LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನಕ್ಕೆ ವಿಧಾನಪರಿಷತ್ ಉಪಸಭಾಪತಿ ಡಾ.ಉಮಾಶ್ರೀ ಸಂತಾಪ

ಬೆಂಗಳೂರು: ನಾಡಿನ ಖ್ಯಾತ ಹಿರಿಯ ರಂಗಕರ್ಮಿ, ನಿರ್ದೇಶಕ, ರಂಗ ಶಿಕ್ಷಕ, ಚಿಂತಕ ಚಿದಂಬರರಾವ್ ಜಂಬೆ ಅವರ ನಿಧನಕ್ಕೆ ಕರ್ನಾಟಕ ವಿಧಾನಪರಿಷತ್ ಉಪಸಭಾಪತಿಗಳು ಹಾಗೂ ಹಿರಿಯ ಕಲಾವಿದರಾದ ಡಾ. ಉಮಾಶ್ರೀ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ರಂಗಭೂಮಿಯ ಬೆಳವಣೆಗೆಯಲ್ಲಿ ಹಲವು ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚಿದಂಬರರಾವ್ ಜಂಬೆ ಅವರು, ರಂಗ ನಿರ್ದೇಶನ ಮಾತ್ರವಲ್ಲದೆ, ರಂಗಶಿಕ್ಷಣಕ್ಕೂ ಹೆಚ್ಚಿನ ಮಹತ್ವ ನೀಡಿದ್ದರು. ಹಲವು ತಲೆಮಾರುಗಳ ಕಲಾವಿದರು ಮತ್ತು ರಂಗಾಸಕ್ತರಿಗೆ ತರಬೇತಿ ನೀಡಿದ ರಂಗಶಿಕ್ಷಕರು.

ವಿಭಿನ್ನ ಸಾಹಿತ್ಯಿಕ ಮತ್ತು ಸಾಮಾಜಿಕ ಹಿನ್ನೆಲೆಯ ಕೃತಿಗಳನ್ನು ರಂಗಕ್ಕೆ ಅಳವಡಿಸುವ ಮೂಲಕ ಕನ್ನಡ ರಂಗಭೂಮಿಯ ಪ್ರಯೋಗಶೀಲತೆಯನ್ನು ವಿಸ್ತರಿಸಿದರು. ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ಅನೇಕರು ರಂಗಭೂಮಿ, ಚಿತ್ರರಂಗ, ಕಿರುತೆರೆ ಹಾಗೂ ರಂಗಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಆದ ಸ್ಥಾನ ಪಡೆದುಕೊಂಡಿದ್ದಾರೆ.

ತಮಗೂ ಕೂಡ ಹಿರಿಯರಾದ ಚಿದಂಬರರಾವ್ ಜಂಬೆ ಅವರು ಒಳ್ಳೆಯ ಮಾರ್ಗದರ್ಶಕರಾಗಿದ್ದರು. ಅವರ ನಿರ್ದೇಶನದ ಶ್ರಮಿಷ್ಠೆ ನಾಟಕವನ್ನು ತಮ್ಮ ಮೂಲಕ ಪ್ರದರ್ಶಿಸಿ, ತಮ್ಮನ್ನು ಇಡೀ ನಾಡಿನಾದ್ಯಂತ ʼಶ್ರಮಿಷ್ಠೆʼ ಯಾಗಿ ಪರಿಚಯಿಸಿದರು.  ಶ್ರಮಿಷ್ಠೆ ಮೂಲಕ ಸಮಕಾಲೀನ ಪ್ರೇಕ್ಷಕರಿಗೆ ಪರಿಣಾಮಯಾಗಿ ತಲುಪಿಸುವ ಪ್ರಯತ್ನ ಅವರ ನಿರ್ದೇಶನದಲ್ಲಿ ಎದ್ದು ಕಾಣುತ್ತಿತ್ತು.

ಕರ್ನಾಟಕ ರಂಗಶಿಕ್ಷಣ ಕ್ಷೇತ್ರದಲ್ಲಿ ಚಿದಂಬರರಾವ್ ಜಂಬೆ ಅವರ ಕೊಡುಗೆ ಅನನ್ಯ. ಅವರ ಅಗಲಿಕೆ ನಿಜಕ್ಕೂ ಅತ್ಯಂತ ದುಃಖ ತರುವಂತಹದ್ದು. ಜಂಬೆಯವರ ನಿಧನದಿಂದ ಕನ್ನಡ ರಂಗಕ್ಷೇತ್ರ ಬಡವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯಿಂದ ಆವರ ಕುಟುಂಬಕ್ಕಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಡಾ. ಉಮಾಶ್ರೀ ಅವರು ಪ್ರಾರ್ಥಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ