LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಟನೆ ಹೆಸರಲ್ಲಿ ಬಿಜೆಪಿಯದ್ದು ಸದಾರಮೆ ನಾಟಕ: ಆರ್.ಅಶೋಕ್‌ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್' ಖಾತೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ನೇರವಾಗಿ ಗುರಿಯಾಗಿಸಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯದ್ದು "ಸದಾರಮೆ ನಾಟಕ" ಹಾಗೂ "ಧರ್ಮ ರಾಜಕಾರಣ" ಎಂದು ಕಟುವಾಗಿ ಟೀಕಿಸಿದ್ದಾರೆ.

ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ

ಟಿ.ನರಸೀಪುರ ಘಟನೆಯನ್ನು ಪ್ರಸ್ತಾಪಿಸಿದ ಪ್ರಿಯಾಂಕ್ ಖರ್ಗೆ, "ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅನುಮತಿ ನೀಡಿದ ರೂಟ್ ಮ್ಯಾಪ್ ಪ್ರಕಾರವೇ ಗಣಪತಿ ಮೆರವಣಿಗೆ ಸಾಗಬೇಕು ಎಂದು ಸೂಚಿಸಿದ್ದರು. ಆದರೆ, ಪೊಲೀಸರ ಈ ಸಾಮಾನ್ಯ ನಿರ್ದೇಶನವನ್ನೇ ನೆಪ ಮಾಡಿಕೊಂಡು ಬಿಜೆಪಿಗರು ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ ವರ್ತಿಸುತ್ತಿದ್ದಾರೆ" ಎಂದು ಕುಟುಕಿದ್ದಾರೆ.

ಹಿಂದುತ್ವದ ವೇಷ ತೊಟ್ಟು ಸದಾರಮೆ ನಾಟಕ

ಪ್ರತಿಭಟನೆಗಾಗಿ ಟಿ.ನರಸೀಪುರಕ್ಕೆ ತೆರಳಿದ ಆರ್. ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, "ಪ್ರತಿಭಟನೆ ಎಂಬ ಸದಾರಮೆ ನಾಟಕ ಮಾಡಲು ಹಿಂದುತ್ವದ ವೇಷ ತೊಟ್ಟು ಟಿ. ನರಸೀಪುರಕ್ಕೆ ತೆರಳುತ್ತಿರುವ ಅಶೋಕ್ ಅವರೇ, ಹಿಂದೆ ನಿಮ್ಮದೇ ಬಾಯಿಂದ ಉದುರಿದ ಅಣಿಮುತ್ತುಗಳನ್ನು ಒಮ್ಮೆ ನೆನಪಿಸಿಕೊಂಡು ಆತ್ಮವಿಮರ್ಶೆ ಮಾಡಿಕೊಳ್ಳಿ. ನೀವೀಗ ಆರಂಭಿಸಿರುವ ಈ ಧರ್ಮ ರಾಜಕಾರಣ ದೊಡ್ಡ ನಾಯಕ ಎನಿಸಿಕೊಳ್ಳುವುದಕ್ಕೋ ಅಥವಾ ಅಭದ್ರತೆಯಲ್ಲಿರುವ ವಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕೋ?" ಎಂದು ನೇರ ಪ್ರಶ್ನೆ ಹಾಕಿದ್ದಾರೆ.

ಪೊಲೀಸರ ಮೇಲಿನ ದರ್ಪ ಸಹಿಸಲ್ಲ: ಖಡಕ್ ಎಚ್ಚರಿಕೆ

ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿರುವ ಪ್ರಿಯಾಂಕ್ ಖರ್ಗೆ, "ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ವಿಷಯದಲ್ಲಿ ಹಾಗೂ ಕೋಮು ಸಂಘರ್ಷವನ್ನು ಹತ್ತಿಕ್ಕುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕರ್ತವ್ಯದಲ್ಲಿರುವ ಪೊಲೀಸರ ಮೇಲೆ ನಿಮ್ಮ ದರ್ಪ ಮತ್ತು ದೌರ್ಜನ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ" ಎಂದು ಆರ್. ಅಶೋಕ್ ಮತ್ತು ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

https://twitter.com/PriyankKharge/status/2099036983997956473

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕಪ್ರತಿಭಟನೆ ಹೆಸರಲ್ಲಿ ಬಿಜೆಪಿಯದ್ದು ಸದಾರಮೆ ನಾಟಕ: ಆರ್.ಅಶೋಕ್‌ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿBREAKING: 'KPSC ರದ್ದು' ಮಾಡಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಮನವಿ: ಸಚಿವ ಈಶ್ವರ ಖಂಡ್ರೆBREAKING: ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬೆಸ್ಕಾಂ: ಈ ನಿಯಮಗಳ ಪಾಲನೆ ಕಡ್ಡಾಯಗಣೇಶ ತುಳಸಿಗೆ ಕೊಟ್ಟ ಶಾಪದ ಕತೆ ಇದು!