾಗಲೇ ಮುಂಚಿತವಾಗಿ ನಿಗದಿಯಾಗಿದ್ದ ಕಾರಣ, ಪೂರ್ವ ನಿಯಮಾವಳಿಗಳ ಅನ್ವಯವೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ" ಎಂದು ಸಮರ್ಥಿಸಿಕೊಂಡಿದೆ.

ಸರ್ಕಾರದ ಆದೇಶ ಧಿಕ್ಕರಿಸಿದ ಆರೋಪ: ಎನ್‌ಎಸ್‌ಯುಐ ಆಕ್ರೋಶ

ಮಂಗಳೂರು ವಿವಿಯ ಈ ಕ್ರಮದ ವಿರುದ್ಧ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ (NSUI) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಸರ್ಕಾರದ ನೇರ ಆದೇಶವನ್ನು ಬಹಿರಂಗವಾಗಿ ಧಿಕ್ಕರಿಸಿ ಹಳೆಯ ಪದ್ಧತಿಯಲ್ಲಿ ಚುನಾವಣೆ ನಡೆಸಿದೆ ಎಂದು ಆರೋಪಿಸಿದ್ದು, ಈ ಚುನಾವಣೆಯನ್ನು ತಕ್ಷಣವೇ ರದ್ದುಪಡಿಸಿ ಸರ್ಕಾರದ ಮಾರ್ಗಸೂಚಿಯಂತೆ ನೇರ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಐದೇ ದಿನಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಹ ಸ್ಥಿತಿ ಶಿಕಾರಿಪುರ ಜನತೆಯದ್ದು; ಸಚಿವ ಮಧು ಬಂಗಾರಪ್ಪಜೈಲಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಕೆ ಪ್ರಕರಣ: ಜೈಲು ಸಿಬ್ಬಂದಿ ಸೇರಿ ಏಳು ಜನರ ವಿರುದ್ಧ FIR ದಾಖಲುಸತೀಶ್ ಜಾರಕಿಹೊಳಿ ಪರ ಸಿಎಂ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್: ಕಾಂಗ್ರೆಸ್ ಪಕ್ಷವನ್ನೇ ಗುರಿಯಾಗಿಸಿ ED ದಾಳಿ ಆರೋಪನೇರ ಕಾಲೇಜು ಚುನಾವಣೆಗೆ ಸರ್ಕಾರದ ಆದೇಶ: ನಿಯಮ ಧಿಕ್ಕರಿಸಿ ಮಂಗಳೂರು ವಿವಿಯಲ್ಲಿ ಪರೋಕ್ಷ ಮತದಾನ ಆರೋಪರಾಜ್ಯದ ಜನತೆ ಗಮನಕ್ಕೆ: ಸೆ.19, 20ರಂದು 'ವಿಶೇಷ ಮತದಾರರ ನೋಂದಣಿ ಅಭಿಯಾನ'ಭಾವನಾತ್ಮಕ ಸಂಕಷ್ಟವನ್ನು ಒಬ್ಬರೇ ಎದುರಿಸುತ್ತಿರುವ ಭಾರತದ ಶೇ 49.5ರಷ್ಟು ಯುವಜನತೆ: ಎಂಪವರ್ ಸಮೀಕ್ಷೆ ಬಹಿರಂಗBREAKING: ನ.1ರೊಳಗೆ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಆದೇಶಪರಿಶ್ರಮ, ಆರ್ಥಿಕ ಶಿಸ್ತಿನಿಂದ ಉದ್ಯಮದಲ್ಲಿ ಯಶಸ್ಸು: ಸಾಗರದಲ್ಲಿ ಆನಂದ ಸುವರ್ಣ ಅಭಿಮತಈ ಸರ್ಕಾರದ ಆಡಳಿತದಲ್ಲಿ ಒಂದೇ ಒಂದು ಉತ್ತಮ ಯೋಜನೆಗಳಿಲ್ಲ: ಛಲವಾದಿ ನಾರಾಯಣಸ್ವಾಮಿ