LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಶೀಘ್ರವೇ 'ರಾಜಕೀಯ ವ್ಯವಹಾರಗಳ ಸಮಿತಿ' ರಚನೆ; ತುಳು ಭಾಷೆ ಸ್ಥಾನಮಾನಕ್ಕೆ ಬಿ.ಕೆ. ಹರಿಪ್ರಸಾದ್ ಸ್ವಾಗತ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷದ ನಡುವೆ ಉತ್ತಮ ಸಮನ್ವಯತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಶೀಘ್ರದಲ್ಲೇ 'ರಾಜಕೀಯ ವ್ಯವಹಾರಗಳ ಸಮಿತಿ' (ಪೊಲಿಟಿಕಲ್ ಅಫೇರ್ಸ್ ಕಮಿಟಿ) ರಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಶನಿವಾರ ನಗರದ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಇತರ ಎಲ್ಲಾ ರಾಜ್ಯಗಳಲ್ಲೂ ರಾಜಕೀಯ ವ್ಯವಹಾರಗಳ ಸಮಿತಿ ಅಸ್ತಿತ್ವದಲ್ಲಿದ್ದು, ಅದೇ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆದಷ್ಟು ಬೇಗ ಈ ಸಮಿತಿ ರಚಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪಕ್ಷದ ಎಲ್ಲಾ ಪ್ರಮುಖ ನಾಯಕರ ಸಲಹೆ-ಸೂಚನೆಗಳನ್ನು ಪಡೆಯಲಾಗುತ್ತಿದ್ದು, ಈ ಪ್ರಕ್ರಿಯೆ ಮುಗಿದ ತಕ್ಷಣ ಸಮಿತಿ ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ನೀಡಿರುವ ಸರ್ಕಾರದ ನಿರ್ಧಾರವನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿದರು. "ಇದು ಬಹುದಿನಗಳ ಬೇಡಿಕೆಯಾಗಿದ್ದು, ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಈ ವಿಚಾರದಲ್ಲಿ ಕೆಲವರು ರಾಜಕಾರಣ ಬೆರೆಸುತ್ತಿರುವುದು ಸರಿಯಲ್ಲ; ಅವರಿಗೆ ತುಳು ಮತ್ತು ಕೊಡವ ಭಾಷೆಗಳ ಐತಿಹಾಸಿಕ ಹಿನ್ನೆಲೆಯ ಅರಿವಿಲ್ಲ," ಎಂದು ಕಿಡಿಕಾರಿದರು.

ತಾನು ಸಂಸದನಾಗಿದ್ದ ಅವಧಿಯಲ್ಲಿಯೇ ತುಳು ಹಾಗೂ ಕೊಡವ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಸಂಸತ್ತಿನಲ್ಲಿ ಚರ್ಚೆ ನಡೆಸಿದ್ದಾಗಿ ಅವರು ನೆನಪಿಸಿಕೊಂಡರು. ಕರಾವಳಿ ಭಾಗದಲ್ಲಿ ಹಲವಾರು ಶ್ರೇಷ್ಠ ಸಾಹಿತಿಗಳು ಹಾಗೂ ಜ್ಞಾನಪೀಠ ಪುರಸ್ಕೃತರಿದ್ದಾರೆ. ತುಳು ಭಾಷೆ ಕೇವಲ ಭಾಷೆಯಲ್ಲ, ಅದೊಂದು ಸಂಸ್ಕೃತಿ. ತುಳುವಿಗೆ ಎರಡನೇ ಭಾಷಾ ಸ್ಥಾನಮಾನ ನೀಡಿರುವುದು ಆ ಎಲ್ಲಾ ಮಹನೀಯರಿಗೆ ನೀಡಿದ ದೊಡ್ಡ ಗೌರವವಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಬಣ್ಣಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೀರ್ಥಹಳ್ಳಿಯ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್.!ಪಾಕಿಸ್ತಾನದಲ್ಲಿ ಇಂಧನ ದರ ಏರಿಕೆ ಖಂಡಿಸಿ ವಿಧಾನಸಭೆಗೆ ಕತ್ತೆಯಲ್ಲಿ ಆಗಮಿಸಿದ ಶಾಸಕರುಒಂದೇ ದಿನ ಕೋಟಿ ರೂ. ಮೌಲ್ಯದ 36 ಐಫೋನ್ ಖರೀದಿ ; ಯುವಕರಿಬ್ಬರ ಕಾರ್ಯಕ್ಕೆ ನೆಟ್ಟಿಗರ ಬೆರಗು !ರೆಜಿನಗರದಲ್ಲೂ ಮಮತಾ ಬಣಕ್ಕೆ ಹಿನ್ನಡೆ: ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ನಾಮಪತ್ರ ವಾಪಸ್; ನಂದಿಗ್ರಾಮ್ ಬೆಳವಣಿಗೆ ಬೆನ್ನಲ್ಲೇ ಮತ್ತೊಂದು ಆಘಾತಹವಾಮಾನ ವೈಪರೀತ್ಯ: ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲಿನ ತಪ್ಪಾದ ಆರೋಪ ಖಂಡಿಸಿದ ಪ್ರಧಾನಿ ಮೋದಿನಕಲಿ ದಾಖಲೆ ಸೃಷ್ಟಿಸಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ: ಬಾಂಗ್ಲಾ ಪ್ರಜೆ ಅರೆಸ್ಟ್ಬೈಕ್ ಸವಾರನ ಹೊಟ್ಟೆ ಹೊಕ್ಕ ಮರದ ಕೊಂಬೆ ; ಒಡಿಶಾದ ಕೇಂದ್ರಪಾರಾದಲ್ಲಿ ಬೆಚ್ಚಿಬೀಳಿಸುವ ದುರಂತ !Electionಗೆ ಟಿಎಂಸಿ ಹೆಸರು ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾಮದುವೆನೇ ಆಗಿಲ್ಲ, ಇವನು ತ್ರಿಪಲ್ ತಲಾಕ್ ಅಂತೆ, ಇವನಿಗೆ ಯಾಕೆ ಬೇಕು? : ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ!BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : KMF ಹಾಲಿನ ದರ ಏರಿಕೆ ಅನಿವಾರ್ಯ ಎಂದ ಸಿಎಂ ಡಿಕೆ ಶಿವಕುಮಾರ್!