LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ದಾಖಲೆ ಸೃಷ್ಟಿಸಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ: ಬಾಂಗ್ಲಾ ಪ್ರಜೆ ಅರೆಸ್ಟ್

ತಿರುವನಂತಪುರಂ: ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾ ಪ್ರಜೆಯನ್ನು ಪೊಲೀಸರು ಬಂಧಿಸಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಬಿಪ್ಲೋಬ್ ಸೊರೆನ್ (32) ಬಂಧಿತ ಬಾಂಗ್ಲಾ ಪ್ರಜೆ. ಈತ ಭಾರತೀಯ ಪ್ರಜೆ ಎಂಬಂತೆ ನಕಲಿ ದಾಖಲೆಗಳನ್ನು ನೀಡಿ ನೌಕಾ ಅಕಾಡೆಮಿಯ ಲಾಂಡ್ರಿ ವಿಭಾಗದಲ್ಲಿ ಗುತ್ತಿಗೆ ನೌಕರನಾಗಿ ಕೆಲಸಕ್ಕೆ ಸೇರಿದ್ದ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಿಪ್ಲೋಬ್ ಸೊರೆನ್ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಕೆಲ ದಿನಗಳಿಂದ ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡ ನೌಕಾಪಡೆಯ ಅಧಿಕಾರಿಗಳು ಆತನ ಮೇಲೆ ನಿಗಾ ಇರಿಸಿದ್ದರು. ನಂತರ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆತನ ಮೊಬೈಲ್‌ ಸಿಕ್ಕ ಮಾಹಿತಿಗಳ ಪ್ರಕಾರ ಆತ ಬಾಂಗ್ಲಾ ಪ್ರಜೆ ಎಂದು ಗೊತ್ತಾಗಿದೆ.

ನೌಕಾಪಡೆಯ ಅಧಿಕಾರಿಗಳು ವಿಚಾರಣೆ ನಡೆಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿದೇಶಿ ಪ್ರಜೆಯೊಬ್ಬ ತನ್ನ ರಾಷ್ಟ್ರೀಯತೆಯ ಗುರುತು ಮುಚ್ಚಿಟ್ಟು, ಸೂಕ್ಷ್ಮ ಪ್ರದೇಶದಲ್ಲಿ ಸುಮಾರು ಒಂದು ವರ್ಷದವರೆಗೆ ಗುತ್ತಿಗೆ ನೌಕರನಾಗಿ ಕೆಲಸ ಮಾಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಗುಪ್ತಚರ ಸಂಸ್ಥೆಗಳಿಂದ ಬಂದ ಮಾಹಿತಿಯ ಆಧಾರದ ಮೇಲೆ ಬಿಪ್ಲೋಬ್ ಸುರೇನ್ ನನ್ನು ಬಂಧಿಸಲಾಗಿದೆ. ಬಾಂಗ್ಲಾದೇಶಿ ಪ್ರಜೆಯು ನಕಲಿ ದಾಖಲೆಗಳನ್ನು ಹೇಗೆ ಪಡೆದ? ಸೂಕ್ಷ್ಮ ರಕ್ಷಣಾ ಸಂಸ್ಥೆಗೆ ಪ್ರವೇಶ ಹೇಗೆ ಗಿಟ್ಟಿಸಿಕೊಂಡ? ಆತನಿಗೆ ಯಾರು ಸಹಾಯ ಮಾಡಿದ್ದರು ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕೇರಳದ ಕ೦ಣ್ಣೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿರುವಾಗಲೇ ನೌಕಾಪಡೆಯಲ್ಲಿ ಸುರೇನ್ ಕೆಲಸ ಮಾಡುತ್ತಿದ್ದ ಬಗ್ಗೆ ವಿಚಾರ ಬೆಳಕಿಗೆ ಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ.!ಭಾರತದಲ್ಲಿನ ಕಾರುಗಳ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳು ಏನು ಅರ್ಥವನ್ನು ಸೂಚಿಸುತ್ತದೆ?ಮೊಟ್ಟೆ ಸಸ್ಯಾಹಾರವೋ – ಮಾಂಸಾಹಾರವೋ ? ಇಲ್ಲಿದೆ ದಶಕಗಳ ಗೊಂದಲಕ್ಕೆ ವಿಜ್ಞಾನ ನೀಡುವ ಸ್ಪಷ್ಟ ಉತ್ತರ !ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ : ಸಿಎಂ ಡಿ.ಕೆ. ಶಿವಕುಮಾರ್ತೀರ್ಥಹಳ್ಳಿಯ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್.!ಪಾಕಿಸ್ತಾನದಲ್ಲಿ ಇಂಧನ ದರ ಏರಿಕೆ ಖಂಡಿಸಿ ವಿಧಾನಸಭೆಗೆ ಕತ್ತೆಯಲ್ಲಿ ಆಗಮಿಸಿದ ಶಾಸಕರುಒಂದೇ ದಿನ ಕೋಟಿ ರೂ. ಮೌಲ್ಯದ 36 ಐಫೋನ್ ಖರೀದಿ ; ಯುವಕರಿಬ್ಬರ ಕಾರ್ಯಕ್ಕೆ ನೆಟ್ಟಿಗರ ಬೆರಗು !ರೆಜಿನಗರದಲ್ಲೂ ಮಮತಾ ಬಣಕ್ಕೆ ಹಿನ್ನಡೆ: ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ನಾಮಪತ್ರ ವಾಪಸ್; ನಂದಿಗ್ರಾಮ್ ಬೆಳವಣಿಗೆ ಬೆನ್ನಲ್ಲೇ ಮತ್ತೊಂದು ಆಘಾತಹವಾಮಾನ ವೈಪರೀತ್ಯ: ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲಿನ ತಪ್ಪಾದ ಆರೋಪ ಖಂಡಿಸಿದ ಪ್ರಧಾನಿ ಮೋದಿನಕಲಿ ದಾಖಲೆ ಸೃಷ್ಟಿಸಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ: ಬಾಂಗ್ಲಾ ಪ್ರಜೆ ಅರೆಸ್ಟ್