LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆ

ಮಂಗಳೂರು ಕರಾವಳಿ ಭಾಗದ ಜನರಿಗೆ ತ್ವರಿತ ಹಾಗೂ ಸುಲಭವಾಗಿ ನ್ಯಾಯ ಸಿಗುವಂತಾಗಲು ಧಾರವಾಡ ಮತ್ತು ಕಲಬುರಗಿ ಮಾದರಿಯಲ್ಲೇ ಮಂಗಳೂರಿನಲ್ಲೂ ಹೈಕೋರ್ಟ್‌ನ ಶಾಶ್ವತ ಅಥವಾ ಸರ್ಕ್ಯೂಟ್ ಪೀಠ ಸ್ಥಾಪನೆ ಮಾಡಬೇಕು ಎಂದು ಮಂಗಳೂರಿನ ವಕೀಲರ ನಿಯೋಗ ಸರ್ಕಾರವನ್ನು ಒತ್ತಾಯಿಸಿದೆ.

ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆ ವಕೀಲರ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿತು.

ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪುಟದ ಒಪ್ಪಿಗೆಗೆ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಹಾಗೂ ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ಮನೋರಾಜ್ ರಾಜೀವ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ, ದಶಕಗಳಿಂದ ಕರಾವಳಿಯಲ್ಲಿ ಹೈಕೋರ್ಟ್ ಪೀಠಕ್ಕಾಗಿ ಹೋರಾಟ ನಡೆಯುತ್ತಿದ್ದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಗಮನ ಸೆಳೆಯಿತು. ಮಂಗಳೂರಿನಲ್ಲಿ ಪೀಠ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟದ ಅಧಿಕೃತ ಅನುಮೋದನೆ ದೊರಕಿಸಿಕೊಡಬೇಕು ಹಾಗೂ ಅಗತ್ಯ ನ್ಯಾಯಾಂಗ ಮೂಲಸೌಕರ್ಯ ನಿರ್ಮಾಣಕ್ಕೆ ತಕ್ಷಣವೇ ಅನುದಾನ ಒದಗಿಸಬೇಕು ಎಂದು ನಿಯೋಗ ಮನವಿ ಮಾಡಿತು. ಇದರೊಂದಿಗೆ ಮಂಗಳೂರು, ಬಂಟ್ವಾಳ ಹಾಗೂ ಬೆಳ್ತಂಗಡಿ ಭಾಗಗಳಲ್ಲಿ ಅರ್ಧಕ್ಕೆ ನಿಂತಿರುವ ನ್ಯಾಯಾಲಯ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವಂತೆಯೂ ಕೋರಿತು.

ವಕೀಲರ ಬಡಾವಣೆ ಹಾಗೂ ನೆಟ್‌ವರ್ಕ್ ಸಮಸ್ಯೆಗೆ ಪರಿಹಾರದ ಬೇಡಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ವಕೀಲರಿಗೆ ರಿಯಾಯಿತಿ ದರದಲ್ಲಿ ನಿವೇಶನ ಕಲ್ಪಿಸಲು ಸೂಕ್ತ ಸರ್ಕಾರಿ ಜಮೀನು ಮಂಜೂರು ಮಾಡಬೇಕು ಎಂದು ನಿಯೋಗ ಪ್ರತ್ಯೇಕ ಮನವಿ ಸಲ್ಲಿಸಿತು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾದ ಸಂದರ್ಭದಲ್ಲಿ, ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್‌ಗಳಿಂದಾಗಿ ಸುತ್ತಮುತ್ತಲಿನ ಸಾರ್ವಜನಿಕರಿಗೆ ನಿರಂತರವಾಗಿ ಎದುರಾಗುತ್ತಿರುವ ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಯಿತು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು, ಕರಾವಳಿ ಭಾಗದ ವಕೀಲರ ದೀರ್ಘಕಾಲದ ಬೇಡಿಕೆಗಳನ್ನು ಪರಿಶೀಲಿಸಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ನಿಯೋಗದ ಮುಖಂಡ ಮನೋರಾಜ್ ರಾಜೀವ್ ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಅಶ್ವಿನಿ ಕುಮಾರ್ ರೈ, ಸುರೇಶ್ ನಾವೂರ್, ಅರುಣ್ ಬಿ.ಪಿ., ವಿನೋದರ್ ಪೂಜಾರಿ ಹಾಗೂ ಪ್ರವೀಣ್ ಕುಮಾರ್ ಅಡ್ಯಾರ್ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೀಗಿದೆ ಇಂದಿನ ಮಂಗಳೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meetingಮಂಗಳೂರು ನೂತನ ಕೇಂದ್ರ ಕಾರಾಗೃಹದ ಮುಖ್ಯ ಗೋಡೆ ನಿರ್ಮಾಣಕ್ಕೆ ₹10 ಕೋಟಿ ಅನುದಾನಕ್ಕೆ ಸಂಪುಟ ಅನುಮೋದನೆಮತದಾರರ ಕರಡು ಪಟ್ಟಿಯಲ್ಲಿ ಭಾರೀ ಲೋಪ: ಚುನಾವಣಾ ಆಯೋಗಕ್ಕೆ ಬಿಕೆ ಹರಿಪ್ರಸಾದ್ ಪತ್ರಮಂಗಳೂರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್: ಜಲ ಮೆಟ್ರೋ, ಬಂದರು, ರಸ್ತೆ ಯೋಜನೆಗಳಿಗೆ ಸಂಪುಟ ಅಸ್ತು, ಇಲ್ಲಿದೆ ಸಂಪೂರ್ಣ ಹೈಲೈಟ್ಸ್BREAKING: ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ 'ಮಂಗಳೂರು ಜಿಲ್ಲೆ': ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರBIG BREAKING: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆKPSC ನೇಮಕಾತಿ ಅಕ್ರಮದ ಜಾಲ ಭೇದಿಸಿದ CID: 13 ಬೇನಾಮಿ ಖಾತೆಗಳಲ್ಲಿದ್ದ 67 ಲಕ್ಷ ಸೀಜ್!BREAKING : ನಟ ದರ್ಶನ್ ಗೆ ಬಿಗ್ ರಿಲೀಫ್ : ಕ್ರಾಸ್ ಎಕ್ಸಾಮಿನೇಷನ್ ವೇಳೆ, ಖುದ್ದು ಹಾಜರಾತಿಗೆ ಅನುಮತಿ ನೀಡಿದ ಹೈಕೋರ್ಟ್ತೆರವುಗೊಳಿಸಿದ್ದ ಫುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ್ರೆ FIR, ಸಾಮಗ್ರಿ ಜಪ್ತಿ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ