LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನದಲ್ಲಿ ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ : ಸಾವಿರಾರು ಲೀ. ಪೆಟ್ರೋಲ್ ರಸ್ತೆ ಪಾಲು, ಸ್ಥಳಕ್ಕೆ ಪೊಲೀಸರು ದೌಡು!

ಹಾಸನ: ನಗರದ ಹೊರವಲಯದ ಕೆಂಚಟ್ಟಹಳ್ಳಿ ಬಳಿಯ ಫ್ಲೈಓವರ್ ಮೇಲೆ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಉರುಳಿ ಬಿದ್ದಿರುವ ಗಂಭೀರ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಿಂದ ಅಪಾರ ಪ್ರಮಾಣದ ಪೆಟ್ರೋಲ್ ರಸ್ತೆಯಲ್ಲೆಲ್ಲ ಹರಿದು ಹೋಗುತ್ತಿದ್ದು, ಬಿಸಿಲ ತಾಪಮಾನ ಹೆಚ್ಚಾಗಿರುವುದರಿಂದ ಬೆಂಕಿ ಹೊತ್ತಿಕೊಳ್ಳುವ ಭೀತಿ ಎದುರಾಗಿದೆ. ಅಪಾಯವನ್ನು ಮನಗಂಡು ಮುನ್ನೆಚ್ಚರಿಕಾ ಕ್ರಮವಾಗಿ ಫ್ಲೈಓವರ್ ಮೇಲಿನ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಈ ಟ್ಯಾಂಕರ್ ತಮಿಳುನಾಡಿನಿಂದ ಹಾಸನದ ಹೆಚ್‌ಪಿಸಿಎಲ್ (HPCL) ಘಟಕಕ್ಕೆ ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ಅವಘಡ ತಡೆಯಲು ಪೆಟ್ರೋಲ್ ಹರಿಯುತ್ತಿರುವ ಜಾಗಕ್ಕೆ ನಿರಂತರವಾಗಿ ನೀರು ಚಿಮುಕಿಸುತ್ತಿದ್ದಾರೆ. ಪ್ರಾಣಾಪಾಯ ಅಥವಾ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸೋರುತ್ತಿರುವ ಪೆಟ್ರೋಲ್‌ ಅನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಾರಾಂತ್ಯ ಹಾಗೂ ಗೌರಿ-ಗಣೇಶ ಹಬ್ಬದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75 (ಬೆಂಗಳೂರು-ಮಂಗಳೂರು ರಸ್ತೆ)ಯಲ್ಲಿ ವಾಹನಗಳ ದಟ್ಟಣೆ ಈಗಾಗಲೇ ಹೆಚ್ಚಾಗಿತ್ತು. ಇದೀಗ ಈ ರಸ್ತೆ ಬಂದ್ ಆಗಿರುವುದರಿಂದ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮತ್ತು ವಾಹನ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ