ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ ಶೆಟ್ಟಿ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮದ ಪೊಲೀಸರು ಅರೆಸ್ಟ್ ಪ್ರಸಾದ್ ಶೆಟ್ಟಿಯನ್ನ ಅರೆಸ್ಟ್ ಮಾಡಿದ್ದಾರೆ. ಶಾಸಕರಿಗೆ ಜೀವ ಬೆದರಿಕೆ ರೀತಿಯಲ್ಲಿ ಪೋಸ್ಟ್ ಹಾಕಿದ್ದ ಆರೋಪ ಕೇಳಿ ಬಂದಿತ್ತು ಶಾಸಕರ ತಲೆಬೇಕು ಎಂಬ ಭಾವದಲ್ಲಿ ಪೋಸ್ಟ್ ಮಾಡಿದ್ದ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಶಾಸಕರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಇದೀಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದಾರೆ.