LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಲ್ಲಿ ಅಶೋಕನ ಇಳಿಸಬೇಕಾ, ವಿಜಯೇಂದ್ರನ ಇಳಿಸಬೇಕಾ ಅಂತ ಕಾಂಪಿಟೇಷನ್ ನಡೀತಿದೆ : ಸಿಎಂ ಡಿಕೆಶಿ ಲೇವಡಿ!

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಿತ್ತಾಟ ಜೋರಾಗಿದೆ ಎಂದ ಸಿಎಂ  ಡಿಕೆ ಶಿವಕುಮಾರ್, "ಈಗ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಕಾಂಪಿಟೇಷನ್ ನಡೆಯುತ್ತಿದೆ. ಆರ್‌ಎಸ್‌ಎಸ್‌ ಅಥವಾ ಬಿಜೆಪಿ ನಾಯಕರು ಆರ್‌. ಅಶೋಕ ಅವರನ್ನು ಇಳಿಸಬೇಕಾ, ಬಿ.ವೈ. ವಿಜಯೇಂದ್ರ ಅವರನ್ನು ಇಳಿಸಬೇಕಾ ಎಂಬ ಬಗ್ಗೆ ಯೋಚಿಸುತ್ತಿದ್ದಾರೆ. ಇಲ್ಲವೇ ದೆಹಲಿಯಿಂದ ಯಾರಾದರೂ ಬಂದು ಇಲ್ಲಿ ಅಧ್ಯಕ್ಷ ಸ್ಥಾನದಲ್ಲಿ ಕೂರಬೇಕಾ ಎಂಬ ಸ್ಪರ್ಧೆ ಅವರಲ್ಲಿ ನಡೆಯುತ್ತಿದೆ" ಎಂದು ಲೇವಡಿ ಮಾಡಿದರು.

"ನಾವೆಲ್ಲ ಹಿಂದೂಗಳು ಅಲ್ಲವಾ, ಅವರದೆಲ್ಲ ಬರೀ ನಾಟಕ" ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ಶ್ರೀರಾಮನ ಹೆಸರಿನಲ್ಲಿ ಬಂದ ದುಡ್ಡನ್ನೇ ಹೊಡೆದು ತಿಂದಿದ್ದಾರೆ. ನಿಮ್ಮ ಬೆವರು ಉಪ್ಪು, ನನ್ನ ಬೆವರೂ ಉಪ್ಪು, ಬಿಜೆಪಿ ನಾಯಕರ ರಕ್ತವೇನಾದರೂ ಪ್ರತ್ಯೇಕವಾಗಿದೆಯಾ? ಎಲ್ಲ ಜಾತಿಗಳನ್ನು ತನ್ನೊಳಗೆ ಒಳಗೊಂಡಿರುವುದೇ ನಮ್ಮ ಧರ್ಮ" ಎಂದು ಕಿಡಿಕಾರಿದರು.

ಬಿಜೆಪಿ ನಾಯಕರ ಅಲ್ಪಸಂಖ್ಯಾತರ ವಿರೋಧಿ ಹೇಳಿಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, "ಬಿಜೆಪಿ ನಾಯಕರು ನಿರಂತರವಾಗಿ ಅಲ್ಪಸಂಖ್ಯಾತರನ್ನು ವಿರೋಧಿಸುತ್ತಿದ್ದಾರೆ. ಅಷ್ಟೊಂದು ವಿರೋಧವಿದ್ದರೆ ಕೇಂದ್ರದಲ್ಲಿರುವ ಮೈನಾರಿಟಿ ಇಲಾಖೆಯನ್ನು ತಕ್ಷಣವೇ ಮುಚ್ಚಿಬಿಡಲಿ ನೋಡೋಣ. ಅಲ್ಪಸಂಖ್ಯಾತರನ್ನು 'ಪಂಕ್ಚರ್ ಹಾಕೋರು' ಎಂದು ಕೀಳಾಗಿ ಮಾತನಾಡುತ್ತಾರೆ, ಆದರೆ ಅವರು ಇಲ್ಲದಿದ್ದರೆ ಇವರ ಗಾಡಿ ಓಡುತ್ತದೆಯೇ?" ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಡಿಕೆಶಿ, "ಜನ ಅಧಿಕಾರ ಕೊಟ್ಟಾಗ ಕುಮಾರಸ್ವಾಮಿ ಏನನ್ನೂ ಮಾಡಲಿಲ್ಲ. ದೆಹಲಿಯಲ್ಲಿ ಬಾಂಬ್ ಬೀಳುತ್ತದೆ, ದೇಶವೇ ಅಲ್ಲೋಲ ಕಲ್ಲೋಲ ಆಗುತ್ತದೆ ಎಂದೆಲ್ಲ ಹೇಳುತ್ತಾರಲ್ಲ, ಈಗ ಅವರ ಸ್ಥಿತಿಯೇ ಅಲ್ಲೋಲ ಕಲ್ಲೋಲ ಆಗಿದೆ" ಎಂದರು. ಅಲ್ಲದೆ, "ಪೆನ್ ಡ್ರೈವ್ ಸುದ್ದಿ ಬಗ್ಗೆ ಕೇಳಬೇಡಿ, ಪಾಪ ಯಾರ ಯಾರ ಕುಟುಂಬಕ್ಕೆ ಏನೇನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ನಮ್ಮ ಎದುರಿಗೆ ಇಡಿ (ED) ಬಿಡಿ, ಬೇರೆ ಯಾವುದೇ ತನಿಖಾ ಸಂಸ್ಥೆ ಬಿಡಿ, ಕೊನೆಗೆ ಜೈಲಿಗಾದರೂ ಹಾಕಿ, ನಾವು ಯಾವುದಕ್ಕೂ ಹೆದರುವುದಿಲ್ಲ" ಎಂದು ಡಿಕೆ ಶಿವಕುಮಾರ್‌ ಸವಾಲು ಹಾಕಿದರು.

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ