LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸೈನಿಕನಿಗೆ ಜಾತಿ ಪ್ರಮಾಣಪತ್ರ ನಿರಾಕರಣೆ: 'ಪ್ರಜಾ ಸೇವೆ' ಸಭೆಯಲ್ಲೇ ಜನಾಕ್ರೋಶ, ಕಂದಾಯ ನಿರೀಕ್ಷಕ ವಾಕ್‌ಔಟ್!

ಚಿಕ್ಕಮಗಳೂರು: ಎರಡು ದಶಕಗಳ ಕಾಲ ಗಡಿಯಲ್ಲಿ ದೇಶ ಕಾಯ್ದು ನಿವೃತ್ತರಾದ ಯೋಧನೊಬ್ಬನಿಗೆ ನಿಯಮಾನುಸಾರ ಸಿಗಬೇಕಾದ ಜಾತಿ ಪ್ರಮಾಣಪತ್ರ ನೀಡದೆ ಸತಾಯಿಸುತ್ತಿರುವ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ತಾಲೂಕಿನಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ 'ಪ್ರಜಾ ಸೇವೆ' ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿ, ಅಧಿಕಾರಿಗಳ ಉದ್ಧಟತನ ತೀವ್ರ ಗದ್ದಲಕ್ಕೆ ಕಾರಣವಾಯಿತು.

ಸಭೆಯಲ್ಲಿ ನಡೆದಿದ್ದೇನು?

ಪ್ರಜಾ ಸೇವೆ ಸಭೆಯಲ್ಲಿ ಮುಖಂಡ ಸುಧೀರ್ ಕುಮಾರ್ ಮುರೊಳ್ಳಿ ಅವರು ನಿವೃತ್ತ ಯೋಧನ ಸಮಸ್ಯೆಯನ್ನು ಪ್ರಸ್ತಾಪಿಸಿದರು. "20 ವರ್ಷ ಸೇನೆ ಸಲ್ಲಿಸಿದ ಯೋಧನಿಗೆ ಯಾವ ನಿಯಮದಡಿ ಜಾತಿ ಪ್ರಮಾಣಪತ್ರ ನಿರಾಕರಿಸಲಾಗಿದೆ?" ಎಂದು ತಹಸೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರನ್ನು (ಆರ್‌ಐ) ನೇರವಾಗಿ ಪ್ರಶ್ನಿಸಿ, ಸಾರ್ವಜನಿಕರ ನ್ಯಾಯಯುತ ಕೆಲಸಗಳನ್ನು ವಿಳಂಬ ಮಾಡುತ್ತಿರುವ ಬಗ್ಗೆ ಕಟುವಾಗಿ ತರಾಟೆಗೆ ತೆಗೆದುಕೊಂಡರು.

ಆರ್‌ಐ ಉದ್ಧಟತನ, ಶಾಸಕರ ಗರಂ:

ಸಭೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸರಣಿ ಪ್ರಶ್ನೆಗಳಿಗೆ ಉತ್ತರಿಸಲು ತಿಣುಕಾಡಿದ ಕಂದಾಯ ನಿರೀಕ್ಷಕ, ಸಮಜಾಯಿಷಿ ನೀಡುವ ಬದಲು ಸಭೆಯಲ್ಲಿದ್ದ ಶಾಸಕರ ಬಳಿಯೇ "ಬೇಕಿದ್ದರೆ ನನ್ನನ್ನೇ ಅಮಾನತು ಮಾಡಿ" ಎಂದು ದುರಹಂಕಾರದ ಮಾತುಗಳನ್ನಾಡಿ ಅರ್ಧದಲ್ಲೇ ಸಭೆಯಿಂದ ಹೊರನಡೆದರು. ಅಧಿಕಾರಿಯ ಈ ಅಶಿಸ್ತಿನ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರೆ, ಶಾಸಕರು ಸದರಿ ಅಧಿಕಾರಿಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವೈಯಕ್ತಿಕ ದ್ವೇಷದ ಆರೋಪ:

ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಸ್ಥಳೀಯ ತಹಸೀಲ್ದಾರ್ ಕಾರ್ಯವೈಖರಿಯೂ ತೀವ್ರ ಟೀಕೆಗೆ ಗುರಿಯಾಯಿತು. ತಹಸೀಲ್ದಾರ್ ಅವರು ಯೋಧನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ಉದ್ದೇಶಪೂರ್ವಕವಾಗಿ ಕಡತವನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಬಹಿರಂಗವಾಗಿಯೇ ಆರೋಪಿಸಿದರು.

ದೇಶ ಸೇವೆ ಮಾಡಿದ ಯೋಧನೇ ತನ್ನ ಹಕ್ಕಿನ ದಾಖಲೆಗಾಗಿ ಕಚೇರಿಗಳಿಗೆ ಅಲೆದಾಡುವ ದುಸ್ಥಿತಿ ನಿರ್ಮಾಣವಾಗಿರುವುದು ಆಡಳಿತ ಯಂತ್ರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದ್ದು, ಇಂತಹ ಅಧಿಕಾರಿಗಳ ಮೇಲೆ ನಿಯಂತ್ರಣವಿಲ್ಲದಿರುವುದು ಯಾರ ವೈಫಲ್ಯ ಎಂಬ ಪ್ರಶ್ನೆ ಸ್ಥಳೀಯರಲ್ಲಿ ವ್ಯಾಪಕವಾಗಿ ಎದ್ದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ