LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು : "ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

"ಸರ್ಕಾರ ವತಿಯಿಂದ ಇಂಜಿನಿಯರ್ ದಿನ ಆಚರಿಸುವ ಪ್ರಸ್ತಾವನೆ ನೀಡಿದ್ದು, ನಾನು ಅದಕ್ಕೆ ಸಮ್ಮತಿ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ತಯಾರು ಮಾಡುತ್ತಿದೆ. ಭಾರತದಲ್ಲಿ ಅತಿ ಹೆಚ್ಚು ಇಂಜಿನಿಯರ್ ಇದ್ದು, ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಎಲ್ಲಾ ಇಂಜಿನಿಯರ್ ಗಳು ರಾಜ್ಯದ ಉದ್ದಗಲ ಗಮನಿಸಬೇಕು. ಇದರ ರೂಪುರೇಷೆಗಳನ್ನು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು" ಎಂದು ತಿಳಿಸಿದರು. 

ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು

"ಇಂದು ಇಂಜಿನಿಯರ್ ಗಳ ದಿನವಾಗಿದ್ದು, ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಸರ್ಕಾರದ ಪರವಾಗಿ ಮಾಲಾರ್ಪಣೆ ಮಾಡಲಾಗಿದೆ. ಇಂಜಿನಿಯರ್ ಗಳು ದೇಶದ ಆಸ್ತಿ. ವಿಜ್ಞಾನಿಗಳ ಸಂಶೋಧನೆಗಳನ್ನು ಕಾರ್ಯಗತಗೊಳಿಸುತ್ತಿರುವವರು ಇಂಜಿನಿಯರ್ ಗಳು. ಎಲ್ಲಾ ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು. ವಾಸ್ತುಶಿಲ್ಪದ ಪರಂಪರೆಯಲ್ಲಿ ನಾವು ಇಂಜಿನಿಯರ್ ಗಳನ್ನು ಗುರುತಿಸುತ್ತಿದ್ದೆವು. ಈಗ ಇಂಧನ, ಕಟ್ಟಡ ನಿರ್ಮಾಣ, ಐಟಿ ತಂತ್ರಜ್ಞಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ" ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಫ್ಘಾನಿಸ್ತಾನದಲ್ಲಿ ಕೇರಳದ ಟ್ರಾವೆಲ್ ವ್ಲಾಗರ್ ಅರುಣಿಮಾಗೆ ತಡೆಎಣ್ಣೆ ಪ್ರಿಯರ ಗಮನಕ್ಕೆ: ನಾಳೆಯಿಂದ ಬೆಂಗಳೂರಿನ ಈ ಏರಿಯಾಗಳಲ್ಲಿ 'ಮಧ್ಯ' ಸಿಗಲ್ಲ80% ಡಿಸ್ಕೌಂಟ್ ಕೊಟ್ಟರೂ Amazon, Flipkartಗೆ ಲಾಭ ಹೇಗೆ? ಅಸಲಿ ಲೆಕ್ಕಾಚಾರ ಇಲ್ಲಿದೆ!ವಕೀಲರ ಕಲ್ಯಾಣಕ್ಕೆ ಭರ್ಜರಿ ಕೊಡುಗೆ: 5 ಲಕ್ಷ ರೂ. ವಿಮೆ, ಟ್ಯಾಬ್ಲೆಟ್ ಘೋಷಿಸಿದ ಸಿಎಂ ಯೋಗಿಖರ್ಗೆ ಭೇಟಿಯಾದ ಕ್ರೈಸ್ತ ನಿಯೋಗ: ಮತಾಂತರ ಕಾಯ್ದೆ ರದ್ದತಿ, ಶೇ.1ರಷ್ಟು ಮೀಸಲಾತಿ ಸೇರಿದಂತೆ ಹಲವು ಬೇಡಿಕೆಶಿವಮೊಗ್ಗದಲ್ಲಿ ಹೋಟೆಲ್‌ಗಳ ಮೇಲೆ ಎಸಿ ದಿಢೀರ್ ದಾಳಿ: ನೈರ್ಮಲ್ಯ ಕೊರತೆ ಹಿನ್ನೆಲೆ 'ತನು ಜ್ಯೂಸ್ ಸೆಂಟರ್' ಸೀಜ್ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ, ಅವರದ್ದು ಕೇವಲ ರಾಜಕೀಯ ಮನಸ್ಥಿತಿ : ಸಿಎಂ ವಾಗ್ದಾಳಿBIG NEWS : ಸ್ಥಳೀಯ ಯೂಟ್ಯೂಬರ್ ಗಳಿಗೆ ಧಮ್ಕಿ ಹಾಕಿ ವಿಡಿಯೋ ಡಿಲೀಟ್ ಮಾಡಿಸಿದ ಪಿಐ ಧನಂಜಯ!BREAKING: ಇಂದು ಮಧ್ಯರಾತ್ರಿಯಿಂದ ಸೆ.17ರವರೆಗೆ 'ಬೆಸ್ಕಾಂ ಆನ್ ಲೈನ್ ಸೇವೆ' ಅಲಭ್ಯಪ್ರಜ್ವಲ್ ರೇವಣ್ಣ ಪ್ರಕರಣ ಮುಂದಿಟ್ಟು ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಕೇಂದ್ರ ಸಚಿವ HDK ಗುಡುಗು