ಬೆಂಗಳೂರು: ನಾಡಿನ ಖ್ಯಾತ ರಂಗ ನಿರ್ದೇಶಕರು, ರಂಗ ಶಿಕ್ಷಕರು ಹಾಗೂ ಪ್ರಗತಿಪರ ಚಿಂತಕರಾಗಿದ್ದ ಚಿದಂಬರರಾವ್ ಜಂಬೆ ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಆ ಮೂಲಕ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಎಕ್ಸ್ ಪೋಸ್ಟ್ ಮಾಡಿರುವಂತ ಅವರು, ಹೆಗ್ಗೋಡಿನ ನೀನಾಸಂನ ರಂಗ ಶಿಕ್ಷಣ ಕೇಂದ್ರ ಮತ್ತು ಸಾಣೇಹಳ್ಳಿಯ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ಹಾಗೂ ಮೈಸೂರು ರಂಗಾಯಣದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ಚಿದಂಬರರಾವ್ ತಮ್ಮ ಬದುಕನ್ನೇ ಕಲಾಸೇವೆಗಾಗಿ ಮುಡಿಪಿಟ್ಟ ಅಪರೂಪದ ಸಾಧಕ ಎಂಬುದಾಗಿ ತಿಳಿಸಿದ್ದಾರೆ.
ಚಿದಂಬರರಾವ್ ಅವರ ಅಗಲಿಕೆಯಿಂದ ರಂಗಭೂಮಿ ಕ್ಷೇತ್ರ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.