LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಹಲ್ಲೆ ; ಸಹಪಾಠಿಯರಿಂದಲೇ ಸಾಥ್‌ !

ಗೆಳೆಯನೊಂದಿಗೆ ಪ್ರೇಮ ಸಂಬಂಧ ಬೆಳೆಸಲು ನಿರಾಕರಿಸಿದ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಇಬ್ಬರು ಸಹಪಾಠಿ ವಿದ್ಯಾರ್ಥಿನಿಯರು ಹಾಗೂ ಅವರ ಇಬ್ಬರು ಸ್ನೇಹಿತರು ಸೇರಿ ಅಮಾನುಷವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ಬೆಳಕಿಗೆ ಬಂದಿದೆ. ಈ ಅಮಾನವೀಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ.

ಆರೋಪಿಗಳಿಗೆ ಪರಿಚಿತನಾಗಿದ್ದ ಯುವಕನೊಂದಿಗೆ ಪ್ರೇಮ ಸಂಬಂಧ ಹಾಗೂ ಆತ್ಮೀಯತೆ ಹೊಂದುವಂತೆ ಆರೋಪಿಗಳು ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಆದರೆ ಆಕೆ ಈ ಪ್ರಸ್ತಾಪವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ನಾಲ್ವರು ಆರೋಪಿಗಳು, ಆಕೆಯನ್ನು ಏಕಾಂತ ಪ್ರದೇಶಕ್ಕೆ ಕರೆದೊಯ್ದು ಸುತ್ತುವರಿದು ಕಪಾಳಮೋಕ್ಷ, ಗುದ್ದುಗಳು ಹಾಗೂ ಕೋಲುಗಳಿಂದ ಮನಬಂದಂತೆ ಥಳಿಸಿದ್ದಾರೆ.

ಹಲ್ಲೆಯ ಸಮಯದಲ್ಲಿ ಆರೋಪಿಗಳು ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಪ್ರಾಣಬೆದರಿಕೆ ಹಾಕುವ ದೃಶ್ಯಗಳು ವೈರಲ್ ಆಗಿರುವ ವಿಡಿಯೋದಲ್ಲಿದೆ. ಅಷ್ಟೇ ಅಲ್ಲದೆ, ಪ್ರೀತಿಸಲು ನಿರಾಕರಿಸಿದ ಯುವಕನಿಗೆ ಮೊಬೈಲ್ ಮೂಲಕ ವಿಡಿಯೋ ಕಾಲ್ ಮಾಡಿ, ಆತನ ಮುಂದೆ ಬಲವಂತವಾಗಿ ಕಾಲಿಗೆ ಬಿದ್ದು ಕ್ಷಮೆಯಾಚಿಸುವಂತೆ ಸಂತ್ರಸ್ತೆಗೆ ಹಿಂಸೆ ನೀಡಿದ್ದಾರೆ. ಈ ಸಂಪೂರ್ಣ ಕೃತ್ಯವನ್ನು ಆರೋಪಿಗಳೇ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಈ ಭೀಕರ ವಿಡಿಯೋ ವೈರಲ್ ಆಗುತ್ತಿದ್ದಂತೆ ಸತ್ನಾ ನಗರದ ಕೊಲ್ಗಾವನ್ ಠಾಣೆಯ ಪೊಲೀಸರು ಸ್ವಯಂಪ್ರೇರಿತರಾಗಿ ಗಮನಹರಿಸಿದ್ದಾರೆ. ಯುವಜನತೆಯಲ್ಲಿ ಪ್ರೇಮ ಸಂಬಂಧಕ್ಕಾಗಿ ಬೆದರಿಕೆ ಹಾಗೂ ದೌರ್ಜನ್ಯ ಎಸಗುವ ಪ್ರವೃತ್ತಿ ಹೆಚ್ಚುತ್ತಿರುವುದಕ್ಕೆ ಈ ಘಟನೆ ಕನ್ನಡಿ ಹಿಡಿದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ವಿಡಿಯೋದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ ಶೀಘ್ರದಲ್ಲೇ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೀಗಿದೆ ಇಂದಿನ ಮಂಗಳೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meetingಮಂಗಳೂರು ನೂತನ ಕೇಂದ್ರ ಕಾರಾಗೃಹದ ಮುಖ್ಯ ಗೋಡೆ ನಿರ್ಮಾಣಕ್ಕೆ ₹10 ಕೋಟಿ ಅನುದಾನಕ್ಕೆ ಸಂಪುಟ ಅನುಮೋದನೆಮತದಾರರ ಕರಡು ಪಟ್ಟಿಯಲ್ಲಿ ಭಾರೀ ಲೋಪ: ಚುನಾವಣಾ ಆಯೋಗಕ್ಕೆ ಬಿಕೆ ಹರಿಪ್ರಸಾದ್ ಪತ್ರಮಂಗಳೂರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್: ಜಲ ಮೆಟ್ರೋ, ಬಂದರು, ರಸ್ತೆ ಯೋಜನೆಗಳಿಗೆ ಸಂಪುಟ ಅಸ್ತು, ಇಲ್ಲಿದೆ ಸಂಪೂರ್ಣ ಹೈಲೈಟ್ಸ್BREAKING: ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ 'ಮಂಗಳೂರು ಜಿಲ್ಲೆ': ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರBIG BREAKING: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆKPSC ನೇಮಕಾತಿ ಅಕ್ರಮದ ಜಾಲ ಭೇದಿಸಿದ CID: 13 ಬೇನಾಮಿ ಖಾತೆಗಳಲ್ಲಿದ್ದ 67 ಲಕ್ಷ ಸೀಜ್!BREAKING : ನಟ ದರ್ಶನ್ ಗೆ ಬಿಗ್ ರಿಲೀಫ್ : ಕ್ರಾಸ್ ಎಕ್ಸಾಮಿನೇಷನ್ ವೇಳೆ, ಖುದ್ದು ಹಾಜರಾತಿಗೆ ಅನುಮತಿ ನೀಡಿದ ಹೈಕೋರ್ಟ್ತೆರವುಗೊಳಿಸಿದ್ದ ಫುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ್ರೆ FIR, ಸಾಮಗ್ರಿ ಜಪ್ತಿ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ